ಇದೇ ಜೂನ್ನಲ್ಲಿ ಯುಎಸ್ಎ ಮತ್ತು ವೆಸ್ಟ್ ಇಂಡೀಸ್ ಸಹ-ಆತಿಥ್ಯದಲ್ಲಿ ನಡೆಯಲಿರುವ 2024ರ ಐಸಿಸಿ ಟಿ20 ವಿಶ್ವಕಪ್ ಪಂದ್ಯಾವಳಿಗಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು (ಬಿಸಿಸಿಐ) ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡವನ್ನು ಏಪ್ರಿಲ್ 30ರಂದು ಹೆಸರಿಸಿತು.
ಇದರಲ್ಲಿ ಭಾರತೀಯ ಕ್ರಿಕೆಟ್ ಅಭಿಮಾನಿಗಳ ಅಚ್ಚರಿಗೆ ಕಾರಣವಾಗಿದ್ದು, ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡದ ಸ್ಫೋಟಕ ಬ್ಯಾಟರ್ ಮತ್ತು ಭಾರತ ತಂಡದ ಫಿನಿಶರ್ ರಿಂಕು ಸಿಂಗ್ ಅವರು 15 ಸದಸ್ಯರ ತಂಡದಲ್ಲಿ ಸ್ಥಾನವನ್ನು ಪಡೆಯಲು ವಿಫಲರಾದರು ಮತ್ತು ಅವರನ್ನು ಪ್ರಯಾಣದ ಮೀಸಲು ಆಟಗಾರರನ್ನಾಗಿ ನೇಮಿಸಿದೆ.

ಬಿಸಿಸಿಐನ ಈ ಕ್ರಮವು ವ್ಯಾಪಕ ಟೀಕೆಗೆ ಗುರಿಯಾಗಿದೆ. ಹಲವು ಅಭಿಮಾನಿಗಳು ಮತ್ತು ಕ್ರಿಕೆಟ್ ತಜ್ಞರು 26 ವರ್ಷದ ಆಟಗಾರನನ್ನು ಮುಖ್ಯ ತಂಡದಿಂದ ಕೈಬಿಟ್ಟಿದ್ದನ್ನು ಪ್ರಶ್ನಿಸಿದ್ದಾರೆ.
ಇದೇ ವೇಳೆ ಭಾರತದ ಮಾಜಿ ಕ್ರಿಕೆಟಿಗ ಅಂಬಟಿ ರಾಯುಡು ಅವರು ಭಾರತದ 2019ರ ವಿಶ್ವಕಪ್ ತಂಡದಿಂದ ಹೊರಹಾಕಲ್ಪಟ್ಟಿದ್ದರು. ಇದೀಗ ರಿಂಕು ಸಿಂಗ್ ಅವರ 2024ರ ಟಿ20 ವಿಶ್ವಕಪ್ ತಂಡದಿಂದ ಹೊರಗಿಟ್ಟಿದ್ದಕ್ಕೆ ತಮ್ಮ ಎಕ್ಸ್ (ಟ್ವಿಟ್ಟರ್) ಖಾತೆಯಲ್ಲಿ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
2024ರ ಟಿ20 ವಿಶ್ವಕಪ್ಗೆ ಭಾರತ ತಂಡವನ್ನು ಘೋಷಿಸಿದ ಒಂದು ದಿನದ ನಂತರ, ಭಾರತ ಮತ್ತು ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) ತಂಡದ ಮಾಜಿ ಕ್ರಿಕೆಟಿಗ ಅಂಬಟಿ ರಾಯುಡು ಅವರು ರಿಂಕು ಸಿಂಗ್ ಅವರನ್ನು ಕೈಬಿಟ್ಟಿರುವ ಬಗ್ಗೆ ಬಿಸಿಸಿಐ ವಿರುದ್ಧ ತಮ್ಮ ಅಸಮಾಧಾನವನ್ನು ಹೊರಹಾಕಿದರು.

