
ಪರ್ತ್ನಲ್ಲಿ ಎರಡು ಅಭ್ಯಾಸ ಪಂದ್ಯಗಳನ್ನು ಆಡಿದ ನಂತರ, ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ ಶನಿವಾರ ಬ್ರಿಸ್ಬೇನ್ಗೆ ಆಗಮಿಸಿತು. ಟೀಂ ಇಂಡಿಯಾ ಬ್ರಿಸ್ಬೇನ್ನ ಗಬ್ಬಾದಲ್ಲಿ ಕ್ರಮವಾಗಿ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ವಿರುದ್ಧ ಎರಡು ಅಭ್ಯಾಸ ಪಂದ್ಯಗಳನ್ನು ಆಡಲಿದೆ.
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಯು ಟ್ವಿಟ್ಟರ್ನಲ್ಲಿ ಬ್ರಿಸ್ಬೇನ್ಗೆ ಭಾರತ ತಂಡದ ಪ್ರಯಾಣದ ವೀಡಿಯೊವನ್ನು ಪೋಸ್ಟ್ ಮಾಡಿದೆ. ವಿಡಿಯೋದಲ್ಲಿ, ಆಟಗಾರರು ಅಭಿಮಾನಿಗಳಿಗೆ ಶುಭಾಶಯ ಕೋರುವುದನ್ನು ಮತ್ತು ಆಟೋಗ್ರಾಫ್ ನೀಡುವುದನ್ನು ಕಾಣಬಹುದು. 'ಟಚ್ಡೌನ್ ಬ್ರಿಸ್ಬೇನ್' ಎಂದು ಬಿಸಿಸಿಐ ಟ್ವಿಟ್ಟರ್ನಲ್ಲಿ ವಿಡಿಯೋವನ್ನು ಶೀರ್ಷಿಕೆ ಮಾಡಿದೆ.
ಏತನ್ಮಧ್ಯೆ, ಗಾಯಾಳು ಜಸ್ಪ್ರೀತ್ ಬುಮ್ರಾ ಬದಲಿಗೆ ಅನುಭವಿ ವೇಗಿ ಮೊಹಮ್ಮದ್ ಶಮಿ ಭಾರತ ತಂಡದಲ್ಲಿ ಸ್ಥಾನ ಪಡೆಯಲಿದ್ದಾರೆ ಎಂದು ಬಿಸಿಸಿಐ ಶುಕ್ರವಾರ ಪ್ರಕಟಿಸಿದೆ. ಮೊಹಮ್ಮದ್ ಸಿರಾಜ್ ಮತ್ತು ಶಾರ್ದೂಲ್ ಠಾಕೂರ್ ಕೂಡ ಮೀಸಲು ಆಟಗಾರರಾಗಿ ತಂಡಕ್ಕೆ ಸೇರ್ಪಡೆಗೊಂಡರು.
ಗಾಯಗಳ ಹೊರತಾಗಿಯೂ, ಆಟಗಾರರು ಕೈಯಲ್ಲಿದ್ದರೆ ತಂಡವು ಸವಾಲಿಗೆ ಸಿದ್ಧವಾಗಿದೆ ಎಂದು ರೋಹಿತ್ ಶರ್ಮಾ ತಿಳಿಸಿದರು. "ಗಾಯವು ಕ್ರೀಡೆಯ ಒಂದು ಭಾಗವಾಗಿದೆ. ನಾವು ಹಲವಾರು ಪಂದ್ಯಗಳನ್ನು ಆಡಿದರೆ ಗಾಯಗಳು ಸಂಭವಿಸುತ್ತವೆ, ಆದ್ದರಿಂದ ಕಳೆದ ಒಂದು ವರ್ಷದಿಂದ ನಾವು ಬೆಂಚ್ ಸ್ಟ್ರೆಂತ್ ನಿರ್ಮಿಸಬೇಕಾಗಿತ್ತು," ಎಂದು ರೋಹಿತ್ ಶರ್ಮಾ ಮೆಲ್ಬೋರ್ನ್ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಸುದ್ದಿಗಾರರಿಗೆ ತಿಳಿಸಿದರು.
"ನಮ್ಮ ಗಮನ ಬ್ಯಾಕ್ಅಪ್ಗಳನ್ನು ರಚಿಸಲು ಮತ್ತು ಅವರಿಗೆ ಅವಕಾಶವನ್ನು ನೀಡುವುದು. ವಿಶ್ವಕಪ್ನಲ್ಲಿ ನಮ್ಮೊಂದಿಗೆ ಬಂದಿರುವ ಬೌಲರ್ಗಳು ಸಾಕಷ್ಟು ಪಂದ್ಯಗಳನ್ನು ಆಡಿದ್ದಾರೆ".
ಗಮನಾರ್ಹವೆಂದರೆ, ಭಾರತವು 2013ರಲ್ಲಿ ಇಂಗ್ಲೆಂಡ್ನಲ್ಲಿ ಚಾಂಪಿಯನ್ಸ್ ಟ್ರೋಫಿಯನ್ನು ಎತ್ತಿಹಿಡಿದ ನಂತರ ಐಸಿಸಿ ಟ್ರೋಫಿಯನ್ನು ಗೆದ್ದಿಲ್ಲ. ಭಾರತವು ತನ್ನ ಮೊದಲ ಅಭ್ಯಾಸ ಪಂದ್ಯದಲ್ಲಿ ಸೋಮವಾರ ಆಸ್ಟ್ರೇಲಿಯಾವನ್ನು ಆಡಲಿದ್ದು, ಬುಧವಾರ ನ್ಯೂಜಿಲೆಂಡ್ ವಿರುದ್ಧ ಸೆಣಸಲಿದೆ. ಭಾರತವು ಅಕ್ಟೋಬರ್ 23ರಂದು ಮೆಲ್ಬೋರ್ನ್ನಲ್ಲಿ ಪಾಕಿಸ್ತಾನದ ವಿರುದ್ಧ ತಮ್ಮ ಅಭಿಯಾನವನ್ನು ಪ್ರಾರಂಭಿಸಲಿದ್ದಾರೆ.
ಐಸಿಸಿ ಟಿ20 ವಿಶ್ವಕಪ್ಗೆ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವಿಚಂದ್ರನ್ ಅಶ್ವಿನ್, ಯುಜ್ವೇಂದ್ರ ಚಹಾಲ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಶ್ದೀಪ್ ಸಿಂಗ್, ಮೊಹಮ್ಮದ್ ಶಮಿ.
ಸ್ಟ್ಯಾಂಡ್ಬೈ ಆಟಗಾರರು: ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್