
ಭುವನೇಶ್ವರ್ ಕುಮಾರ್ ಮತ್ತು ಹರ್ಷಲ್ ಪಟೇಲ್ ನಡುವೆ ಸ್ಪರ್ಧೆ
ಭಾರತದ ಅತ್ಯುತ್ತಮ ವೇಗದ ಬೌಲಿಂಗ್ ಲೈನ್ ಅಪ್ ಬಗ್ಗೆ ಕೇಳಿದಾಗ ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. "ಭಾರತ ತಂಡ ಎಷ್ಟು ವೇಗದ ಬೌಲರ್ಗಳೊಂದಿಗೆ ಹೋಗುತ್ತಾರೆ ಎಂಬುದರ ಮೇಲೆ ಅದು ಅವಲಂಬಿತವಾಗಿರುತ್ತದೆ. ಏಕೆಂದರೆ ನಿಮ್ಮಲ್ಲಿ ಹಾರ್ದಿಕ್ ಪಾಂಡ್ಯ ಕೂಡ ಇದ್ದಾರೆ. ನಾನು ಅರ್ಶ್ದೀಪ್ ಸಿಂಗ್, ಮೊಹಮ್ಮದ್ ಶಮಿ ಅವರನ್ನು ಮೊದಲೆರಡು ಸ್ಥಾನಕ್ಕೆ ಆಯ್ಕೆ ಮಾಡುತ್ತೇನೆ. ಇನ್ನೊಂದು ಸ್ಥಾನ ಭುವನೇಶ್ವರ್ ಕುಮಾರ್ ಮತ್ತು ಹರ್ಷಲ್ ಪಟೇಲ್ ನಡುವೆ ಇರುತ್ತದೆ ಎಂದು ನಾನು ಭಾವಿಸುತ್ತೇನೆ. ತಂಡ ಏನು ಮಾಡಲು ಬಯಸುತ್ತದೆ ನೋಡಬೇಕು," ಎಂದು ರಾಬಿನ್ ಉತ್ತಪ್ಪ ಇಎಸ್ಪಿಎನ್ಕ್ರಿಕ್ಇನ್ಫೋ ಜೊತೆಗಿನ ಚಾಟ್ನಲ್ಲಿ ಹೇಳಿದರು.
ಭಾರತ ತನ್ನ ಟಿ20 ವಿಶ್ವಕಪ್ ಅಭಿಯಾನವನ್ನು ಅಕ್ಟೋಬರ್ 23ರಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧದ ಪಂದ್ಯದೊಂದಿಗೆ ಪ್ರಾರಂಭಿಸುತ್ತದೆ. ಅದಕ್ಕೂ ಮೊದಲು ಭಾರತ ತಂಡವು ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ವಿರುದ್ಧ ಕ್ರಮವಾಗಿ ಅಕ್ಟೋಬರ್ 17 ಮತ್ತು 19ರಂದು ಎರಡು ಅಭ್ಯಾಸ ಪಂದ್ಯಗಳನ್ನು ಆಡಲಿದೆ.

ಹೇಗೆ ಪ್ರದರ್ಶನ ನೀಡುತ್ತಾರೆ ಎಂಬುದರ ಮೇಲೆ ನಿರ್ಣಾಯಕ
ಎರಡು ಅಭ್ಯಾಸ ಪಂದ್ಯಗಳಲ್ಲಿ ಭಾರತದ ವೇಗದ ಬೌಲರ್ಗಳ ಪ್ರದರ್ಶನವು ಟಿ20 ವಿಶ್ವಕಪ್ನ ಮುಖ್ಯ ಸಮಾರಂಭದಲ್ಲಿ ಆಡುವ ಹನ್ನೊಂದರ ಬಳಗದ ಆಯ್ಕೆಯಲ್ಲಿ ಬಹಳಷ್ಟು ಹೇಳುತ್ತದೆ ಎಂದು ರಾಬಿನ್ ಉತ್ತಪ್ಪ ಅಭಿಪ್ರಾಯಪಟ್ಟಿದ್ದಾರೆ.
"ಅಂತಿಮವಾಗಿ ಆ ವೇಗದ ಬೌಲಿಂಗ್ ಲೈನ್-ಅಪ್ಗೆ ಯಾರು ಹೊಂದಿಕೊಳ್ಳುತ್ತಾರೆ ಎಂಬುದರಲ್ಲಿ ಪ್ರಸ್ತುತ ಫಾರ್ಮ್ ಪಾತ್ರವನ್ನು ವಹಿಸಲಿದೆ ಎಂದು ನಾನು ಭಾವಿಸುತ್ತೇನೆ. ಆ ಮುಂದಿನ ಎರಡು ಅಭ್ಯಾಸ ಪಂದ್ಯಗಳಲ್ಲಿ ಈ ವೇಗದ ಬೌಲರ್ಗಳು ಹೇಗೆ ಪ್ರದರ್ಶನ ನೀಡುತ್ತಾರೆ ಎಂಬುದರ ಮೇಲೆ ನಿರ್ಣಾಯಕವಾಗಿರುತ್ತದೆ," ಎಂದು ಭಾರತದ ಮಾಜಿ ಬ್ಯಾಟರ್ ರಾಬಿನ್ ಉತ್ತಪ್ಪ ಹೇಳಿದರು.

ಐಸಿಸಿ ಟಿ20 ವಿಶ್ವಕಪ್ಗೆ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವಿಚಂದ್ರನ್ ಅಶ್ವಿನ್, ಯುಜ್ವೇಂದ್ರ ಚಹಾಲ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಶ್ದೀಪ್ ಸಿಂಗ್, ಮೊಹಮ್ಮದ್ ಶಮಿ.
ಸ್ಟ್ಯಾಂಡ್ಬೈ ಆಟಗಾರರು: ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್


Click it and Unblock the Notifications












