ನವದೆಹಲಿ, ಜುಲೈ 02 : ಟೀಂ ಇಂಡಿಯಾ ಕೋಚ್ ಆಯ್ಕೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ.
ಜುಲೈ 10ರಂದು ಮುಂಬೈನಲ್ಲಿ ಭಾರತ ಕ್ರಿಕೆಟ್ ತಂಡದ ನೂತನ ಕೋಚ್ ಆಯ್ಕೆಗಾಗಿ ಸಂದರ್ಶನ ನಡೆಯಲಿದೆ ಎಂದು ಕ್ರಿಕೆಟ್ ಸಲಹಾ ಸಮಿತಿ (ಸಿಎಸಿ) ಸದಸ್ಯ ಸೌರವ್ ಗಂಗೂಲಿ ಹೇಳಿದ್ದಾರೆ. ಅಂದೇ ಭಾರತ ತಂಡದ ಕೋಚ್ ಯಾರಾಗಲಿದ್ದಾರೆ ಎನ್ನುವುದ ತಿಳಿದು ಬರುವ ಸಾಧ್ಯತೆಗಳಿವೆ.

ವಿರೇಂದ್ರ ಸೆಹ್ವಾಗ್, ವೆಂಕಟೇಶ್ ಪ್ರಸಾದ್, ರವಿಶಾಸ್ತ್ರಿ, ದೊಡ್ಡ ಗಣೇಶ ಕೋಚ್ ಹುದ್ದೆಗೆ ಅರ್ಜಿ ಹಾಕಿದ್ದು, ರವಿಶಾಸ್ತ್ರಿ ಮತ್ತು ಸೆಹ್ವಾಗ್ ನಡುವೆ ತೀವ್ರ ಪೈಪೋಟಿ ನಡೆದಿದೆ ಎನ್ನಲಾಗಿದೆ.
ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಲು ಜುಲೈ 9 ಕೊನೆಯ ದಿನವಾಗಿದೆ. ಅನಿಲ್ ಕುಂಬ್ಳೆ ದಿಢೀರ್ ರಾಜೀನಾಮೆ ನೀಡಿದ ಬಳಿಕ ಕೋಚ್ ಹುದ್ದೆಗೆ ಭಾರತೀಯ ಕ್ರಿಕೆಟ್ ಮಂಡಳಿ ಎರಡನೇ ಬಾರಿ ಅರ್ಜಿ ಆಹ್ವಾನಿಸಿತ್ತು.