
ವಿಶ್ವಕಪ್ ಗೆಲ್ಲಲು ಈ ಆಟಗಾರರಿಗೆ ಅವಕಾಶ ನೀಡಿ
ಟೀಮ್ ಇಂಡಿಯಾ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಟ್ರೋಫಿ ಗೆಲ್ಲಲು ಉತ್ತಮ ಪ್ರದರ್ಶನ ನೀಡಿ ಫಾರ್ಮ್ನಲ್ಲಿರುವ ಆಟಗಾರರಿಗೆ ಕಡ್ಡಾಯವಾಗಿ ಅವಕಾಶ ನೀಡಬೇಕು ಎಂದು ಡೇಲ್ ಸ್ಟೇನ್ ಅಭಿಪ್ರಾಯಪಟ್ಟಿದ್ದಾರೆ. ಹೆಸರು ಮತ್ತು ಖ್ಯಾತಿಯನ್ನು ನೋಡದೇ ಒಳ್ಳೆಯ ಪ್ರದರ್ಶನವನ್ನು ನೋಡಿ ಅವಕಾಶ ನೀಡಿದರೆ ಮಾತ್ರ ತಂಡ ಯಶಸ್ವಿಯಾಗಿ ಟ್ರೋಫಿ ಗೆಲ್ಲಲಿದೆ ಎಂದು ಡೇಲ್ ಸ್ಟೇನ್ ಹೇಳಿಕೆ ನೀಡಿದ್ದಾರೆ.

ರಿಷಬ್ ಪಂತ್ ಮೀರಿಸಿದ ದಿನೇಶ್ ಕಾರ್ತಿಕ್
ಇನ್ನೂ ಮುಂದುವರಿದು ಮಾತನಾಡಿರುವ ಡೇಲ್ ಸ್ಟೇನ್ ಪ್ರಸ್ತುತ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ 4 ಅವಕಾಶ ಸಿಕ್ಕರೂ ಸಹ ರಿಷಭ್ ಪಂತ್ ಉತ್ತಮ ಪ್ರದರ್ಶನ ನೀಡಲಾಗಿಲ್ಲ, ಆದರೆ ಪ್ರತಿ ಬಾರಿಯೂ ದಿನೇಶ್ ಕಾರ್ತಿಕ್ ಉತ್ತಮ ಪ್ರದರ್ಶನ ನೀಡಿ ಮಿಂಚಿದ್ದಾರೆ ಎಂದು ಹೇಳಿಕೆ ನೀಡಿದ್ದು, ದಿನೇಶ್ ಕಾರ್ತಿಕ್ ರಿಷಭ್ ಪಂತ್ ಅವರನ್ನು ಮೀರಿಸಿ ಮುನ್ನಡೆಯುತ್ತಿದ್ದಾರೆ ಎಂದಿದ್ದಾರೆ.

ಹೀಗೆ ಆದರೆ ಡಿಕೆ ಹೆಸರು ಮುಂದಿರಲಿದೆ
ದಿನೇಶ್ ಕಾರ್ತಿಕ್ ಇದೇ ರೀತಿಯ ಪ್ರದರ್ಶನವನ್ನು ಮುಂದುವರಿಸಿದರೆ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಪ್ರಕಟವಾಗುವ ಭಾರತ ತಂಡದ ಪಟ್ಟಿಯಲ್ಲಿ ಕಾರ್ತಿಕ್ ಹೆಸರೇ ಮುಂದಿರಲಿದೆ ಎಂದು ಡೇಲ್ ಸ್ಟೇನ್ ಭವಿಷ್ಯ ನುಡಿದಿದ್ದಾರೆ.


Click it and Unblock the Notifications












