ಟೀಮ್ ಇಂಡಿಯಾಗೆ ಆ ಆಟಗಾರನ ಅನುಪಸ್ಥಿತಿ ಕಾಡಿತು
ದಕ್ಷಿಣ ಆಫ್ರಿಕಾ ನೆಲದಲ್ಲಿ ಟೀಮ್ ಇಂಡಿಯಾ ಒತ್ತಡಕ್ಕೆ ಸಿಲುಕಿ ಹಿನ್ನಡೆ ಅನುಭವಿಸಿತು ಎಂದು ಹೇಳಿಕೆ ನೀಡಿರುವ ಡೇಲ್ ಸ್ಟೇನ್ ಇದಕ್ಕೆ ಕಾರಣ ತಂಡದಲ್ಲಿ ರವೀಂದ್ರ ಜಡೇಜಾ ಇಲ್ಲದೇ ಇದ್ದದ್ದು ಎಂದಿದ್ದಾರೆ. "ಟೀಮ್ ಇಂಡಿಯಾ ಖಂಡಿತವಾಗಿಯೂ ರವೀಂದ್ರ ಜಡೇಜಾರನ್ನು ಮಿಸ್ ಮಾಡಿಕೊಂಡಿದೆ. ಆತನೋರ್ವ ಅತ್ಯದ್ಭುತ ಆಟಗಾರ. ತನ್ನ ಎಡಗೈ ಸ್ಪಿನ್ ಬೌಲಿಂಗ್ನಿಂದ ಆಟವನ್ನು ನಿಯಂತ್ರಿಸಬಲ್ಲ ರವೀಂದ್ರ ಜಡೇಜಾ ಬ್ಯಾಟಿಂಗ್ ವಿಭಾಗದಲ್ಲಿಯೂ ಕೂಡಾ ಕೊಡುಗೆಯನ್ನು ನೀಡುತ್ತಿದ್ದರು" ಎಂದು ಡೇಲ್ ಸ್ಟೇನ್ ಹೇಳಿಕೆ ನೀಡಿದ್ದಾರೆ.
ಟೀಮ್ ಇಂಡಿಯಾಗೆ ಬೌಲಿಂಗ್ ಸಮಸ್ಯೆ ಕಾಡಿತು
ಇನ್ನೂ ಮುಂದುವರೆದು ದಕ್ಷಿಣ ಆಫ್ರಿಕಾ ನೆಲದಲ್ಲಿ ಟೀಮ್ ಇಂಡಿಯಾ ಹಿನ್ನಡೆ ಅನುಭವಿಸಲು ಕಾರಣ ಏನೆಂಬುದರ ಕುರಿತು ಮಾತನಾಡಿರುವ ಡೇಲ್ ಸ್ಟೇನ್ ಟೀಮ್ ಇಂಡಿಯಾಗೆ ಬೌಲಿಂಗ್ ಕೊರತೆ ಹೆಚ್ಚಾಗಿ ಕಾಡಿತು ಎಂದಿದ್ದಾರೆ. ಬೌಲಿಂಗ್ ವಿಭಾಗದಲ್ಲಿ ಜಸ್ಪ್ರೀತ್ ಬೂಮ್ರಾ ಅವರಿಗೆ ಸಾಥ್ ನೀಡುವಂತಹ ಮತ್ತೊಬ್ಬ ಬೌಲರ್ ಅಗತ್ಯತೆ ಇತ್ತು, ಸುಮಾರು 140 - 145 ಕಿಲೋ ಮೀಟರ್ ವೇಗದಲ್ಲಿ ಚೆಂಡನ್ನು ಎಸೆಯಬಲ್ಲ ಬೌಲರ್ನ ಅಗತ್ಯತೆ ತಂಡಕ್ಕಿತ್ತು ಆದರೆ ಅಂತಹ ಸಾಮರ್ಥ್ಯವಿರುವ ಬೌಲರ್ ತಂಡದಲ್ಲಿ ಇಲ್ಲದೇ ಇದ್ದದ್ದು ಟೀಮ್ ಇಂಡಿಯಾಗೆ ಸಮಸ್ಯೆಯಾಯಿತು ಎಂದು ಡೇಲ್ ಸ್ಟೈನ್ ಅಭಿಪ್ರಾಯಪಟ್ಟಿದ್ದಾರೆ.
ಟೀಮ್ ಇಂಡಿಯಾದ ಮುಂದಿನ ಸರಣಿ ಯಾವಾಗ?
ದಕ್ಷಿಣ ಆಫ್ರಿಕಾ ಪ್ರವಾಸವನ್ನು ಕೈಗೊಂಡು ಟೆಸ್ಟ್ ಹಾಗೂ ಏಕದಿನ ಎರಡೂ ಸರಣಿಗಳಲ್ಲಿಯೂ ಸೋತಿರುವ ಟೀಮ್ ಇಂಡಿಯಾ ಫೆಬ್ರವರಿ ತಿಂಗಳಿನಿಂದ ಆರಂಭವಾಗಲಿರುವ ವೆಸ್ಟ್ ಇಂಡೀಸ್ ವಿರುದ್ಧದ ಈ ಕೆಳಕಂಡ ಪಂದ್ಯಗಳಲ್ಲಿ ಭಾಗವಹಿಸಲಿದೆ.
ಮೊದಲನೇ ಏಕದಿನ ಪಂದ್ಯ: ಫೆಬ್ರವರಿ 6ಕ್ಕೆ ಅಹ್ಮದಾಬಾದ್ ನಗರದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ
ದ್ವಿತೀಯ ಏಕದಿನ ಪಂದ್ಯ: ಫೆಬ್ರವರಿ 9ಕ್ಕೆ ಜೈಪುರದ ಸವಾಯ್ ಮಾನ್ ಸಿಂಗ್ ಕ್ರೀಡಾಂಗಣ
ತೃತೀಯ ಏಕದಿನ ಪಂದ್ಯ: ಫೆಬ್ರವರಿ 12ಕ್ಕೆ ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ
ಪ್ರಥಮ ಟಿ ಟ್ವೆಂಟಿ ಪಂದ್ಯ: ಫೆಬ್ರವರಿ 15ಕ್ಕೆ, ಬರಬತಿ ಕ್ರೀಡಾಂಗಣ, ಕಟಕ್
ದ್ವಿತೀಯ ಟಿ ಟ್ವೆಂಟಿ ಪಂದ್ಯ: ಫೆಬ್ರವರಿ 18ಕ್ಕೆ ವೈ ಎಸ್ ರಾಜಶೇಖರ ರೆಡ್ಡಿ ಕ್ರೀಡಾಂಗಣ, ವಿಶಾಖಪಟ್ಟಣ
ತೃತೀಯ ಟಿ ಟ್ವೆಂಟಿ ಪಂದ್ಯ: ಫೆಬ್ರವರಿ 20, ತಿರುವನಂತಪುರಂನ ಗ್ರೀನ್ ಫೀಲ್ಡ್ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