15 ದಿನಗಳ ಕಾಲ ವಿಶ್ರಾಂತಿ
ಟಿ20 ವಿಶ್ವಕಪ್ ಅಭಿಯಾನ ಮುಕ್ತಾಯದ ನಂತರ ನಾಯಕ ರೋಹಿತ್ ಶರ್ಮಾ, ಕೆಎಲ್ ರಾಹುಲ್ ಮತ್ತು ವಿರಾಟ್ ಕೊಹ್ಲಿ ನ್ಯೂಜಿಲೆಂಡ್ ಸರಣಿಯಿಂದ ವಿಶ್ರಾಂತಿ ಪಡೆದರು. ರೋಹಿತ್ ಶರ್ಮಾ ಮುಂಬೈನಲ್ಲಿ ತಮ್ಮ ಕುಟುಂಬದೊಂದಿದೆ ಕಾಲ ಕಳೆದರು. ಕೆಎಲ್ ರಾಹುಲ್ ತಮ್ಮ ಮದುವೆಗಾಗಿ ಒಂದಷ್ಟು ತಯಾರಿಗಳನ್ನು ಮಾಡಿಕೊಂಡಿದ್ದರು. ಮಾತ್ರವಲ್ಲದೆ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದರು.
ವಿರಾಟ್ ಕೊಹ್ಲಿ ಕೂಡ ಈ ವಿಶ್ರಾಂತಿಯ ಸಮಯವನ್ನು ಕುಟುಂಬಕ್ಕಾಗಿ ಮೀಸಲಿಟ್ಟಿದ್ದರು. ಪತ್ನಿ ಅನುಷ್ಕಾ ಮತ್ತು ಮಗಳ ಜೊತೆ ಕಾಲ ಕಳೆದಿದ್ದಾರೆ.
ಕೋಚ್ ದ್ರಾವಿಡ್ ಮತ್ತು ಸಿಬ್ಬಂದಿಗೆ ಕೂಡ ವಿಶ್ರಾಂತಿ
ವಿಶ್ವಕಪ್ ತಯಾರಿಗಾಗಿ ಸಾಕಷ್ಟು ಶ್ರಮ ಹಾಕಿದ್ದ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಮತ್ತು ಅವರ ಸಹಾಯಕ ಸಿಬ್ಬಂದಿ ಪರಸ್ ಮಾಂಬ್ರೆ ಮತ್ತು ವಿಕ್ರಮ್ ರಾಥೋರ್ ಕೂಡ ವಿಶ್ರಾಂತಿ ಪಡೆದಿದ್ದರು. ಡಿಸೆಂಬರ್ 1ರಂದು ಇವರು ತಂಡವನ್ನು ಸೇರಿಕೊಳ್ಳಲಿದ್ದು ಢಾಕಾಗೆ ಪ್ರಯಾಣಿಸಲಿದ್ದಾರೆ.
ಭಾರತ ತಂಡ ಢಾಕಾಗೆ ಪ್ರಯಾಣಿಸುವ ಮೊದಲು ಕೋಲ್ಕತ್ತಾದಲ್ಲಿ ಅಭ್ಯಾಸ ಶಿಬಿರದಲ್ಲಿ ಪಾಲ್ಗೊಳ್ಳಬೇಕಿತ್ತು. ಆದರೆ, ತಂಡ ಈಗ ಢಾಕಾಗೆ ನೇರವಾಗಿ ತೆರಳಲಿದ್ದು, ಅಲ್ಲೇ ಅಭ್ಯಾಸ ಮಾಡಲು ನಿರ್ಧರಿಸಿದೆ.
ನ್ಯೂಜಿಲೆಂಡ್ನಿಂದ ಢಾಕಾಗೆ ಬರಲಿದೆ ಟೀಂ ಇಂಡಿಯಾ
ವಿರಾಟ್ ಕೊಹ್ಲಿ ಇನ್ನೂ ವಿಶ್ರಾಂತಿ ಪಡೆಯುತ್ತಿದ್ದು, ಸೋಮವಾರದಿಂದ ಅಭ್ಯಾಸ ಮಾಡಲಿದ್ದಾರೆ. ನ್ಯೂಜಿಲೆಂಡ್ನಲ್ಲಿರುವ ಇತರೆ ಆಟಗಾರರು, ಸರಣಿ ಮುಕ್ತಾಯವಾದ ನಂತರ ಅಲ್ಲಿಂದ ನೇರವಾಗಿ ಢಾಕಾಗೆ ಪ್ರಯಾಣ ಮಾಡಲಿದ್ದಾರೆ.
ಶಿಖರ್ ಧವನ್, ಶ್ರೇಯಸ್ ಅಯ್ಯರ್, ರಿಷಬ್ ಪಂತ್, ಇಶಾನ್ ಕಿಶನ್, ವಾಷಿಂಗ್ಟನ್ ಸುಂದರ್ ಮತ್ತು ಶಾರ್ದೂಲ್ ಠಾಕೂರ್ ಢಾಕಾದಲ್ಲಿ ಏಕದಿನ ತಂಡವನ್ನು ಸೇರಿಕೊಳ್ಳಲಿದ್ದಾರೆ. ಅವರು ಡಿಸೆಂಬರ್ 1 ರಂದು ಕ್ರೈಸ್ಟ್ಚರ್ಚ್ನಿಂದ ವಿಮಾನದಲ್ಲಿ ಪ್ರಯಾಣ ಮಾಡಲಿದ್ದಾರೆ. ನ್ಯೂಜಿಲೆಂಡ್ನಲ್ಲಿರುವ ಆಟಗಾರರು ಢಾಕಾದಲ್ಲಿ ಅಭ್ಯಾಸವನ್ನು ಪುನರಾರಂಭಿಸುವ ಮೊದಲು 2 ದಿನಗಳ ವಿರಾಮವನ್ನು ಪಡೆಯುತ್ತಾರೆ.
ಏಕದಿನ ಮತ್ತು ಟೆಸ್ಟ್ ಸರಣಿಗೆ ಟೀಂ ಇಂಡಿಯಾ
ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಶಿಖರ್ ಧವನ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಶ್ರೇಯಸ್ ಅಯ್ಯರ್, ರಾಹುಲ್ ತ್ರಿಪಾಠಿ, ರಿಷಬ್ ಪಂತ್, ಇಶಾನ್ ಕಿಶನ್, ಶಹಬಾಜ್ ಅಹ್ಮದ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ದೀಪಕ್ ಚಹಾರ್, ಕುಲದೀಪ್ ಸೇನ್
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಬ್ ಪಂತ್, ಕೆಎಸ್ ಭರತ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್ , ಕುಲದೀಪ್ ಯಾದವ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್