ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ವಿಶ್ವಕಪ್ ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿದೆ. ಅಕ್ಟೋಬರ್ 19 ರಂದು ಭಾರತ ತಂಡ ಬಾಂಗ್ಲಾದೇಶವನ್ನು ಸೋಲಿಸಿ ವಿಶ್ವಕಪ್ ನಲ್ಲಿ ತನ್ನ ಅಜೇಯ ಓಟವನ್ನು ಮುಂದುವರಿಸಿದೆ.
ಈ ಪಂದ್ಯದ ನಂತರ, ಟೀಂ ಇಂಡಿಯಾದ ಸ್ಫೋಟಕ ಆಲ್ರೌಂಡರ್ ಗೆ ಬ್ಯಾಟಿಂಗ್ ನಲ್ಲಿ ಅವಕಾಶ ನೀಡಲಾಗುವುದು ಎಂದು ನಾಯಕ ರೋಹಿತ್ ಹೇಳಿರುವ ವಿಡಿಯೋ ಹೆಚ್ಚು ವೈರಲ್ ಆಗುತ್ತಿದೆ.

ರೋಹಿತ್ ಶರ್ಮಾ ಅವರ ನಿರ್ಧಾರಗಳು ವಿಶ್ವಕಪ್ ನಲ್ಲಿ (ವಿಶ್ವಕಪ್ 2023) ನಿಖರವಾಗುತ್ತಾ ಸಾಗುತ್ತಿರುವುದು ಸಾಬೀತಾಗಿದೆ ಆದರೆ ಮುಂಬರುವ ಪಂದ್ಯಗಳಲ್ಲಿ ಹಿಟ್ ಮ್ಯಾನ್ ನಿರ್ಧಾರಗಳು ತಂಡದ ಕೈ ಹಿಡಿದು, ಟೀಮ್ ಇಂಡಿಯಾ ವಿಶ್ವಕಪ್ ಗೆಲ್ಲುತ್ತದಾ ಕಾದು ನೋಡಬೇಕಿದೆ.
ರೋಹಿತ್ ಶರ್ಮಾ ಬಾಂಗ್ಲಾದೇಶ ವಿರುದ್ಧ ಇಬ್ಬರು ಸ್ಪಿನ್ನರ್ ಗಳೊಂದಿಗೆ ಮೈದಾನಕ್ಕಿಳಿದರು. ಅದೇ ಸಮಯದಲ್ಲಿ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ಮತ್ತು ಶಾರ್ದೂಲ್ ಠಾಕೂರ್ ವೇಗದ ನೊಗವನ್ನು ಹೊತ್ತುಕೊಂಡಿದ್ದರು. ಶಾರ್ದೂಲ್ ಠಾಕೂರ್ ಅವರ ಬ್ಯಾಟಿಂಗ್ ಕ್ಷಮತೆಯನ್ನು ಪರಿಗಣಿಸಿ ವಿಶ್ವಕಪ್ ತಂಡದಲ್ಲಿ ಆದ್ಯತೆ ನೀಡಲಾಗುತ್ತಿದೆ ಎಂದು ರೋಹಿತ್ ತಿಳಿಸಿದ್ದಾರೆ.
ಎಲ್ಲಾ ನಾಲ್ಕು ಪಂದ್ಯಗಳಲ್ಲಿ ಶಾರ್ದೂಲ್ ಠಾಕೂರ್ ಅವರಿಗೆ ಅವಕಾಶ
ವಿಶ್ವಕಪ್ ನಲ್ಲಿನ ಎಲ್ಲಾ ನಾಲ್ಕು ಪಂದ್ಯಗಳಲ್ಲಿ ಶಾರ್ದೂಲ್ ಠಾಕೂರ್ ಅವರಿಗೆ ಅವಕಾಶ ನೀಡಲಾಯಿತು, ಇದರಲ್ಲಿ ಅವರು ರನ್ ಗಳನ್ನು ನೀಡಿ ದುಬಾರಿ ಆದರು. ಈ ಪಂದ್ಯಗಳಲ್ಲಿ ಶಾರ್ದೂಲ್ ಕೇವಲ 2 ವಿಕೆಟ್ ಗಳಿಸಿದ್ದು, ಅವರಿಗೆ ಇನ್ನೂ ಬ್ಯಾಟಿಂಗ್ ಅವಕಾಶ ಸಿಕ್ಕಿಲ್ಲ. ಆದರೆ ಇದೀಗ ರೋಹಿತ್ ಶರ್ಮಾ ಅವರಿಗೆ ಬ್ಯಾಟಿಂಗ್ ನಲ್ಲಿ ಅವಕಾಶ ನೀಡುವ ಬಗ್ಗೆ ಮುನ್ಸೂಚನೆ ನೀಡಿದ್ದಾರೆ.
