For Quick Alerts
ALLOW NOTIFICATIONS  
For Daily Alerts
 

T20 World Cup: ವಿರಾಟ್ ಕೊಹ್ಲಿ ಅಲ್ಲ, ಈತ ನಂ.3ರಲ್ಲಿ ಬ್ಯಾಟಿಂಗ್ ಮಾಡುವುದು ಸೂಕ್ತ; ಮಾಜಿ ಕ್ರಿಕೆಟಿಗ

T20 World Cup: Not Virat Kohli, Suryakumar Yadav Should Bat At No.3 Says Rohan Gavaskar

ಮುಂದಿನ ತಿಂಗಳು ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ 2022ರಲ್ಲಿ ರೋಹಿತ್ ಶರ್ಮಾ ಅವರು ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ಅಕ್ಟೋಬರ್‌ನಲ್ಲಿ ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ (ಎಂಸಿಜಿ) ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಭಾರತ ತನ್ನ ವಿಶ್ವಕಪ್ ಅಭಿಯಾನವನ್ನು ಪ್ರಾರಂಭಿಸಲಿದೆ.

ಸೋಮವಾರ (ಸೆಪ್ಟೆಂಬರ್ 12)ದಂದು ಬಿಸಿಸಿಐ ರಾಷ್ಟ್ರೀಯ ತಂಡದ ಆಯ್ಕೆ ಸಮಿತಿಯು ಟಿ20 ವಿಶ್ವಕಪ್ 2022ಗಾಗಿ 15 ಸದಸ್ಯರ ತಂಡವನ್ನು ಮತ್ತು 4 ಸ್ಟ್ಯಾಂಡ್‌ಬೈ ಆಟಗಾರರನ್ನು ಘೋಷಿಸಿದೆ.

ಇದೇ ವೇಳೆ ಭಾರತದ ಮಾಜಿ ಕ್ರಿಕೆಟಿಗ ರೋಹನ್ ಗವಾಸ್ಕರ್ ಅವರು ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡಕ್ಕಾಗಿ ಸೂರ್ಯಕುಮಾರ್ ಯಾದವ್ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬರಬೇಕು ಎಂದು ಸಲಹೆ ನೀಡಿದ್ದಾರೆ. ಏಷ್ಯಾ ಕಪ್‌ನಲ್ಲಿ ಆರಂಭಿಕ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದಿದ್ದರು ಮತ್ತು ವಿರಾಟ್ ಕೊಹ್ಲಿ ಶತಕ ಬಾರಿಸಿದ ಹಿನ್ನೆಲೆಯಲ್ಲಿ ಗವಾಸ್ಕರ್ ಅವರಿಂದ ಈ ಸಲಹೆಗಳು ಬಂದಿದೆ.

ಸೂರ್ಯಕುಮಾರ್ ಯಾದವ್ ಒಂದು ಸ್ಥಾನ ಮೇಲಕ್ಕೆ ಬರಬೇಕು

ಸೂರ್ಯಕುಮಾರ್ ಯಾದವ್ ಒಂದು ಸ್ಥಾನ ಮೇಲಕ್ಕೆ ಬರಬೇಕು

"ಏಷ್ಯಾ ಕಪ್‌ನಲ್ಲಿ ಭಾರತದ ಅಂತಿಮ ಪಂದ್ಯದಲ್ಲಿ ಅಫ್ಘಾನಿಸ್ತಾನ ವಿರುದ್ಧ ವಿರಾಟ್ ಕೊಹ್ಲಿ ಅಬ್ಬರದ ಶತಕ ಬಾರಿಸಿದರು ಮತ್ತು ಕೇವಲ 61 ಎಸೆತಗಳಲ್ಲಿ ಅಜೇಯ 122 ರನ್‌ಗಳನ್ನು ಕಲೆ ಹಾಕುವಲ್ಲಿ ಯಶಸ್ವಿಯಾದರು. ವಿರಾಟ್ ಕೊಹ್ಲಿ ಬ್ಯಾಟಿಂಗ್ ಇನ್ನಿಂಗ್ಸ್ ತೆರೆಯಲು ಭಾರತ ಬಯಸಿದರೆ ಸೂರ್ಯಕುಮಾರ್ ಯಾದವ್ ಬ್ಯಾಟಿಂಗ್ ಕ್ರಮಾಂಕದಲ್ಲಿ ಒಂದು ಸ್ಥಾನ ಮೇಲಕ್ಕೆ ಬಂದು ಬ್ಯಾಟ್ ಮಾಡಲು ಇದು ಅವಕಾಶ ನೀಡುತ್ತದೆ," ಎಂದು ಮಾಜಿ ಕ್ರಿಕೆಟಿಗ ರೋಹನ್ ಗವಾಸ್ಕರ್ ಸಲಹೆ ನೀಡಿದರು.

ವಿರಾಟ್ ಕೊಹ್ಲಿ ಆರಂಭಿಕರಾಗಿ ಯಶಸ್ಸು

ವಿರಾಟ್ ಕೊಹ್ಲಿ ಆರಂಭಿಕರಾಗಿ ಯಶಸ್ಸು

"ಇದು ಆಯ್ಕೆಗಳನ್ನು ತೆರೆಯುತ್ತದೆ ಮತ್ತು ನೀವು ಹೇಳಿದ್ದು ಸರಿ, ಸೂರ್ಯಕುಮಾರ್ ಯಾದವ್ 3ನೇ ಸ್ಥಾನದಲ್ಲಿ ಬ್ಯಾಟಿಂಗ್ ಮಾಡುವುದು ಸಂತೋಷದ ಆಲೋಚನೆಯಾಗಿದೆ. ಆದರೆ ವಿರಾಟ್ ಕೊಹ್ಲಿ ಓಪನಿಂಗ್ ಮಾಡಿದರೆ ನಾನು ಹೇಳಲೇಬೇಕು, ಅವರು ಆರಂಭಿಕರಾಗಿ ಎಂತಹ ಅದ್ಭುತ ಯಶಸ್ಸನ್ನು ತೋರಿಸಿದರು," ಎಂದು ರೋಹನ್ ಗವಾಸ್ಕರ್ ಸ್ಪೋರ್ಟ್ಸ್ 18ನಲ್ಲಿ ಹೇಳಿದರು.

