ಮೀಸಲು ಆಟಗಾರರ ಪ್ರಯಾಣ
ಟಿ20 ವಿಶ್ವಕಪ್ನಿಂದ ಜಸ್ಪ್ರೀತ್ ಬುಮ್ರಾ ಹೊರಗುಳಿದಿರುವುದರಿಂದ, ಬಿಸಿಸಿಐ ಇನ್ನೂ ಬದಲಿ ಆಟಗಾರನನ್ನು ಹೆಸರಿಸಿಲ್ಲ. ಮೀಸಲು ಆಟಗಾರರು ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಆಡುತ್ತಿದ್ದು ಸರಣಿ ಮುಕ್ತಾಯವಾದ ನಂತರ ಆಸ್ಟ್ರೇಲಿಯಾಕ್ಕೆ ಪ್ರಯಾಣಿಸಲಿದ್ದಾರೆ.
ಮೀಸಲು ಆಟಗಾರರು ಇಲ್ಲದಿದ್ದರೂ, ಟೀಂ ಇಂಡಿಯಾ ನೆಟ್ ಬೌಲರ್ ಗಳ ಜೊತೆ ಪ್ರಯಾಣ ಮಾಡಲಿದೆ. ಪರ್ತ್ನ ಡಬ್ಲ್ಯೂಎಸಿಎ ಶಿಬಿರದಲ್ಲಿ ಟೀಂ ಇಂಡಿಯಾ ನೆಟ್ ಬೌಲರ್ ಗಳ ಜೊತೆ ಅಭ್ಯಾಸ ಮಾಡಲಿದೆ.
ಮತ್ತೊಮ್ಮೆ ಎಡವಿದ ವಿಂಡೀಸ್: 2ನೇ ಟಿ20 ಪಂದ್ಯದಲ್ಲಿಯೂ ಗೆದ್ದು ಬೀಗಿದ ಆಸ್ಟ್ರೇಲಿಯಾ
ಆಸ್ಟ್ರೇಲಿಯಾ ಪರಿಸ್ಥಿತಿಗೆ ಹೊಂದಿಕೊಳ್ಳಲು ಸಹಾಯ
ಟಿ20 ವಿಶ್ವಕಪ್ ಆರಂಭದ ವೇಳೆಗೆ ಅಲ್ಲಿನ ಪರಿಸ್ಥಿತಿಗೆ ಹೊಂದಿಕೊಳ್ಳುವ ಉದ್ದೇಶದಿಂದ ಟೀಂ ಇಂಡಿಯಾ ಅವಧಿಗೂ ಮುನ್ನವೇ ಆಸ್ಟ್ರೇಲಿಯಾಕ್ಕೆ ಪ್ರಯಾಣ ಬೆಳೆಸಿದೆ.
"ಬಹಳಷ್ಟು ಆಟಗಾರರು ಆಸ್ಟ್ರೇಲಿಯಾಕ್ಕೆ ಹೋಗಿಲ್ಲ. ಅದಕ್ಕಾಗಿಯೇ ನಾವು ಆಸ್ಟ್ರೇಲಿಯಾಗೆ ಮೊದಲೇ ಬಂದಿದ್ದೇವೆ. ಪರ್ತ್ನಲ್ಲಿ ಬೌನ್ಸಿ ಪಿಚ್ಗಳಲ್ಲಿ ಅಭ್ಯಾಸ ಮಾಡುತ್ತೇವೆ. ಕೇವಲ 7-8 ಆಟಗಾರರು ಮಾತ್ರ ಆಸ್ಟ್ರೇಲಿಯಾದಲ್ಲಿ ಈ ಮೊದಲು ಆಡಿದ್ದಾರೆ. ನಾವು ಪಶ್ಚಿಮ ಆಸ್ಟ್ರೇಲಿಯಾದಲ್ಲಿ ಒಂದೆರಡು ಅಭ್ಯಾಸ ಪಂದ್ಯಗಳನ್ನು ಆಯೋಜಿಸಿದ್ದೇವೆ ಜೊತೆಗೆ ಎರಡು ಐಸಿಸಿ ಅಭ್ಯಾಸ ಪಂದ್ಯಗಳಿವೆ" ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.
ಬೌಲಿಂಗ್ ಮತ್ತು ಫೀಲ್ಡಿಂಗ್ನಲ್ಲಿ ಸುಧಾರಣೆ ಕಾಣಬೇಕು
ಪ್ರಮುಖ ಬೌಲರ್ ಬುಮ್ರಾ ಗಾಯಗೊಂಡು ಟೂರ್ನಿಯಿಂದ ಹಿಂದೆ ಸರಿದಿರುವುದು ಭಾರತಕ್ಕೆ ಹಿನ್ನಡೆಯಾಗಿದೆ. ಅದರಲ್ಲೂ ಅಂತಿಮ ಓವರ್ ಗಳಲ್ಲಿ ಭಾರತದ ಬೌಲರ್ ಗಳು ಹೆಚ್ಚಿನ ರನ್ ಬಿಟ್ಟುಕೊಡುತ್ತಿರುವುದು ಕೂಡ ತಲೆನೋವಾಗಿದೆ.
ಇತ್ತೀಚಿನ ಪಂದ್ಯಗಳಲ್ಲಿ ಫೀಲ್ಡಿಂಗ್ ವಿಭಾಗದಲ್ಲೂ ಭಾರತ ತನ್ನ ಸಾಮರ್ಥ್ಯಕ್ಕೆ ತಕ್ಕಂತೆ ಪ್ರದರ್ಶನ ನೀಡುತ್ತಿಲ್ಲ. ಕಳಪೆ ಫೀಲ್ಡಿಂಗ್, ಕ್ಯಾಚ್ಗಳನ್ನು ಕೈಚೆಲ್ಲುವುದನ್ನು ಮಾಡುತ್ತಿದೆ. ಫೀಲ್ಡಿಂಗ್ನಲ್ಲಿ ಕೂಡ ರೋಹಿತ್ ಶರ್ಮಾ ಪಡೆ ಸುಧಾರಣೆ ಕಾಣಬೇಕಿದೆ.
ಯೂಟ್ಯೂಬ್ನಲ್ಲಿ ನೇರಪ್ರಸಾರ
ಪಶ್ಚಿಮ ಆಸ್ಟ್ರೇಲಿಯಾ ವಿರುದ್ಧದ ಭಾರತದ ಅಭ್ಯಾಸ ಪಂದ್ಯಗಳನ್ನು ಪಶ್ಚಿಮ ಆಸ್ಟ್ರೇಲಿಯಾದ ಯೂಟ್ಯೂಬ್ ಚಾನೆಲ್ನಲ್ಲಿ ನೇರಪ್ರಸಾರ ಮಾಡಲಾಗುತ್ತದೆ. ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ವಿರುದ್ಧದ ಭಾರತದ ಅಭ್ಯಾಸ ಪಂದ್ಯಗಳನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ನಲ್ಲಿ ನೇರಪ್ರಸಾರ ಮಾಡಲಾಗುತ್ತದೆ.
ಟಿ20 ವಿಶ್ವಕಪ್ಗೆ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ಆರ್. ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.
ಸ್ಟ್ಯಾಂಡ್ಬೈ ಆಟಗಾರರು: ಮೊಹಮ್ಮದ್ ಶಮಿ, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್, ದೀಪಕ್ ಚಹಾರ್.