For Quick Alerts
ALLOW NOTIFICATIONS  
For Daily Alerts
 

ಟ್ರಿನಿಡಾಡ್‌ಗೆ ಬಂದಿಳಿದ ಧವನ್ ನೇತೃತ್ವದ ತಂಡ: ಮತ್ತೊಂದು ಸರಣಿ ವಿಜಯದ ಮೇಲೆ ಕಣ್ಣಿಟ್ಟ ಭಾರತ

Team India ODI squad arrived in Trinidad for three match ODI series against West Indies

ಇಂಗ್ಲೆಂಡ್ ವಿರುದ್ಧದ ಪ್ರವಾಸದಲ್ಲಿ ಅದ್ಭುತ ಜಯ ಸಾಧಿಸಿರುವ ಭಾರತ ತಂಡ ಇದೀಗ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ಸಜ್ಜಾಗಿದೆ. ಮೊದಲಿಗೆ ಏಕದಿನ ಸರಣಿ ಆಯೋಜನೆಯಾಗಲಿದ್ದು ಈ ಸರಣಿಯಲ್ಲಿ ಭಾಗಿಯಾಗಲಿರುವ ಶಿಖರ್ ಧವನ್ ನೇತೃತ್ವದ ಭಾರತ ತಂಡ ಇಂದು ಟ್ರಿನಿಡಾಡ್‌ನಲ್ಲಿ ಬಂದು ಇಳಿದಿದೆ. ಮೂರು ಪಂದ್ಯಗಳ ಏಕದಿನ ಸರಣಿ ಜುಲೈ 22ರಿಂದ ಆರಂಭವಾಗಲಿದೆ.

ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಭಾರತ ತಂಡ ಗೆದ್ದು ಇದೀಗ ವೆಸ್ಟ್ ಇಂಡೀಸ್ ಪ್ರವಾಸವನ್ನು ಕೈಗೊಂಡಿದೆ. ಆದರೆ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಭಾಗಿಯಾಗಿದ್ದ ಬಹುತೇಕ ಸ್ಟಾರ್ ಆಟಗಾರರು ಈ ಸರಣಿಯಿಂದ ವಿಶ್ರಾಂತಿ ಪಡೆದುಕೊಂಡಿದ್ದಾರೆ. ಏಕದಿನ ಸರಣಿಯಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರಿಷಬ್ ಪಂತ್, ಹಾರ್ದಿಕ್ ಪಾಂಡ್ಯ, ಮೊಹಮ್ಮದ್ ಶಮಿ ಮತ್ತು ಜಸ್ಪ್ರೀತ್ ಬೂಮ್ರಾ ಅವರಿಗೆ ವಿಶ್ರಾಂತಿ ನೀಡಲಾಗಿದೆ.

ಧವನ್‌ಗೆ ನಾಯಕತ್ವ, ಜಡೇಜಾ ಉಪನಾಯಕ

ಧವನ್‌ಗೆ ನಾಯಕತ್ವ, ಜಡೇಜಾ ಉಪನಾಯಕ

ಜುಲೈ 22ರಿಂದ 27ರ ಮಧ್ಯೆ ಮೂರು ಪಂದ್ಯಗಳ ಏಕದಿನ ಸರಣಿ ಆಯೋಜನೆಯಾಗಲಿದೆ. ಏಕದಿನ ಸರಣಿಯ ಮೂರು ಪಂದ್ಯಗಳು ಕೂಡ ಟ್ರನಿಡಾಡ್‌ನ ಪೋರ್ಟ್ ಆಫ್ ಸ್ಪೈನ್‌ನಲ್ಲಿರುವ ಕ್ವೀನ್ಸ್ ಪಾರ್ಕ್ ಓವಲ್‌ನಲ್ಲಿ ನಡೆಯಲಿದೆ. ಭಾರತದ ಖಾಯಂ ನಾಯಕ ರೋಹಿತ್ ಶರ್ಮಾ ಅಲಭ್ಯತೆಯಲ್ಲಿ ಅನುಭವಿ ಶಿಖರ್ ಧವನ್ ಭಾರತ ತಂಡವನ್ನು ಮುನ್ನಡೆಸಲಿದ್ದು ರವೀಂದ್ರ ಜಡೇಜಾ ಉಪನಾಯಕನಾಗಿ ಜವಾಬ್ಧಾರಿ ವಹಿಸಿಕೊಳ್ಳಲಿದ್ದಾರೆ.

