ಕೊಹ್ಲಿ ಅಪ್ಪಟ ಸ್ನೇಹಿತರು ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರಿಗಿಲ್ಲ ತಂಡದಲ್ಲಿ ಸ್ಥಾನ
ಹೌದು ಅಕ್ಟೋಬರ್ ತಿಂಗಳಿನಲ್ಲಿ ಆರಂಭವಾಗಲಿರುವ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಪ್ರಕಟಿಸಲಾಗಿರುವ ಭಾರತ ತಂಡದಲ್ಲಿ ವಿರಾಟ್ ಕೊಹ್ಲಿ ಹೊರತುಪಡಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬೇರೆ ಯಾವುದೇ ಆಟಗಾರರಿಗೂ ಕೂಡ ಸ್ಥಾನವನ್ನು ನೀಡಿಲ್ಲ. ಕೊಹ್ಲಿಯ ಅಪ್ಪಟ ಸ್ನೇಹಿತರಿಗೂ ಕೂಡ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಪ್ರಕಟಿಸಲಾಗಿರುವ ತಂಡದಲ್ಲಿ ಸ್ಥಾನ ನೀಡದೆ ತಂಡದಿಂದ ಹೊರಗಿಟ್ಟಿರುವುದು ಸದ್ಯ ಎಲ್ಲರಲ್ಲಿಯೂ ಆಶ್ಚರ್ಯ ಮೂಡಿಸಿದೆ. ಯುಜುವೇಂದ್ರ ಚಹಾಲ್, ಮೊಹಮ್ಮದ್ ಸಿರಾಜ್ ಮತ್ತು ದೇವದತ್ ಪಡಿಕ್ಕಲ್ ಅವರಿಗೆ ಸ್ಥಾನ ನೀಡದೆ ತಂಡದಿಂದ ಕೈಬಿಟ್ಟಿರುವುದು ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ.
ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಪ್ರಕಟವಾಗಿರುವ ಟೀಮ್ ಇಂಡಿಯಾ
ಅಕ್ಟೋಬರ್ ತಿಂಗಳಿನಲ್ಲಿ ಆರಂಭವಾಗಲಿರುವ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಪ್ರಕಟವಾಗಿರುವ ಭಾರತ ತಂಡ ಹೀಗಿದೆ: ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪ ನಾಯಕ), ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರಾಹುಲ್ ಚಹರ್, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ , ಭುವನೇಶ್ವರ್ ಕುಮಾರ್ ಮತ್ತು ಮೊಹಮ್ಮದ್ ಶಮಿ
ಮುಂಬೈ ಇಂಡಿಯನ್ಸ್ ತಂಡದ 6 ಆಟಗಾರರಿಗೆ ತಂಡದಲ್ಲಿ ಸ್ಥಾನ!
ಒಂದೆಡೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಪ್ರತಿನಿಧಿಸುವ ಆಟಗಾರರಲ್ಲಿ ವಿರಾಟ್ ಕೊಹ್ಲಿ ಹೊರತುಪಡಿಸಿ ಬೇರೆ ಯಾವುದೇ ಆಟಗಾರರಿಗೂ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಭಾಗವಹಿಸುವ ತಂಡದಲ್ಲಿ ಸ್ಥಾನವನ್ನು ನೀಡಿಲ್ಲ. ಆದರೆ ಮುಂಬೈ ಇಂಡಿಯನ್ಸ್ ತಂಡವನ್ನು ಪ್ರತಿನಿಧಿಸುವ ಬರೋಬ್ಬರಿ 6 ಆಟಗಾರರಿಗೆ ತಂಡದಲ್ಲಿ ಸ್ಥಾನವನ್ನು ನೀಡಲಾಗಿದ್ದು ಉತ್ತಮ ಪ್ರದರ್ಶನ ನೀಡಿದರೆ ಟೀಮ್ ಇಂಡಿಯಾದಲ್ಲಿ ಸ್ಥಾನ ಸಿಗುತ್ತದೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಮುಂಬೈ ಇಂಡಿಯನ್ಸ್ ತಂಡವನ್ನು ಪ್ರತಿನಿಧಿಸುವ ಈ ಆಟಗಾರರು ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ತಮಗೆ ಸಿಕ್ಕ ಅವಕಾಶವನ್ನು ಸರಿಯಾಗಿ ಬಳಸಿಕೊಂಡು ಉತ್ತಮ ಪ್ರದರ್ಶನವನ್ನು ನೀಡಿ ಇದೀಗ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಸ್ಥಾನವನ್ನು ಗಿಟ್ಟಿಸಿಕೊಂಡಿದ್ದಾರೆ.
ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಪ್ರಕಟಿಸಲಾಗಿರುವ ಭಾರತ ತಂಡದಲ್ಲಿ ಸ್ಥಾನ ಪಡೆದುಕೊಂಡಿರುವ ಮುಂಬೈ ಇಂಡಿಯನ್ಸ್ ಆಟಗಾರರ ಪಟ್ಟಿ: ಮುಂಬೈ ಇಂಡಿಯನ್ಸ್ ತಂಡದ 6 ಆಟಗಾರರ ಪಟ್ಟಿ ಇಲ್ಲಿದೆ: ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶಾನ್, ಹಾರ್ದಿಕ್ ಪಾಂಡ್ಯ, ರಾಹುಲ್ ಚಹರ್ ಮತ್ತು ಜಸ್ಪ್ರೀತ್ ಬುಮ್ರಾ