ತಂಡದಲ್ಲಿ ಹೆಚ್ಚಿನ ಆಲ್ ರೌಂಡರ್ ಆಟಗಾರರಿಗೆ ಅವಕಾಶ ನೀಡಬೇಕು
ಟೀಮ್ ಇಂಡಿಯಾ ತಂಡ ಇನ್ನಷ್ಟು ಬಲಿಷ್ಠವಾಗಬೇಕೆಂದರೆ ಹೆಚ್ಚು ಹೆಚ್ಚು ಆಲ್ ರೌಂಡರ್ ಆಟಗಾರರಿಗೆ ಅವಕಾಶವನ್ನು ನೀಡಬೇಕು ಎಂದು ಕಪಿಲ್ ದೇವ್ ಅಭಿಪ್ರಾಯಪಟ್ಟಿದ್ದಾರೆ. ಒಂದು ತಂಡ ಯಶಸ್ವಿಯಾಗಿ ಪಂದ್ಯವನ್ನು ಗೆಲ್ಲುವಲ್ಲಿ ಆಲ್ ರೌಂಡರ್ ಆಟಗಾರರ ಪಾತ್ರ ಪ್ರಮುಖವಾಗಿರುತ್ತದೆ. ಹೀಗಾಗಿ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡನ್ನೂ ಬಲ್ಲ ಆಟಗಾರರಿಗೆ ತಂಡದಲ್ಲಿ ಪ್ರಾಶಸ್ತ್ಯವನ್ನು ನೀಡಬೇಕೆಂದು ಕಪಿಲ್ ದೇವ್ ಅಭಿಪ್ರಾಯಪಟ್ಟಿದ್ದಾರೆ. ತಂಡದಲ್ಲಿ ಇಬ್ಬರು ಆಲ್ ರೌಂಡರ್ ಆಟಗಾರರಿದ್ದಾಗ ಒಬ್ಬ ಆಲ್ ರೌಂಡರ್ ಆಟಗಾರ ಗಾಯದ ಸಮಸ್ಯೆಗೊಳಗಾದರೆ ಮತ್ತೊಬ್ಬ ಆಲ್ ರೌಂಡರ್ ಆಟವಾಡುತ್ತಾನೆ. ಆದರೆ ಒಂದೇ ಸಮಯದಲ್ಲಿ ಇಬ್ಬರೂ ಆಲ್ ರೌಂಡರ್ ಆಟಗಾರರೂ ಕೂಡ ಗಾಯದ ಸಮಸ್ಯೆಗೊಳಗಾದಾಗ ತಂಡ ಇಕ್ಕಟ್ಟಿಗೆ ಸಿಲುಕಿ ನಾಯಕನ ಮೇಲೆ ಒತ್ತಡ ಹೆಚ್ಚಾಗಲಿದೆ ಎಂದು ಕಪಿಲ್ ದೇವ್ ಅಭಿಪ್ರಾಯಪಟ್ಟಿದ್ದಾರೆ.
ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾಗೆ ಬೌಲಿಂಗ್ ಬರಲ್ಲ
ತಂಡದಲ್ಲಿ ಹೆಚ್ಚಿನ ಆಲ್ ರೌಂಡರ್ ಆಟಗಾರರಿಗೆ ಅವಕಾಶವನ್ನು ನೀಡಬೇಕೆಂದು ಅಭಿಪ್ರಾಯವನ್ನು ವ್ಯಕ್ತಪಡಿಸಿರುವ ಕಪಿಲ್ ದೇವ್ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾರನ್ನು ದಿಗ್ಗಜ ಕ್ರಿಕೆಟಿಗರಾದ ಸಚಿನ್ ತೆಂಡೂಲ್ಕರ್ ಮತ್ತು ಸೌರವ್ ಗಂಗೂಲಿ ಜೊತೆ ಹೋಲಿಕೆ ಮಾಡಿದ್ದಾರೆ. ತಂಡದಲ್ಲಿ ಇಬ್ಬರೂ ಆಲ್ ರೌಂಡರ್ ಆಟಗಾರರು ಗಾಯದ ಸಮಸ್ಯೆಗೆ ಒಳಗಾದಾಗ ಈ ಹಿಂದೆ ಆರಂಭಿಕ ಆಟಗಾರರಾಗಿ ಕಣಕ್ಕಿಳಿಯುತ್ತಿದ್ದ ಸಚಿನ್ ತೆಂಡೂಲ್ಕರ್ ಮತ್ತು ಸೌರವ್ ಗಂಗೂಲಿ ಕೆಲವೊಂದಿಷ್ಟು ಓವರ್ ಬೌಲಿಂಗ್ ಮಾಡುವುದರ ಮೂಲಕ ತಂಡದಲ್ಲಿ ಸಮತೋಲನವನ್ನು ತರುತ್ತಿದ್ದರು, ಆದರೆ ಈಗಿರುವ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾಗೆ ತೆಂಡೂಲ್ಕರ್ ಹಾಗೂ ಗಂಗೂಲಿ ರೀತಿ ಬೌಲಿಂಗ್ ಬರುವುದಿಲ್ಲ ಹೀಗಾಗಿ ಹೆಚ್ಚಿನ ಆಲ್ ರೌಂಡರ್ ಆಟಗಾರರಿಗೆ ತಂಡದಲ್ಲಿ ಸ್ಥಾನ ನೀಡಲೇಬೇಕಾದ ಅಗತ್ಯತೆ ಇದೆ ಎಂದು ಕಪಿಲ್ ದೇವ್ ಸಲಹೆ ನೀಡಿದ್ದಾರೆ.
ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಪ್ರಕಟಿಸಲಾಗಿರುವ ಭಾರತ ತಂಡ ಈ ಕೆಳಕಂಡಂತಿದೆ
ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪ ನಾಯಕ), ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರಾಹುಲ್ ಚಹರ್, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ , ಭುವನೇಶ್ವರ್ ಕುಮಾರ್ ಮತ್ತು ಮೊಹಮ್ಮದ್ ಶಮಿ