
ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೂ ಮುನ್ನ ರೋಹಿತ್ ಪ್ರತಿಕ್ರಿಯೆ
ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಟಿ20 ವಿಶ್ವಕಪ್ನಲ್ಲಿ ಪಾಕಿಸ್ತಾನದ ವಿರುದ್ಧ ಪಂದ್ಯಕ್ಕೂ ಮುನ್ನ ಮಾಧ್ಯಮಗಳ ಜೊತೆಗೆ ಮಾತನಾಡಿದ್ದಾರೆ. ಈ ಸಂದರ್ಭದಲ್ಲಿ ಮುಂದಿನ ವರ್ಷದ ಎಷ್ಯಾ ಕಪ್ ಟೂರ್ನಿಯ ವಿಚಾರವಾಗಿ ಬಿಸಿಸಿಐ ನಿಲುವಿನ ಬಗ್ಗೆ ಪ್ರಶ್ನೆ ರೋಹಿತ್ ಶರ್ಮಾ ಮುಂದೆ ಬಂತು. ಈ ಸಂದರ್ಭದಲ್ಲಿ ನಾಯಕ ರೋಹಿತ್ ಶರ್ಮಾ ಪ್ರತಿಕ್ರಿಯೆ ನೀಡಿದ್ದು ನಮ್ಮ ಗುರಿ ಸದ್ಯ ಈ ಬಾರಿಯ ವಿಶ್ವಕೊ್ ಟೂರ್ನಿಯ ಮೇಲೆ ಮಾತ್ರವೇ ಇದೆ ಎಂದಿದ್ದಾರೆ.

ಬಿಸಿಸಿಐ ನಿರ್ಧಾರ ತೆಗೆದುಕೊಳ್ಳುತ್ತದೆ
"ನನ್ನ ಈಗಿನ ಗುರಿ ಈ ಬಾರಿಯ ಟಿ20 ವಿಶ್ವಕಪ್ ಮಾತ್ರವೇ ಆಗಿದೆ. ಯಾಕೆಂದರೆ ಇದು ನಮಗೆ ಬಹಳ ಮುಖ್ಯವಾಗಿದೆ. ಅದಾದ ಬಳಿಕ ಏನಾಗಲಿದೆ ಎಂಬುದರ ಬಗ್ಗೆ ನಾವು ಯೋಚನೆ ಮಾಡಿಲ್ಲ. ಆ ಬಗ್ಗೆ ಯೋಚನೆ ಮಾಡುವುದರಲ್ಲಿ ಅರ್ಥವೇ ಇಲ್ಲ. ಆ ವಿಚಾರವಾಗಿ ಬಿಸಿಸಿಐ ನಿರ್ಧಾರವನ್ನು ತೆಗೆದುಕೊಳ್ಳುತ್ತದೆ. ಈಗ ನಾವು ಕೇವಲ ನಾಳಿನ ಪಂದ್ಯದ ಮೇಲೆ ಮಾತ್ರವೇ ಗನಹರಿಸಿದ್ದೇವೆ" ಎಂದು ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹೇಳಿಕೆ ನೀಡಿದ್ದಾರೆ.

ಎಂಸಿಜಿಯಲ್ಲಿ ಬದ್ಧ ಎದುರಾಳಿ ವಿರುದ್ಧ ಸೆಣೆಸಾಟ
ಈ ಬಾರಿಯ ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಮೊದಲ ಪಂದ್ಯವನ್ನು ಮೆಲ್ಬರ್ನ್ ಕ್ರಿಕೆಟ್ ಗ್ರೌಂಡ್ನಲ್ಲಿ ಭಾನುವಾರ ಬದ್ಧ ಎದುರಾಳಿ ಪಾಕಿಸ್ತಾನದ ವಿರುದ್ಧ ಆಡಲಿದೆ. ಕಳೆದ ವರ್ಷದ ವಿಶ್ವಕಪ್ನಲ್ಲಿ ಭಾರತ ಪಾಕಿಸ್ತಾನದ ವಿರುದ್ಧ ಸೋಲು ಅನುಭವಿಸಿತ್ತು. ಹೀಗಾಗಿ ಈ ಬಾರಿ ಆ ಸೋಲಿಗೆ ಭಾರತ ಸೇಡು ತೀರಿಸಿಕೊಳ್ಳುವ ವಿಶ್ವಾಸದಲ್ಲಿ ಟೀಮ್ ಇಂಡಿಯಾ ಅಭಿಮಾನಿಗಳು ಇದ್ದಾರೆ. ಭಾರತ ತಂಡದ ಆಟಗಾರರು ಕೂಡ ಉತ್ತಮ ಫಾರ್ಮ್ನಲ್ಲಿದ್ದು ಪಂದ್ಯದ ಮೇಲೆ ಕುತೂಹಲ ಹೆಚ್ಚಾಗುವಂತೆ ಮಾಡಿದೆ.

ಟೀಮ್ ಇಂಡಿಯಾ ಸ್ಕ್ವಾಡ್ ಹೀಗಿದೆ
ಭಾರತ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವಿಚಂದ್ರನ್ ಅಶ್ವಿನ್, ಯುಜ್ವೇಂದ್ರ ಚಹಾಲ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಶ್ದೀಪ್ ಸಿಂಗ್, ಮೊಹಮ್ಮದ್ ಶಮಿ
ಸ್ಟ್ಯಾಂಡ್ಬೈ ಆಟಗಾರರು: ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್, ಮೊಹಮ್ಮದ್ ಶಮಿ, ಶಾರ್ದೂಲ್ ಠಾಕೂರ್


Click it and Unblock the Notifications












