For Quick Alerts
ALLOW NOTIFICATIONS  
For Daily Alerts
 

ಸೆಮಿಫೈನಲ್‌ನಲ್ಲಿ ಆತನನ್ನು ನಿರ್ಲಕ್ಷಿಸಿದ್ದೇ ಭಾರತದ ಸೋಲಿಗೆ ಕಾರಣ; ವೆಂಕಟೇಶ್ ಪ್ರಸಾದ್

T20 World Cup 2022: Former Bowler Venkatesh Prasad Reveals Reason Indias Defeat In Semi-final Against England

ನವೆಂಬರ್ 10ರಂದು ಅಡಿಲೇಡ್ ಓವಲ್‌ನಲ್ಲಿ ನಡೆದ 2022ರ ಐಸಿಸಿ ಟಿ20 ವಿಶ್ವಕಪ್‌ನ ಸೆಮಿಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡವು ಇಂಗ್ಲೆಂಡ್ ವಿರುದ್ಧ 10 ವಿಕೆಟ್‌ಗಳ ಹೀನಾಯವಾಗಿ ಸೋತಿರುವುದು ನಂ.1 ಟಿ20 ತಂಡಕ್ಕೆ ತೀವ್ರ ಮುಜುಗರ ತರಿಸಿದೆ.

ಭಾರತದ ಸೋಲಿಗೆ ಮಾಜಿ ಕ್ರಿಕೆಟಿಗರು ಪ್ರತಿಕ್ರಿಯಿಸುತ್ತಿದ್ದು, ತಂಡದ ಆಯ್ಕೆಯು ಉತ್ತಮವಾಗಿರಲಿಲ್ಲ ಮತ್ತು ಒತ್ತಡದ ಸನ್ನಿವೇಶವನ್ನು ನಿಭಾಯಿಸುವಲ್ಲಿ ಆಟಗಾರರು ವಿಫಲವಾಗಿದ್ದಾರೆ ಎಂದು ಹೇಳಿದ್ದಾರೆ.

ಇದೇ ವೇಳೆ, ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಸೆಮಿಫೈನಲ್‌ನಲ್ಲಿ 10 ವಿಕೆಟ್‌ಗಳ ಅಂತರದಿಂದ ಹೀನಾಯವಾಗಿ ಸೋತಿದ್ದಕ್ಕೆ ಭಾರತದ ಮಾಜಿ ವೇಗದ ಬೌಲರ್ ವೆಂಕಟೇಶ್ ಪ್ರಸಾದ್ ಕೂಡಾ ರೋಹಿತ್ ಶರ್ಮಾ ನಾಯಕತ್ವದ ತಂಡದ ಆಯ್ಕೆಯನ್ನು ಪ್ರಶ್ನಿಸಿದ್ದಾರೆ.

ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಅವರನ್ನು ಪ್ರಮುಖ ಪಂದ್ಯದಲ್ಲಿ ಭಾರತದ ಆಡುವ ಬಳಗದಿಂದ ದೂರವಿಟ್ಟಿದ್ದು ಭಾರತದ ಹಿನ್ನಡೆಗೆ ಕಾರಣವಾಗಿದೆ ಎಂದು ಮಾಜಿ ವೇಗಿ ವೆಂಕಟೇಶ್ ಪ್ರಸಾದ್ ಪಾಯಿಂಟ್ ಮಾಡಿ ತೋರಿಸಿದ್ದಾರೆ.

