
ಮಳೆ-ಬಾಧಿತ ಪಂದ್ಯದಲ್ಲಿ ಭಾರತ ಬೌಲರ್ಗಳು 249 ರನ್ ನೀಡಿದರು
ಏತನ್ಮಧ್ಯೆ, ರಾಂಚಿಯಲ್ಲಿ ನಡೆಯಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಏಕದಿನ ಪಂದ್ಯಕ್ಕೆ ಮುಂಚಿತವಾಗಿ ಭಾರತಕ್ಕೆ ದೊಡ್ಡ ಹೊಡೆತ ಬಿದ್ದಿದೆ. ಲಕ್ನೋದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯಕ್ಕೂ ಮುನ್ನ ನಡೆದ ಅಭ್ಯಾಸ ಅವಧಿಯಲ್ಲಿ ವೇಗದ ಬೌಲರ್ ದೀಪಕ್ ಚಹಾರ್ ಪಾದದ ತಿರುಚಿದ ಗಾಯದ ಕಾರಣ ಎರಡು ಮತ್ತು ಮೂರನೇ ಪಂದ್ಯದಲ್ಲಿ ಕಾಣಿಸಿಕೊಳ್ಳುವುದು ಅಸಂಭವವಾಗಿದೆ.
ಲಕ್ನೋದಲ್ಲಿ ಭಾರತ 9 ರನ್ಗಳಿಂದ ಸೋತ ಮೊದಲ ಏಕದಿನ ಪಂದ್ಯವನ್ನು ದೀಪಕ್ ಚಹಾರ್ ಕಳೆದುಕೊಳ್ಳಬೇಕಾಯಿತು ಮತ್ತು 40 ಓವರ್ಗಳ ಮಳೆ-ಬಾಧಿತ ಪಂದ್ಯದಲ್ಲಿ ಭಾರತೀಯ ಬೌಲರ್ಗಳು 249 ರನ್ಗಳನ್ನು ಬಿಟ್ಟುಕೊಟ್ಟರು. ಅಗ್ರ ಕ್ರಮಾಂಕದ ಬ್ಯಾಟಿಂಗ್ ಕೈಕೊಟ್ಟಿದ್ದರಿಂದ ಸಂಜು ಸ್ಯಾಮ್ಸನ್ ಏಕಾಂಗಿ ಹೋರಾಟ ನಡೆಸಿದ ಹೊರತಾಗಿಯೂ ಸೋಲಬೇಕಾಯಿತು.

ದೀಪಕ್ ಚಹಾರ್ ಬದಲಿಗೆ ಮೊಹಮ್ಮದ್ ಶಮಿ ಆಯ್ಕೆ ಸಾಧ್ಯತೆ
ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ ಈಗ 0-1 ಹಿನ್ನಡೆಯಲ್ಲಿದೆ. 30 ವರ್ಷದ ವೇಗಿ ದೀಪಕ್ ಚಹಾರ್ ಟಿ20 ವಿಶ್ವಕಪ್ಗಾಗಿ ಸ್ಟ್ಯಾಂಡ್ಬೈ ಪಟ್ಟಿಯಲ್ಲಿದ್ದರು, ಆದರೆ ಅವರು ಪದೇ ಪದೇ ಗಾಯಕ್ಕೆ ತುತ್ತಾಗುತ್ತಿರುವುದು ಆಯ್ಕೆದಾರರು ಮತ್ತು ಮ್ಯಾನೇಜ್ಮೆಂಟ್ ಕಳವಳವನ್ನು ಹೆಚ್ಚಿಸುತ್ತದೆ. ಹೀಗಾಗಿ ದೀಪಕ್ ಚಹಾರ್ ಬದಲಿಗೆ ಹಿರಿಯ ವೇಗಿ ಮೊಹಮ್ಮದ್ ಶಮಿ ಆಸ್ಟ್ರೇಲಿಯ ವಿಮಾನ ಏರಲಿದ್ದಾರೆ.
ಮೂಲಗಳ ಪ್ರಕಾರ, ಕಳೆದ ವರ್ಷದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಎಡಗೈ ವೇಗಿ ಮುಖೇಶ್ ಚೌಧರಿ, ಚೇತನ್ ಸಕರಿಯಾ ಮತ್ತು ಕುಲದೀಪ್ ಸೇನ್ ಅವರು ಈಗಾಗಲೇ ಆಸ್ಟ್ರೇಲಿಯಾದಲ್ಲಿ ಐಸಿಸಿ ಟಿ20 ವಿಶ್ವಕಪ್ 2022 ಟೂರ್ನಿಗಾಗಿ ಭಾರತ ತಂಡಕ್ಕೆ ನೆಟ್ ಬೌಲರ್ಗಳಾಗಿ ಸೇರಿಕೊಂಡಿದ್ದಾರೆ.

ಟಿ20 ವಿಶ್ವಕಪ್ಗಾಗಿ ಭಾರತದ ಪೂರ್ಣ ತಂಡ
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವಿಚಂದ್ರನ್ ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಸರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಶ್ದೀಪ್ ಸಿಂಗ್
ಸ್ಟ್ಯಾಂಡ್ಬೈ ಆಟಗಾರರು: ಮೊಹಮ್ಮದ್. ಶಮಿ, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್, ದೀಪಕ್ ಚಹಾರ್


Click it and Unblock the Notifications
