ನಾಯಕ ಮತ್ತು ಉಪನಾಯಕನ ಬಳಿ ಚರ್ಚೆ ನಡೆಸಿದ್ದ ಜಯ್ ಶಾ
ಎಂ ಎಸ್ ಧೋನಿಯನ್ನು ದುಬೈನಲ್ಲಿ ಭೇಟಿಯಾದ ಜಯ್ ಶಾ ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಟೀಮ್ ಇಂಡಿಯಾದ ಮಾರ್ಗದರ್ಶಕರಾಗಿ ಕೆಲಸ ನಿರ್ವಹಿಸಲು ಇಚ್ಛಿಸುತ್ತೀರಾ ಎಂದು ಕೇಳಿದಾಗ ಧೋನಿ ಜೈ ಶಾ ಮನವಿಗೆ ಗ್ರೀನ್ ಸಿಗ್ನಲ್ ನೀಡಿದ್ದರು. ಇದಾದ ಕೂಡಲೇ ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಮತ್ತು ಉಪನಾಯಕ ರೋಹಿತ್ ಶರ್ಮಾ ಬಳಿ ಚರ್ಚೆಯನ್ನು ನಡೆಸಿದ ಜಯ್ ಶಾ ಎಂಎಸ್ ಧೋನಿಯವರನ್ನು ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡಕ್ಕೆ ಮಾರ್ಗದರ್ಶಕನನ್ನಾಗಿ ನೇಮಿಸುವ ಕುರಿತು ನಿಮ್ಮ ಅಭಿಪ್ರಾಯವೇನು ಎಂದು ಕೇಳಿದ ಕೂಡಲೇ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಇಬ್ಬರೂ ಎರಡನೇ ಯೋಚನೆಯನ್ನೇ ಮಾಡದೇ ಒಪ್ಪಿಗೆಯನ್ನು ನೀಡಿದ್ದಾರೆ.
ಟೀಮ್ ಇಂಡಿಯಾದ ಕೋಚ್ ರವಿಶಾಸ್ತ್ರಿ ಬಳಿಯೂ ಜಯ್ ಶಾ ಚರ್ಚೆ
ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಮತ್ತು ಉಪನಾಯಕ ರೋಹಿತ್ ಶರ್ಮಾ ಜತೆ ಎಂ ಎಸ್ ಧೋನಿಯನ್ನು ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾಗೆ ಮಾರ್ಗದರ್ಶಕನನ್ನಾಗಿ ನೇಮಿಸುವ ಕುರಿತು ಚರ್ಚಿಸಿ ಒಪ್ಪಿಗೆಯನ್ನು ಪಡೆದ ಜಯ್ ಶಾ ನಂತರ ಭಾರತದ ಹೆಡ್ ಕೋಚ್ ರವಿಶಾಸ್ತ್ರಿ ಬಳಿ ಕೂಡ ಈ ವಿಷಯದ ಕುರಿತಾಗಿ ಚರ್ಚೆಯನ್ನು ನಡೆಸಿದ್ದಾರೆ. ಕೊಹ್ಲಿ ಮತ್ತು ರೋಹಿತ್ ಶರ್ಮಾ ರೀತಿಯೇ ರವಿಶಾಸ್ತ್ರಿ ಕೂಡ ಜಯ್ ಶಾ ಅಭಿಪ್ರಾಯವನ್ನು ಕೇಳಿದ ಕೂಡಲೇ ಒಪ್ಪಿಗೆ ಸೂಚಿಸಿದ್ದಾರೆ.
ಹೀಗೆ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ, ಉಪನಾಯಕ ರೋಹಿತ್ ಶರ್ಮಾ ಮತ್ತು ಹೆಡ್ ಕೋಚ್ ರವಿ ಶಾಸ್ತ್ರಿ ಬಳಿ ಎಂಎಸ್ ಧೋನಿಯನ್ನು ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡಕ್ಕೆ ಮೆಂಟರ್ ಆಗಿ ನೇಮಿಸುವುದರ ಕುರಿತು ಸಕಾರಾತ್ಮಕ ಉತ್ತರಗಳನ್ನು ಪಡೆದ ಜಯ್ ಶಾ ಕೂಡಲೇ ಹೊರಜಗತ್ತಿಗೆ ಆ ವಿಷಯವನ್ನು ತಿಳಿಸಿದ್ದಾರೆ. ನಂತರ ಯಾರೂ ಕೂಡ ಊಹಿಸಲಾಗದಂತಹ ಸುದ್ದಿಯನ್ನು ತಿಳಿದ ಕ್ರಿಕೆಟ್ ಅಭಿಮಾನಿಗಳು ಮತ್ತೊಮ್ಮೆ ಎಂಎಸ್ ಧೋನಿಯನ್ನು ಟೀಮ್ ಇಂಡಿಯಾ ಪಡೆಯಲ್ಲಿ ನೋಡಲು ಉತ್ಸುಕರಾಗಿದ್ದಾರೆ.
ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಆಯ್ಕೆಯಾಗಿರುವ ಟೀಮ್ ಇಂಡಿಯಾ ತಂಡ
ಬಿಸಿಸಿಐ ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಪ್ರಕಟಿಸಿರುವ ಭಾರತ ತಂಡದಲ್ಲಿ ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪ ನಾಯಕ), ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರಾಹುಲ್ ಚಹರ್, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ , ಭುವನೇಶ್ವರ್ ಕುಮಾರ್ ಮತ್ತು ಮೊಹಮ್ಮದ್ ಶಮಿ ಸ್ಥಾನವನ್ನು ಪಡೆದುಕೊಂಡಿದ್ದಾರೆ.