ಯುಜ್ವೇಂದ್ರ ಚಹಾಲ್ ಒಂದೇ ಒಂದು ಪಂದ್ಯವನ್ನು ಆಡಲಿಲ್ಲ

ಯುಜ್ವೇಂದ್ರ ಚಹಾಲ್ ಒಂದೇ ಒಂದು ಪಂದ್ಯವನ್ನು ಆಡಲಿಲ್ಲ

ಯುಜ್ವೇಂದ್ರ ಚಹಾಲ್‌ಗಿಂತ ರವಿಚಂದ್ರನ್ ಅಶ್ವಿನ್ ಮತ್ತು ಅಕ್ಷರ್ ಪಟೇಲ್ ಅವರಂತಹ ಸ್ಪಿನ್ನರ್‌ಗಳನ್ನು ಆಡಿಸಲಾಯಿತು. 2022ರ ಟಿ20 ವಿಶ್ವಕಪ್‌ನಲ್ಲಿ ಯುಜ್ವೇಂದ್ರ ಚಹಾಲ್ ಒಂದೇ ಒಂದು ಪಂದ್ಯವನ್ನು ಆಡಲಿಲ್ಲ ಎಂಬುದು ಗಮನಿಸಬೇಕಾದ ವಿಷಯವಾಗಿದೆ.

"ಅಡಿಲೇಡ್‌ ಮೈದಾನದಲ್ಲಿ ಮಣಿಕಟ್ಟಿನ ಸ್ಪಿನ್ನರ್‌ಗಳು ಉತ್ತಮವಾಗಿ ಬೌಲ್ ಮಾಡುತ್ತಾರೆ ಎಂಬುದು ಸ್ಪಷ್ಟವಾಗಿದೆ ಮತ್ತು ಭಾರತ ತಂಡವು ಆಯ್ಕೆಯಲ್ಲಿ ಉತ್ತಮವಾಗಿರಲಿಲ್ಲ. ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಅವರನ್ನು ನಿರ್ಲಕ್ಷಿಸಿರುವುದು ಭಾರತಕ್ಕೆ ಹಿನ್ನಡೆಯಾದ ಅಂಶವಾಗಿದೆ. ಇಂಗ್ಲೆಂಡ್ ಗೆಲುವಿಗೆ ಅರ್ಹವಾಗಿದೆ," ವೆಂಕಟೇಶ್ ಪ್ರಸಾದ್ ಟ್ವೀಟ್ ಮಾಡಿದ್ದಾರೆ.

ವಿರಾಟ್ ಕೊಹ್ಲಿ ಮತ್ತು ಹಾರ್ದಿಕ್ ಪಾಂಡ್ಯ ಅರ್ಧಶತಕ

ವಿರಾಟ್ ಕೊಹ್ಲಿ ಮತ್ತು ಹಾರ್ದಿಕ್ ಪಾಂಡ್ಯ ಅರ್ಧಶತಕ

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ಆರಂಭಿಕ ವಿಕೆಟ್‌ಗಳ ನಂತರ ಸಂಕಷ್ಟದಲ್ಲಿತ್ತು. ನಂತರ ವಿರಾಟ್ ಕೊಹ್ಲಿ ಮತ್ತು ಹಾರ್ದಿಕ್ ಪಾಂಡ್ಯ ಅರ್ಧಶತಕಗಳ ನೆರವಿನಿಂದ ಭಾರತ ತಂಡವು ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್‌ಗೆ 168 ರನ್ ಗಳಿಸಿತು.

169 ರನ್‌ಗಳ ಮೊತ್ತ ಬೆನ್ನತ್ತಿದ ಇಂಗ್ಲೆಂಡ್ ತಂಡದ ಆರಂಭಿಕ ಬ್ಯಾಟ್ಸ್‌ಮನ್‌ಗಳಾದ ಜೋಸ್ ಬಟ್ಲರ್ ಮತ್ತು ಅಲೆಕ್ಸ್ ಹೇಲ್ಸ್ ನಾಲ್ಕು ಓವರ್‌ಗಳು ಬಾಕಿ ಇರುವಂತೆಯೇ ಗುರಿಯನ್ನು ಬೆನ್ನಟ್ಟಿತು ಮತ್ತು ಭಾರತಕ್ಕೆ 10 ವಿಕೆಟ್‌ಗಳ ಸೋಲುಣಿಸಿತು. ಇದರಿಂದ ಟಿ20 ವಿಶ್ವಕಪ್ ಆಸೆ ಹೊತ್ತು ಆಸ್ಟ್ರೇಲಿಯಾಗೆ ತೆರಳಿದ್ದ ಭಾರತ ನಿರಾಸೆಯ ಮುಖ ತವರಿಗೆ ಮರಳುವಂತಾಗಿದೆ.

