
ಏಷ್ಯಾ ಕಪ್ಗೆ ಕಾಡಿತ್ತು ಅನುಭವಿಗಳ ಕೊರತೆ
ಇನ್ನು ಟೀಮ್ ಇಂಡಿಯಾ ಏಷ್ಯಾ ಕಪ್ಗೆ ಕೇವಲ ಮೂವರು ಸ್ಪೆಶಲಿಸ್ಟ್ ವೇಗಿಗಳೊಂದಿಗೆ ಕಣಕ್ಕಿಳಿದಿತ್ತು. ಅನುಭವಿ ಭುವನೇಶ್ವರ್ ಕುಮಾರ್ಗೆ ಯುವ ವೇಗಿಗಳಾದ ಅರ್ಷದೀಪ್ ಸಿಂಗ್ ಹಾಗೂ ಆವೇಶ್ ಖಾನ್ ಸಾಥ್ ನಿಡಿದ್ದರು. ಈ ಪೈಕಿ ಅರ್ಷ್ದೀಪ್ ಸಿಂಗ್ ಅದ್ಭುತ ಪ್ರದರ್ಶನ ನೀಡಿ ಮಿಂಚಿದ್ದರೂ ಆವೇಶ್ ಖಾನ್ ಅವರಿಂದ ನಿರೀಕ್ಷಿತ ಪ್ರದರ್ಶನ ಬಾರಲಿಲ್ಲ. ಈ ಮೂಲಕ ಭಾರತ ತಂಡ ಏಷ್ಯಾ ಕಪ್ನಲ್ಲಿ ಅನುಭವಿಗಳ ಕೊರತೆಯನ್ನು ಎದುರಿಸಿದ್ದ ಸ್ಪಷ್ಟವಾಗಿತ್ತು. ಇದೀಗ ವಿಶ್ವಕಪ್ಗೆ ಬೂಮ್ರಾ ಹಾಗೂ ಹರ್ಷಲ್ ಕಮ್ಬ್ಯಾಕ್ ಮಾಡಿರುವುದು ತಂಡದ ಬಲ ಹೆಚ್ಚಿಸಿರುವುದರಲ್ಲಿ ಅನುಮಾನವಿಲ್ಲ.

ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧ ಸರಣಿ
ಇನ್ನು ವಿಶ್ವಕಪ್ಗೆ ಮುನ್ನ ಭಾರತ ತವರಿನಲ್ಲಿ ಎರಡು ಬಲಿಷ್ಠ ತಂಡಗಳ ವಿರುದ್ಧ ಸೆಣೆಸಾಟ ನಡೆಸುವ ಮೂಲಕ ಈ ವಿಶ್ವಕಪ್ಗೆ ಅಂತಿಮ ಹಂತದ ಸಿದ್ಧತೆ ಮಾಡಿಕೊಳ್ಳಲಿದೆ. ಮೊದಲಿಗೆ ಆಸ್ಟ್ರೇಲಿಯಾ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಆಸ್ಟ್ರೇಲಿಯಾ ಭಾಗಿಯಾಗಲಿದ್ದು ಬಳಿಕ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ಸೆಣೆಸಾಟ ನಡೆಸಲಿದೆ. ನಂತರ ಆಸ್ಟ್ರೇಲಿಯಾಗೆ ವಿಶ್ವಕಪ್ನಲ್ಲಿ ಆಡುವ ಹಿನ್ನಲೆಯಲ್ಲಿ ಪ್ರಯಾಣ ಬೆಳೆಸಲಿದೆ.

ಟಿ20 ವಿಶ್ವಕಪ್ಗೆ ಆಯ್ಕೆಯಾಗಿರುವ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪ ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಆರ್. ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್
ಮೀಸಲು ಆಟಗಾರರು: ಮೊಹಮ್ಮದ್ ಶಮಿ, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್, ದೀಪಕ್ ಚಹಾರ್


Click it and Unblock the Notifications












