ಮುಂಬೈ, ಅಕ್ಟೋಬರ್ 24: ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧ ಭರ್ಜರಿ ಪ್ರದರ್ಶನ ನೀಡಿದ ಟೀಂ ಇಂಡಿಯಾ ಈಗ ಬಾಂಗ್ಲಾದೇಶ ಪ್ರವಾಸಕ್ಕೆ ಸಜ್ಜಾಗುತ್ತಿದೆ. ಬಾಂಗ್ಲಾ ಪ್ರವಾಸ ಕೈಗೊಳ್ಳಲಿರುವ ಭಾರತ ತಂಡವನ್ನು ಎಂಎಸ್ ಕೆ ಪ್ರಸಾದ್ ನೇತೃತ್ವದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಇಂದು ಆಯ್ಕೆ ಮಾಡಿದೆ.
ಟಿ20 ಅಂತಾರಾಷ್ಟ್ರ್ರೀಯ ಪಂದ್ಯಗಳು ಹಾಗೂ ಟೆಸ್ಟ್ ಸರಣಿಗೆ ಪ್ರತ್ಯೇಕ ತಂಡಗಳನ್ನು ಆಯ್ಕೆ ಮಾಡಲಾಗಿದೆ. ಟಿ20 ತಂಡಕ್ಕೆ ಕೆಎಲ್ ರಾಹುಲ್ ಮರಳಿದ್ದಾರೆ. ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಸಂಜು ಸ್ಯಾಮ್ಸನ್ ತಂಡ ಸೇರಿದ್ದಾರೆ. ಹಾರ್ದಿಕ್ ಪಾಂಡ್ಯ ಇನ್ನೂ ಗುಣಮುಖರಾಗಿಲ್ಲ. ಟೆಸ್ಟ್ ತಂಡದಲ್ಲಿ ಹೆಚ್ಚಿನ ಬದಲಾವಣೆ ಕಂಡು ಬಂದಿಲ್ಲ. ವೃದ್ಧಿಮಾನ್ ಸಹಾ ವಿಕೆಟ್ ಕೀಪರ್ ಆಗಿ ಮುಂದುವರೆಯಲಿದ್ದು, ರಿಷಬ್ ಪಂತ್ ಕೂಡಾ ತಂಡದಲ್ಲಿದ್ದಾರೆ. ಟಿ20ಐ ತಂಡಕ್ಕೆ ರೋಹಿತ್ ಶರ್ಮ ನಾಯಕರಾಗಿದ್ದು, ವಿರಾಟ್ ಕೊಹ್ಲಿ ಟಿ20 ಸರಣಿಯಲ್ಲಿ ಆಡುತ್ತಿಲ್ಲ.
ಟಿ20 ತಂಡ:
ರೋಹಿತ್ ಶರ್ಮ(ನಾಯಕ), ಶಿಖರ್ ಧವನ್, ಕೆಎಲ್ ರಾಹುಲ್, ಸಂಜು ಸ್ಯಾಮ್ಸನ್, ಶ್ರೇಯಸ್ ಐಯರ್, ಮನೀಶ್ ಪಾಂಡೆ, ರಿಷಬ್ ಪಂತ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಕೃನಾಲ್ ಪಾಂಡ್ಯ, ಯುಜುವೇಂದ್ರ ಚಾಹಲ್, ರಾಹುಲ್ ಚಾಹರ್, ದೀಪಕ್ ಚಾಹರ್, ಖಲೀಲ್ ಅಹ್ಮದ್, ಶಿವಂ ದುಬೇ, ಶಾರ್ದೂಲ್ ಠಾಕೂರ್.
ಟೆಸ್ಟ್ ತಂಡ:
ವಿರಾಟ್ ಕೊಹ್ಲಿ(ನಾಯಕ), ರೋಹಿತ್ ಶರ್ಮ, ಮಯಾಂಕ್ ಅಗರವಾಲ್, ಚೇತೇಶ್ವರ್ ಪೂಜಾರಾ, ಅಜಿಂಕ್ಯ ರಹಾನೆ, ಹನುಮ ವಿಹಾರಿ, ವೃದ್ಧಿಮಾನ್ ಸಹಾ(ವಿಕೆಟ್ ಕೀಪರ್), ಆರ್ ಜಡೇಜ, ಆರ್ ಅಶ್ವಿನ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಇಶಾಂತ್ ಶರ್ಮ, ಶುಭಂ ಗಿಲ್, ರಿಷಬ್ ಪಂತ್.