ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಟೂರ್ನಿಗಾಗಿ ಕ್ರಿಕೆಟ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಈ ಮೆಗಾ ಟೂರ್ನಿಗಾಗಿ ಟೀಮ್ ಇಂಡಿಯಾ ತನ್ನ ಸಿದ್ಧತೆಗಳನ್ನು ಪ್ರಾರಂಭಿಸಿದೆ. ಏಕೆಂದರೆ ಟೀಮ್ ಇಂಡಿಯಾ ತನ್ನ ಎಲ್ಲಾ ಪಂದ್ಯಗಳನ್ನು ದುಬೈನಲ್ಲಿ ಆಡಲಿದೆ. ಟೀಮ್ ಇಂಡಿಯಾದ 15 ಆಟಗಾರರ ಪೈಕಿ 8 ಆಟಗಾರರು ದುಬೈನಲ್ಲಿ ಒಂದೇ ಒಂದು ಏಕದಿನ ಪಂದ್ಯವನ್ನು ಆಡಿಲ್ಲ. ಆದರೆ ಇತರ 3 ಆಟಗಾರರು ಕೇವಲ ಒಂದು ಏಕದಿನ ಪಂದ್ಯವನ್ನು ಆಡಿದ್ದಾರೆ ಎಂಬುದು ದೊಡ್ಡ ಆತಂಕ.
ಚಾಂಪಿಯನ್ಸ್ ಟ್ರೋಫಿ ಟೂರ್ನಿಯೂ ಅನಿಶ್ಚಿತ ಪರಿಸ್ಥಿತಿಯಲ್ಲಿ ನಡೆಯಲಿದೆ. ಭಾರತ ತಂಡವು ಸ್ಪಿನ್ ಮತ್ತು ಪೇಸ್ ಬೌಲರ್ಗಳಿಗೆ ಸರಿಹೊಂದುವಂತೆ ತನ್ನ ತಂತ್ರವನ್ನು ಅಳವಡಿಸಿಕೊಳ್ಳಬೇಕಾಗುತ್ತದೆ. ಇಲ್ಲವಾದಲ್ಲಿ ಏಕದಿನ ಪಂದ್ಯಗಳನ್ನು ಆಡಿದ ಅನುಭವದ ಕೊರತೆಯಿಂದ ಭಾರತ ಪ್ರಶಸ್ತಿ ಗೆಲ್ಲುವ ಸಾಧ್ಯತೆ ಮೇಲೆ ಪರಿಣಾಮ ಬೀರಬಹುದು.

ಟೀಮ್ ಇಂಡಿಯಾ ಟಾಪ್ ಆರ್ಡರ್ ಬ್ಯಾಟರ್ಗಳಿಗೆ ದುಬೈನಲ್ಲಿ ಏಕದಿನ ಕ್ರಿಕೆಟ್ ಆಡಿದ ಅನುಭವ ಕಡಿಮೆಯಿದೆ. 5 ಪಂದ್ಯಗಳಲ್ಲಿ 105.66 ಸರಾಸರಿಯಲ್ಲಿ 317 ರನ್ ಗಳಿಸಿದ್ದಾರೆ. ಇದರಲ್ಲಿ ಒಂದು ಶತಕ ಮತ್ತು ಎರಡು ಅರ್ಧಶತಕಗಳು ಸೇರಿವೆ. ಆದರೆ, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ರಿಷಬ್ ಪಂತ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್ ಮತ್ತು ಮೊಹಮ್ಮದ್ ಶಮಿ ಆವರಂತಹ ಪ್ರಮುಖ ಆಟಗಾರರು ದುಬೈನಲ್ಲಿ ಏಕದಿನ ಪಂದ್ಯವನ್ನು ಆಡಿಲ್ಲ.
ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ ಮತ್ತು ರವೀಂದ್ರ ಜಡೇಜಾ ತಲಾ ಒಂದೊಂದು ಏಕದಿನ ಪಂದ್ಯವನ್ನು ಆಡಿದ್ದಾರೆ. ಕೆಎಲ್ ರಾಹುಲ್ 60 ರನ್ ಗಳಸಿದರೆ, ಹಾರ್ದಿಕ್ ಪಾಂಡ್ಯ ಮತ್ತು ರವೀಂದ್ರ ಜಡೇಜಾ ಅವರಿಗೆ ಬ್ಯಾಟಿಂಗ್ ಮಾಡಲು ಅವಕಾಶ ಸಿಕ್ಕಿಲ್ಲ. ಮತ್ತೊಂದೆಡೆ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶುಭಮನ್ ಗಿಲ್, ರಿಷಬ್ ಪಂತ್ ಮತ್ತು ಕೆಎಲ್ ರಾಹುಲ್ ಸೇರಿದಂತೆ ಹಲವಾರು ಕ್ರಿಕೆಟಿಗರು ತಮ್ಮ ಫಾರ್ಮ್ನೊಂದಿಗೆ ಹೋರಾಡುತ್ತಿದ್ದಾರೆ. ಆದರೆ 6 ಸ್ಪೆಷಲಿಸ್ಟ್ ಬೌಲರ್ಗಳ ಪೈಕಿ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಕುಲದೀಪ್ ಯಾದವ್ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಕುಲದೀಪ್ ಯಾದವ್ ಮತ್ತು ಜಸ್ಪ್ರೀತ್ ಬುಮ್ರಾ ಯುಎಇ ಪರಿಸ್ಥಿತಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಮೂವರು ಬೌಲರ್ಗಳು ಕ್ರಮವಾಗಿ 6 ಪಂದ್ಯಗಳಲ್ಲಿ 10 ಮತ್ತು 4 ಪಂದ್ಯಗಳಲ್ಲಿ 8 ವಿಕೆಟ್ ಪಡೆದಿದ್ದಾರೆ. ಇಂತಹ ಸಂದರ್ಭದಲ್ಲಿ ಟೀಮ್ ಇಂಡಿಯಾ ಪ್ರದರ್ಶನದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.
ಟೀಮ್ ಇಂಡಿಯಾದ ಹಲವು ಆಟಗಾರರು ಐಪಿಎಲ್ ಮತ್ತು ಟಿ20 ವಿಶ್ವಕಪ್ ಪಂದ್ಯಗಳನ್ನು ಒಳಗೊಂಡಂತೆ ದುಬೈನಲ್ಲಿ ಟಿ20 ಮಾದರಿ ಕ್ರಿಕೆಟ್ ಆಡಿದ್ದಾರೆ. ಆದರೆ ಟಿ20 ಅನುಭವ ಏಕದಿನ ಪಂದ್ಯಗಳಿಗೆ ಸಾಕಾಗುವುದಿಲ್ಲ. ಟಿ20 ಕ್ರಿಕೆಟ್ನಲ್ಲಿ ಆಕ್ರಮಣಕಾರಿ ಬ್ಯಾಟಿಂಗ್ ಮತ್ತು ಶಾರ್ಟ್ ಬೌಲಿಂಗ್ ಸ್ಪೆಲ್ಗಳ ಅಗತ್ಯವಿರುತ್ತದೆ. ಆದರೆ ಏಕದಿನ ಮಾದರಿ ಕ್ರಿಕೆಟ್ನಲ್ಲಿ ಗೆ ತಾಳ್ಮೆ, ಸ್ಟ್ರೈಕ್ ತಿರುಗುವಿಕೆ ಮತ್ತು ನಿರಂತರವಾಗಿ ಒತ್ತಡವನ್ನು ನಿಭಾಯಿಸುವುದು ಅಗತ್ಯವಾಗಿತ್ತದೆ.
ಸುಡುವ ಬಿಸಿಲಿನಲ್ಲಿ ವಿಶೇಷವಾಗಿ ಬೌಲರ್ಗಳು ಸಂಪೂರ್ಣ 50 ಓವರ್ಗಳಲ್ಲಿ ತಮ್ಮ ಶಕ್ತಿಯ ಮಟ್ಟವನ್ನು ಹೆಚ್ಚು ಇರಿಸಿಕೊಳ್ಳಲು ಶ್ರಮಿಸಬೇಕಾಗುತ್ತದೆ. ದುಬೈಯಲ್ಲಿನ ಪಿಚ್ಗಳು ನಿಧಾನವಾಗಿರುತ್ತವೆ. ಇದು ಮಧ್ಯಮ ಓವರ್ಗಳಲ್ಲಿ ಸ್ಪಿನ್ನರ್ಗಳನ್ನು ಪರಿಣಾಮಕಾರಿಯಾಗಿ ಮಾಡುತ್ತದೆ. ಆದರೆ ಈ ಪಿಚ್ಗಳು ಬೆಳಕಿನಲ್ಲಿ ವೇಗದ ಬೌಲರ್ಗಳಿಗೆ ಸಹಾಯ ಮಾಡಲಿದೆ.