ಬೆಂಗಳೂರು, ಸೆಪ್ಟೆಂಬರ್ 01 : 6ನೇ ಆವೃತ್ತಿಯ ಕರ್ನಾಟಕ ಪ್ರೀಮಿಯರ್ ಲೀಗ್ ಟ್ವೆಂಟಿ20 ಟೂರ್ನಮೆಂಟ್ ಇಂದಿನಿಂದ (ಸೆ,1) ಆರಂಭವಾಗಲಿದ್ದು, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕೆಪಿಎಲ್ ಆರನೇ ಆವೃತ್ತಿಗೆ ಚಾಲನೆ ದೊರೆಯಲಿದೆ.
ಕೆಪಿಎಲ್ 6ː ಹರಾಜಿನ ನಂತರ ಯಾರು ಯಾವ ತಂಡದಲ್ಲಿದ್ದಾರೆ?
ಉದ್ಘಾಟನಾ ಪಂದ್ಯದಲ್ಲಿ ಕರ್ನಾಟಕ ರಣಜಿ ತಂಡದ ನಾಯಕ ತಂಡದ ನಾಯಕ ವಿನಯ್ ಕುಮಾರ್ ನೇತೃತ್ವದ ಹುಬ್ಬಳ್ಳಿ ಟೈಗರ್ಸ್ ಹಾಗೂ ಎಸ್.ಅರವಿಂದ್ ನಾಯಕತ್ವದ ಬೆಳಗಾವಿ ಪ್ಯಾಂಥರ್ಸ್ ಸೆಣಸಾಡಲಿವೆ.
ಟೂರ್ನಿಯಲ್ಲಿ ಹೊಸದಾಗಿ ಬೆಂಗಳೂರು ಬ್ಲಾಸ್ಟರ್ಸ್ ಸೇರ್ಪಡೆಗೊಂಡಿದ್ದು, ಒಟ್ಟು ಏಳು ತಂಡಗಳು ಆರನೇ ಆವೃತ್ತಿಯಲ್ಲಿ ಆಡಲಿವೆ.
ನಮ್ಮ ಕೆಪಿಎಲ್ ಪಂದ್ಯಗಳು ಸ್ಟಾರ್ ನೆಟ್ವರ್ಕ್ ನಲ್ಲಿ ಪ್ರಸಾರ
ಸೆಪ್ಟೆಂಬರ್ 1 ರಿಂದ 23 ರ ತನಕ ಕೆಪಿಎಲ್ ಪಂದ್ಯಗಳು ಬೆಂಗಳೂರು, ಮೈಸೂರು ಹಾಗೂ ಹುಬ್ಬಳ್ಳಿಯಲ್ಲಿ ನಡೆಯಲಿವೆ.
ಶನಿವಾರ ಮೈಸೂರು ವಾರಿಯರ್ಸ್ ಹಾಗೂ ಬೆಂಗಳೂರು ಬ್ಲಾಸ್ಟರ್ಸ್ ನಡುವಣ ಪಂದ್ಯ ನಡೆಯಲಿದೆ.