ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ, ಮುಂಬೈನಿಂದ ಬಂಗಾಳದವರೆಗೆ ಭಾರತೀಯ ಕ್ರಿಕೆಟ್ ಅಭಿಮಾನಿಗಳು 2013ರಿಂದ ಕನಸಾಗಿ ಉಳಿದಿರುವ ಪ್ರತಿಷ್ಠಿತ ಐಸಿಸಿ ಟ್ರೋಫಿಯನ್ನು ಟೀಮ್ ಇಂಡಿಯಾ ಎತ್ತಿ ಹಿಡಿಯುವುದನ್ನು ನೋಡಲು ಸಾಧ್ಯವಿರುವ ಎಲ್ಲಾ ಮಾರ್ಗಗಳನ್ನು ಅನುಸರಿಸುತ್ತಿದ್ದಾರೆ.
ಅದ್ಭುತ ಮತ್ತು ಕಳಪೆ ಪ್ರದರ್ಶನಗಳ ಮೂಲಕ ಭಾರತ ತಂಡದೊಂದಿಗೆ ನಿಂತಿದ್ದ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಂದ ಬೆಂಬಲದ ಉತ್ಸಾಹದ ಪ್ರದರ್ಶನವಾಗುತ್ತಿದೆ. ದೇಶದೆಲ್ಲೆಡೆ ಭಾರತ ತಂಡದ ಗೆಲುವಿಗಾಗಿ ದೇವಸ್ಥಾನಗಳಲ್ಲಿ ಭಾರತದ ಧ್ವಜ ಹಿಡಿದು ಪೂಜೆ-ಪ್ರಾರ್ಥನೆಗಳು ಜೋರಾಗಿ ನಡೆಯುತ್ತಿವೆ.

2007ರ ಟಿ20 ವಿಶ್ವಕಪ್, 2011ರ ಏಕದಿನ ವಿಶ್ವಕಪ್ ಮತ್ತು 2013ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆದ್ದ ನಂತರ, ಭಾರತ ತಂಡವು ಐಸಿಸಿ ಟ್ರೋಫಿ ಬರ ಎದುರಿಸುತ್ತಿದೆ. ಈ ಬಾರಿ ಅದನ್ನು ಸಾಧಿಸಲೇಬೇಕೆಂಬ ಜಿದ್ದಿಗೆ ಬಿದ್ದಿದೆ. ಇನ್ನು ಹರಿಣ ಪಡೆ ಚೊಚ್ಚಲ ಬಾರಿಗೆ ಐಸಿಸಿ ಪ್ರಶಸ್ತಿ ಗೆಲ್ಲಲು ಹವಣಿಸುತ್ತಿದೆ.
ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡವು 2024ರ ಐಸಿಸಿ ಟಿ20 ವಿಶ್ವಕಪ್ ಫೈನಲ್ ಪಂದ್ಯವನ್ನು ತಲುಪಿರುವಾಗ ಮತ್ತು ಮತ್ತೊಮ್ಮೆ ಇತಿಹಾಸ ನಿರ್ಮಿಸುವ ಅಂಚಿನಲ್ಲಿರುವಾಗ ಅಭಿಮಾನಿಗಳ ಉತ್ಸಾಹವು ಮುಗಿಲು ಮುಟ್ಟಿದೆ.

ಉತ್ತರಪ್ರದೇಶದ ಪ್ರಯಾಗ್ರಾಜ್ನಲ್ಲಿ ಅಭಿಮಾನಿಗಳು ಭಾರತ ತಂಡದ ಗೆಲುವಿಗಾಗಿ ಆರತಿ ಬೆಳಗಿದರು. ಟೀಮ್ ಇಂಡಿಯಾ ಅನುಭವಿ ಆಟಗಾರರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರ ಪೋಸ್ಟರ್ಗಳನ್ನು ಪ್ರದರ್ಶಿಸಿದರು. ಅರ್ಚಕರು ಪೂಜೆ ಸಲ್ಲಿಸುತ್ತಿದ್ದಂತೆ ಉತ್ಸಾಹಿ ಅಭಿಮಾನಿಗಳು ತ್ರಿವರ್ಣ ಧ್ವಜ ಹಿಡಿದುಕೊಂಡರು.
ಮತ್ತೊಬ್ಬ ಅಭಿಮಾನಿ ಫೈನಲ್ನಲ್ಲಿ ಭಾರತ ತಂಡದ ಗೆಲುವಿಗಾಗಿ ಪ್ರಾರ್ಥಿಸಲು ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದನು ಮತ್ತು ಆರತಿಗಾಗಿ ರೋಹಿತ್ ಶರ್ಮಾ ಪೋಸ್ಟರ್ ಅನ್ನು ಕೈಯಲ್ಲಿ ಹಿಡಿದಿದ್ದನು.