2011ರ ನಂತರ ಭಾರತ ಏನು ಮಾಡಿದೆ ಎಂದ ವಾನ್

2011ರ ನಂತರ ಭಾರತ ಏನು ಮಾಡಿದೆ ಎಂದ ವಾನ್

ಇದೇ ವೇಳೆ ಇಂಗ್ಲೆಂಡ್‌ನ ಮಾಜಿ ನಾಯಕ ಮೈಕೆಲ್ ವಾನ್ ಕೂಡ ದಿ ಟೆಲಿಗ್ರಾಫ್‌ನ ಅಂಕಣದಲ್ಲಿ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಅನುಪಸ್ಥಿತಿಯು ಭಾರತ ತಂಡದ ಸೋಲಿಗೆ ಕಾರಣ ಎಂದು ಹೇಳಿದ್ದಾರೆ. 2011ರಲ್ಲಿ 50 ಓವರ್‌ಗಳ ವಿಶ್ವಕಪ್ ಗೆದ್ದ ನಂತರ ಭಾರತ ಇಲ್ಲಿಯವರೆಗೆ ಏನು ಸಾಧಿಸಿದೆ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ಭಾರತ ತಂಡ 2011ರ ಏಕದಿನ ವಿಶ್ವಕಪ್ ನಂತರ ಯಾವುದೇ ವಿಶ್ವಕಪ್ ಗೆದ್ದಿಲ್ಲ ಮತ್ತು 2013ರಲ್ಲಿ ಚಾಂಪಿಯನ್ಸ್ ಟ್ರೋಫಿ ಗೆದ್ದ ನಂತರ ಯಾವುದೇ ಐಸಿಸಿ ಟ್ರೋಫಿ ಗೆಲ್ಲದಿರುವುದು ನಂಬರ್ ಒನ್ ಶ್ರೀಮಂತ ಕ್ರಿಕೆಟ್ ಮಂಡಳಿ ಬಿಸಿಸಿಐಗೆ ವಿಶ್ವ ಕ್ರಿಕೆಟ್ ಮುಂದೆ ತೀವ್ರ ಮುಜುಗರದ ಸಂಗತಿಯಾಗಿದೆ.

"2011ರ ಏಕದಿನ ವಿಶ್ವಕಪ್ ಗೆದ್ದ ನಂತರ ಭಾರತ ತಂಡ ಈವರೆಗೆ ಏನು ಮಾಡಿದೆ? ಏನೂ ಇಲ್ಲ. ಭಾರತವು ನಿರಂತರವಾಗಿ ವೈಟ್-ಬಾಲ್ ಕ್ರಿಕೆಟ್ ಆಡುತ್ತಿದೆ. ಭಾರತವು ಟಿ20 ಕ್ರಿಕೆಟ್ ಇತಿಹಾಸದಲ್ಲಿ ಅತ್ಯಂತ ಕಡಿಮೆ ಪ್ರದರ್ಶನ ನೀಡಿದ ತಂಡವಾಗಿದೆ. ವಿಶ್ವದ ಪ್ರತಿಯೊಬ್ಬ ಆಟಗಾರ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಆಡುವುದರಿಂದ ಆಟ ಹೇಗೆ ಸುಧಾರಿಸುತ್ತದೆ ಎಂದು ಹೇಳುತ್ತಾರೆ, ಆದರೆ ಭಾರತ ಇದುವರೆಗೆ ಏನನ್ನು ನೀಡಿದೆ?," ಎಂದು ಇಂಗ್ಲೆಂಡ್ ತಂಡದ ಮಾಜಿ ಆಟಗಾರ ಮೈಕೆಲ್ ವಾನ್ ಟೀಕಿಸಿದ್ದಾರೆ.

Story first published: Friday, November 11, 2022, 12:12 [IST]
Other articles published on Nov 11, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+