ವಿರಾಟ್ ಕೊಹ್ಲಿ ಓಪನಿಂಗ್ ಮಾಡುತ್ತಾರೆಂದರೆ ಭಾರತದ ಉಪನಾಯಕ ಕೆಎಲ್ ರಾಹುಲ್ ಕ್ರಮಾಂಕವನ್ನು ಕೆಳಗಿಳಿಸಬೇಕಾಗುತ್ತದೆ ಅಥವಾ ಆಡುವ 11ರ ಬಳಗದಿಂದ ಸಂಪೂರ್ಣವಾಗಿ ಹೊರಗುಳಿಯಬೇಕಾಗುತ್ತದೆ ಎಂದು ತಿಳಿಸಿದರು.

ಈತ ಟಿ20 ಕ್ರಿಕೆಟ್‌ನಲ್ಲಿ ಅತ್ಯುತ್ತಮ ಬ್ಯಾಟರ್‌ಗಳಲ್ಲಿ ಒಬ್ಬರು

ಈತ ಟಿ20 ಕ್ರಿಕೆಟ್‌ನಲ್ಲಿ ಅತ್ಯುತ್ತಮ ಬ್ಯಾಟರ್‌ಗಳಲ್ಲಿ ಒಬ್ಬರು

"ಇದರರ್ಥ ನನ್ನ ನೆಚ್ಚಿನ ಆಟಗಾರರಲ್ಲಿ ಒಬ್ಬರು ದಾರಿ ಮಾಡಿಕೊಡಬೇಕಾಗುತ್ತದೆ, ಅದು ಕೆಎಲ್ ರಾಹುಲ್. ನಾನು ಇದನ್ನು ಮೊದಲೇ ಹೇಳಿದ್ದೇನೆ, ಅವರು ಸಂಪೂರ್ಣ ಕ್ಲಾಸ್ ಆಟಗಾರ. ಇದು ಟ್ರಿಕಿ ರೀತಿಯ ಸನ್ನಿವೇಶಗಳಲ್ಲಿ ಒಂದಾಗಿದೆ, ಆದರೆ 3ನೇ ಸ್ಥಾನದಲ್ಲಿ ಸೂರ್ಯಕುಮಾರ್ ಯಾದವ್ ಅವರು ನಮಗೆ ಬೇಕು ಎಂದು ನಾನು ಭಾವಿಸುತ್ತೇನೆ. ಅವರು ಟಿ20 ಕ್ರಿಕೆಟ್‌ನಲ್ಲಿ ಅತ್ಯುತ್ತಮ ಬ್ಯಾಟರ್‌ಗಳಲ್ಲಿ ಒಬ್ಬರು," ಎಂದು ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಅವರು ಪುತ್ರನೂ ಆಗಿರುವ ರೋಹನ್ ಗವಾಸ್ಕರ್ ಅಭಿಪ್ರಾಯಪಟ್ಟರು.

ಐದು ಬದಲಾವಣೆಗಳನ್ನು ಒಳಗೊಂಡಿರುವ ಟಿ20 ವಿಶ್ವಕಪ್‌ಗೆ ಭಾರತ ತನ್ನ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಯುಎಇಯಲ್ಲಿ ನಡೆದ ಟೂರ್ನಮೆಂಟ್‌ನ ಕೊನೆಯ ಆವೃತ್ತಿಯಿಂದ ಭಾರತವು ತಮ್ಮ ಬೌಲಿಂಗ್ ದಾಳಿಯನ್ನು ಕೂಲಂಕಷವಾಗಿ ಪರಿಶೀಲಿಸಿದೆ ಮತ್ತು ಯುಜ್ವೇಂದ್ರ ಚಾಹಲ್, ಅರ್ಷ್‌ದೀಪ್ ಸಿಂಗ್ ಮತ್ತು ಗಾಯದಿಂದ ಚೇತರಿಸಿಕೊಂಡಿರುವ ಜಸ್ಪ್ರೀತ್ ಬುಮ್ರಾ ಹಾಗೂ ಹರ್ಷಲ್ ಪಟೇಲ್‌ರನ್ನು ಸೇರಿಸಿಕೊಂಡಿದೆ.

ಟಿ20 ವಿಶ್ವಕಪ್‌ಗೆ ಭಾರತ ತಂಡ ಪ್ರಕಟ

ಟಿ20 ವಿಶ್ವಕಪ್‌ಗೆ ಭಾರತ ತಂಡ ಪ್ರಕಟ

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್-ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್-ಕೀಪರ್), ಹಾರ್ದಿಕ್ ಪಾಂಡ್ಯ, ಆರ್. ಅಶ್ವಿನ್, ಯುಜ್ವೇಂದ್ರ ಚಹಾಲ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.

ಸ್ಟ್ಯಾಂಡ್‌ಬೈ ಆಟಗಾರರು: ಮೊಹಮ್ಮದ್. ಶಮಿ, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್, ದೀಪಕ್ ಚಹಾರ್.

Story first published: Tuesday, September 13, 2022, 20:38 [IST]
Other articles published on Sep 13, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+