ಉತ್ತರಪ್ರದೇಶದ ಕಾನ್ಪುರದ ಅನೇಕ ಅಭಿಮಾನಿಗಳು ತಮ್ಮ ಕೈಯಲ್ಲಿ ಟೀಮ್ ಇಂಡಿಯಾದ ಪೋಸ್ಟರ್ಗಳೊಂದಿಗೆ ದೇವಸ್ಥಾನಕ್ಕೆ ಭೇಟಿ ನೀಡಿದರು. ಹೀಗಾಗಿ, 2024ರ ಟಿ20 ವಿಶ್ವಕಪ್ನ ಫೈನಲ್ನಲ್ಲಿ ಭಾರತ ತಂಡವನ್ನು ಹುರಿದುಂಬಿಸಲು ಸಜ್ಜಾಗುತ್ತಿರುವಾಗ ಅಭಿಮಾನಿಗಳಲ್ಲಿ ಜೋಶ್ ಹೆಚ್ಚಾಗಿದೆ.
ಶನಿವಾರ, ಜೂನ್ 29ರಂದು ಬಾರ್ಬಡೋಸ್ನ ಕೆನ್ಸಿಂಗ್ಟನ್ ಓವಲ್ನಲ್ಲಿ 2024ರ ಐಸಿಸಿ ಟಿ20 ವಿಶ್ವಕಪ್ನ ಫೈನಲ್ನಲ್ಲಿ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡವು ಏಡೆನ್ ಮಾರ್ಕ್ರಾಮ್ ನಾಯಕತ್ವದ ದಕ್ಷಿಣ ಆಫ್ರಿಕಾ ತಂಡವನ್ನು ಎದುರಿಸುತ್ತಿದೆ.
ಕಳೆದ ವರ್ಷದಿಂದ ಐಸಿಸಿ ಪಂದ್ಯಾವಳಿಯಲ್ಲಿ ಭಾರತ ತಂಡವು ತಮ್ಮ 3ನೇ ನೇರ ಫೈನಲ್ಗೆ ತಲುಪುವ ಮೂಲಕ ತಮ್ಮ ಪ್ರಶಸ್ತಿಯ ಬರವನ್ನು ಕೊನೆಗೊಳಿಸಲು ಎದುರು ನೋಡುತ್ತಿದೆ. ಈ ಪಂದ್ಯಾವಳಿಯಲ್ಲಿ ಅಜೇಯ ಓಟವನ್ನು ಕಾಯ್ದುಕೊಳ್ಳುವ ಮೂಲಕ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಫೈನಲ್ಗೆ ಬಂದಿವೆ.
ದಕ್ಷಿಣ ಆಫ್ರಿಕಾ ಆಡಿದ ಎಲ್ಲಾ ಎಂಟು ಪಂದ್ಯಗಳನ್ನು ಗೆದ್ದಿದ್ದರೆ, ಭಾರತ ತಂಡವು ಸತತ ಏಳು ಪಂದ್ಯಗಳನ್ನು ಗೆದ್ದಿದೆ ಮತ್ತು ಒಂದು ಪಂದ್ಯ ಮಳೆಯಿಂದ ರದ್ದಾಗಿದೆ.
ಫೈನಲ್ಗೆ ಪ್ರವೇಶಿಸಲು ದಕ್ಷಿಣ ಆಫ್ರಿಕಾ ತಂಡ ಪಂದ್ಯಾವಳಿಯುದ್ದಕ್ಕೂ ಪ್ರಬಲ ಪ್ರದರ್ಶನವನ್ನು ನೀಡಿದರು. ಐಸಿಸಿ ವಿಶ್ವಕಪ್ ಟೂರ್ನಿಯೊಂದರ ಫೈನಲ್ಗೆ ಪ್ರವೇಶಿಸುತ್ತಿರುವುದು ಇದೇ ಮೊದಲ ಬಾರಿಯಾಗಿದೆ.
ಇದೇ ವೇಳೆ ಐಸಿಸಿ ಪಂದ್ಯಾವಳಿಯ ಕೊನೆಯ 2 ಫೈನಲ್ಗಳಲ್ಲಿ ಭಾರತ ಹೃದಯ ವಿದ್ರಾವಕ ಸೋಲನ್ನು ಅನುಭವಿಸಿದೆ ಮತ್ತು ಅಂತಿಮ ಅಡಚಣೆಯನ್ನು ಮೆಟ್ಟಿನಿಲ್ಲಲು ಎದುರು ನೋಡುತ್ತಿದೆ.