ಇಶಾನ್ ಕಿಶನ್ ತಂಡಕ್ಕೆ ಬೇಕು
ನ್ಯೂಜಿಲೆಂಡ್ ವಿರುದ್ಧದ ಪಂದ್ಯಕ್ಕೆ ಟೀಮ್ ಇಂಡಿಯಾದಲ್ಲಿ ಇಶಾನ್ ಕಿಶನ್ ಅವರಿಗೆ ಆಡುವ ಅವಕಾಶ ನೀಡಬೇಕೆಂದು ಸಲ್ಮಾನ್ ಬಟ್ ಹೇಳಿಕೆ ನೀಡಿದ್ದಾರೆ. "ಇಶಾನ್ ಕಿಶನ್ ಉತ್ತಮ ಫಾರ್ಮ್ ಹೊಂದಿದ್ದಾನೆ, ಹೀಗಾಗಿ ಟೀಮ್ ಇಂಡಿಯಾ ಆತನನ್ನು ಸರಿಯಾಗಿ ಸದುಪಯೋಗಪಡಿಸಿಕೊಳ್ಳಬೇಕು ಎಂದು ನಾನು ಹಲವಾರು ದಿನಗಳಿಂದ ಹೇಳುತ್ತಾ ಬಂದಿದ್ದೇನೆ" ಎಂಬ ಹೇಳಿಕೆಯನ್ನು ನೀಡುವುದರ ಮೂಲಕ ನ್ಯೂಜಿಲೆಂಡ್ ವಿರುದ್ಧದ ಪಂದ್ಯಕ್ಕೆ ಇಶಾನ್ ಕಿಶನ್ ಬೇಕು ಎಂಬುದನ್ನು ಸಲ್ಮಾನ್ ಬಟ್ ತಿಳಿಸಿದ್ದಾರೆ.
ರವಿಚಂದ್ರನ್ ಅಶ್ವಿನ್
"ಟೀಮ್ ಇಂಡಿಯಾ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ರವಿಚಂದ್ರನ್ ಅಶ್ವಿನ್ ಅವರಿಗೆ ಆಡುವ ಅವಕಾಶವನ್ನು ನೀಡಬೇಕು. ಆತ ಓರ್ವ ಅತ್ಯುನ್ನತ ಸ್ಪಿನ್ನರ್ ಹಾಗೂ ವಿಕೆಟ್ ಉರುಳಿಸುವಂತಹ ಬೌಲರ್. ಆತನನ್ನು ತಂಡಕ್ಕೆ ಸೇರಿಸಿಕೊಳ್ಳುವುದರಿಂದ ಬ್ಯಾಟಿಂಗ್ ವಿಭಾಗ ಕೂಡ ಬಲಿಷ್ಠವಾಗಲಿದೆ" ಎಂದು ಸಲ್ಮಾನ್ ಬಟ್ ಹೇಳಿದ್ದಾರೆ.
ಹಾರ್ದಿಕ್ ಪಾಂಡ್ಯ ಬದಲು ಶಾರ್ದೂಲ್ ಠಾಕೂರ್
"ನ್ಯೂಜಿಲೆಂಡ್ ವಿರುದ್ಧದ ಪಂದ್ಯಕ್ಕೆ ಹಾರ್ದಿಕ್ ಪಾಂಡ್ಯ ಅಲಭ್ಯರಾದರೆ ಆ ಸ್ಥಾನಕ್ಕೆ ಶಾರ್ದೂಲ್ ಠಾಕೂರ್ ಅವರನ್ನು ಕರೆತರಬೇಕು. ಬೌಲಿಂಗ್ನಲ್ಲಿ ಉತ್ತಮ ಪ್ರದರ್ಶನವನ್ನು ನೀಡುವ ಶಾರ್ದೂಲ್ ಠಾಕೂರ್ ಬ್ಯಾಟಿಂಗ್ನಲ್ಲಿಯೂ ಉತ್ತಮ ಕೊಡುಗೆಯನ್ನು ನೀಡಲಿದ್ದಾರೆ" ಎಂದು ಸಲ್ಮಾನ್ ಬಟ್ ಹೇಳಿದ್ದಾರೆ.
ಹೀಗೆ ಇಂದು ( ಅಕ್ಟೋಬರ್ 31 ) ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯಲಿರುವ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲ್ಲಬೇಕೆಂದರೆ ಈ ಮೂವರು ಆಟಗಾರರು ತಂಡದಲ್ಲಿರಬೇಕೆಂದು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಸಲ್ಮಾನ್ ಬಟ್ ಹೇಳಿದ್ದಾರೆ.