ಭಾರತದ 2019ರ ಏಕದಿನ ವಿಶ್ವಕಪ್ನಿಂದ ಇದೇ ರೀತಿ ಕೈಬಿಡಲಾಗಿದ್ದ ಅಂಬಟಿ ರಾಯುಡು, ಕಳೆದ ಎರಡು ವರ್ಷಗಳಲ್ಲಿ ಟಿ20 ಪಂದ್ಯಗಳಲ್ಲಿ ಭಾರತ ತಂಡಕ್ಕೆ ರಿಂಕು ಸಿಂಗ್ ಅವರ ಬ್ಯಾಟಿಂಗ್ ಕೊಡುಗೆಯನ್ನು ನೆನಪಿಸಿದರು.
ಕಠಿಣ ಸಂದರ್ಭಗಳಲ್ಲಿ ಮತ್ತು ಡೆತ್ ಓವರ್ಗಳಲ್ಲಿ ಬ್ಯಾಟಿಂಗ್ಗೆ ಬಂದರೂ ಎಡಗೈ ಬ್ಯಾಟರ್ ಹೆಚ್ಚಿನ ಸ್ಟ್ರೈಕ್-ರೇಟ್ಗಳೊಂದಿಗೆ ಭಾರತ ತಂಡಕ್ಕಾಗಿ ಪಂದ್ಯ-ವಿಜೇತ ಪ್ರದರ್ಶನಗಳನ್ನು ನಿರಂತರವಾಗಿ ಆಡುತ್ತಿದ್ದಾರೆ ಎಂದು ಅಂಬಟಿ ರಾಯುಡು ಹೇಳಿದ್ದಾರೆ.
ಸದ್ಯಕ್ಕೆ, ರಿಂಕು ಸಿಂಗ್ ಅವರು ಸದ್ಯ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಆವೃತ್ತಿಯಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿ ಪರ ಆಡುತ್ತಿದ್ದಾರೆ. 26 ವರ್ಷದ ರಿಂಕು ಸಿಂಗ್ ಅವರು ಇದುವರೆಗೆ ಆಡಿದ ಎಂಟು ಇನ್ನಿಂಗ್ಸ್ಗಳಿಂದ 20.50ಕ್ಕಿಂತ ಕಡಿಮೆ ಸರಾಸರಿಯಲ್ಲಿ ಕೇವಲ 123 ರನ್ ಗಳಿಸಿದ್ದಾರೆ.
ಆದಾಗ್ಯೂ, ಕಳೆದ ಆಗಸ್ಟ್ನಲ್ಲಿ ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಚೊಚ್ಚಲ ಪ್ರವೇಶ ಮಾಡಿದ ನಂತರ, ಭಾರತ ತಂಡಕ್ಕಾಗಿ ಡ್ಯಾಶಿಂಗ್ ಎಡಗೈ ಬ್ಯಾಟರ್ 15 ಟಿ20 ಪಂದ್ಯಗಳನ್ನು ಮಾಡಿದ್ದಾರೆ. ಆದರೆ, 2024ರ ಟಿ20 ವಿಶ್ವಕಪ್ಗೆ ಆಯ್ಕೆಯಾದ ಭಾರತ ತಂಡದಲ್ಲಿ ಕಾಣೆಯಾದರು.
ಅಂತಾರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ 89ರ ಅದ್ಭುತ ಸರಾಸರಿಯನ್ನು ಹೊಂದಿರುವ ರಿಂಕು ಸಿಂಗ್ 176ಕ್ಕಿಂತ ಹೆಚ್ಚು ಸ್ಟ್ರೈಕ್ ರೇಟ್ನಲ್ಲಿ ರನ್ ಕಲೆಹಾಕಿದ್ದಾರೆ.
ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶ್ದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ.
ಮೀಸಲು ಆಟಗಾರರು: ಶುಭ್ಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್, ಅವೇಶ್ ಖಾನ್