ಭಾರತೀಯ ಕ್ರಿಕೆಟ್ ತಂಡದ ಅಧಿಕೃತ ಇನ್ಸ್ಟಾಗ್ರಾಮ್ ನಿಂದ ವೀಡಿಯೊವನ್ನು ಹಂಚಿಕೊಳ್ಳಲಾಗಿದೆ, ಇದರಲ್ಲಿ ಪಂದ್ಯದ ಬಗ್ಗೆ ಶುಬ್ಮನ್ ಗಿಲ್ ಸೇರಿದಂತೆ ಕೆಲವು ಆಟಗಾರರೊಂದಿಗೆ ರೋಹಿತ್ ಶರ್ಮಾ ಮಾತನಾಡಿದ್ದಾರೆ.
'ಕೆಎಲ್ ಭಾಯ್ ಬದಲಿಗೆ ಶಾರ್ದೂಲ್ ಭಾಯ್ ಹೋಗಲಿದ್ದರು. ಹಾಗಾದರೆ ನೀವು ಆ ನಿರ್ಧಾರವನ್ನು ಏಕೆ ಬದಲಾಯಿಸಿದ್ದೀರಿ?' ಎಂದು ಹಿಟ್ಮ್ಯಾನ್ ಅವರನ್ನು ಶುಬ್ಮನ್ ಗಿಲ್ ಕೇಳಿದಾಗ, ರೋಹಿತ್, 'ಶಾರ್ದೂಲ್ ಹೋಗುತ್ತಾರೆ ಎಂದು ನಾನು ಹೇಳಿದ್ದೆ. ಆದರೆ ಅವರು ಬ್ಯಾಟಿಂಗ್ ಮಾಡುತ್ತಾರೋ ಇಲ್ಲವೋ ಕಾದು ನೋಡಬೇಕು. ಹೇ, ಅವರೊಬ್ಬ ದೊಡ್ಡ ಮ್ಯಾಚ್ ಪ್ಲೇಯರ್' ಎಂದು ಹೇಳಿದರು.
ಅಲ್ಲದೆ, ಶಾರ್ದೂಲ್ ಠಾಕೂರ್ ಐಪಿಎಲ್ ನಲ್ಲಿ ಸ್ಫೋಟಕ ಬ್ಯಾಟಿಂಗ್ ಮೂಲಕ ಎಲ್ಲರನ್ನೂ ಅಚ್ಚರಿಗೊಳಿಸಿದ್ದರು. ಭಾರತ ತಂಡದ ಮುಂದಿನ ಪಂದ್ಯವು ಗೆಲುವಿನ ಕುದುರೆಯ ಮೇಲೆ ಸವಾರಿ ಮಾಡುತ್ತಿರುವ ನ್ಯೂಜಿಲೆಂಡ್ ತಂಡದ ವಿರುದ್ಧ ನಡೆಯಲಿದೆ.
ಈ ಪಂದ್ಯ ಅಕ್ಟೋಬರ್ 22 ರಂದು ಧರ್ಮಶಾಲಾದಲ್ಲಿ ನಡೆಯಲಿದೆ. ನ್ಯೂಜಿಲೆಂಡ್ ತಂಡ ಸತತ ನಾಲ್ಕು ಪಂದ್ಯಗಳನ್ನು ಗೆದ್ದಿದೆ. ಈ ಪಂದ್ಯದಲ್ಲಿ ಯಾವ ತಂಡ ಗೆಲ್ಲುತ್ತದೆ ಎಂಬುದನ್ನು ಕಾದು ನೋಡಬೇಕಿದೆ.