ಯುವ ತಂಡದೊಂದಿಗೆ ಕಣಕ್ಕಿಳಿಯಲಿದೆ ಭಾರತ

ಯುವ ತಂಡದೊಂದಿಗೆ ಕಣಕ್ಕಿಳಿಯಲಿದೆ ಭಾರತ

ಭರವಸೆಯ ಆಟಗಾರರಾದ ಋತುರಾಜ್ ಗಾಯಕ್ವಾಡ್, ಶುಭ್ಮನ್ ಗಿಲ್, ಸೂರ್ಯಕುಮಾರ್ ಯಾದವ್ ಮತ್ತು ಶ್ರೇಯಸ್ ಐಯ್ಯರ್ ಈ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಇನ್ನು ಸಂಜು ಸ್ಯಾಮ್ಸನ್ ಹಾಗೂ ಇಶಾನ್ ಕಿಶನ್ ಕೂಡ ಏಕದಿನ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಇನ್ನು ಇತ್ತೀಚೆಗೆ ಟಿ20 ಪಂದ್ಯಗಳಲ್ಲಿ ಅಮೋಘ ಪ್ರದರ್ಶನ ನೀಡುತ್ತಿರುವ ದೀಪಕ್ ಹೂಡಾ ಕೂಡ ಐರ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಭರ್ಜರಿ ಶತಕ ಸಿಡಿಸಿ ಮಿಂಚಿದ್ದರು. ಬಳಿಕ ಇಂಗ್ಲೆಂಡ್ ವಿರುದ್ಧದ ಚುಟುಕು ಸರಣಿಯಲ್ಲಿಯೂ ಅಮೋಘ ಪ್ರದರ್ಶನ ನೀಡಿ ಮಿಂಚಿದ್ದರು. ಇದೀಗ ಧವನ್ ನೇತೃತ್ವದಲ್ಲಿ ಕಣಕ್ಕಿಳಿಯಲಿರುವ ಏಕದಿನ ತಂಡದಲ್ಲಿಯೂ ಹೂಡಾ ಭಾಗವಾಗಿದ್ದಾರೆ.

ಏಕದಿನ ಸರಣಿಯ ಬಳಿಕ ನಡೆಯಲಿದೆ ಟಿ20 ಸರಣಿ

ಏಕದಿನ ಸರಣಿಯ ಬಳಿಕ ನಡೆಯಲಿದೆ ಟಿ20 ಸರಣಿ

ಇನ್ನು ಈ ಏಕದಿನ ಸರಣಿಯ ಮುಕ್ತಾಯದ ಬಳಿಕ ಭಾರತ ಹಾಗೂ ವೆಸ್ಟ್ ಇಂಡೀಸ್ ತಂಡಗಳು ಐದು ಪಂದ್ಯಗಳ ಟಿ20 ಸರಣಿಯಲ್ಲಿಯೂ ಮುಖಾಮುಖಿಯಾಗಲಿದೆ. ಜುಲೈ 29ರಿಂದ ಆಗಸ್ಟ್ 7ರ ಮಧ್ಯೆ ಈ ಟಿ20 ಸರಣಿ ನಡೆಯಲಿದ್ದು ಇದರಲ್ಲಿ ರೋಹಿತ್ ಶರ್ಮಾ, ರಿಷಬ್ ಪಂತ್ ಹಾಗೂ ಹಾರ್ದಿಕ್ ಪಾಂಡ್ಯ ತಂಡಕ್ಕೆ ಮರಳಲಿದ್ದಾರೆ. ಕೊಹ್ಲಿ, ಬೂಮ್ರಾ ಹಾಗೂ ಶಮಿಗೆ ಚುಟುಕು ಸರಣಿಯಿಣದಲೂ ವಿಶ್ರಾಂತಿ ನೀಡಲಾಗಿದೆ.

ದಿನೇಶ್ ಕಾರ್ತಿಕ್ ಇಂದು ವಿರಾಟ್ ಕೊಹ್ಲಿ ಮುಂದಿನ ಶತಕದ ಬಗ್ಗೆ ಭವಿಷ್ಯ ನುಡಿದಿದ್ದಾರೆ | *Cricket | OneIndia
ಏಕದಿನ ಸರಣಿಯ ಭಾರತದ ಸ್ಕ್ವಾಡ್

ಏಕದಿನ ಸರಣಿಯ ಭಾರತದ ಸ್ಕ್ವಾಡ್

ಶಿಖರ್ ಧವನ್ (ನಾಯಕ), ಋತುರಾಜ್ ಗಾಯಕ್ವಾಡ್, ಶುಬ್ಮನ್ ಗಿಲ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ (ಉಪನಾಯಕ), ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಅವೇಶ್ ಖಾನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್.

Story first published: Wednesday, July 20, 2022, 10:54 [IST]
Other articles published on Jul 20, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+