ಟೀಮ್ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅಂತರಾಷ್ಟ್ರೀಯ ಕ್ರಿಕೆಟ್ ಭವಿಷ್ಯದ ಬಗ್ಗೆ ಅಭಿಮಾನಿಗಳಲ್ಲಿ ಗೊಂದಲಯಿದೆ. ಈ ವಿಚಾರವಾಗಿ ಧೋನಿ ಕೂಡ ಯಾವುದೇ ಸ್ಪಷ್ಟತೆಯನ್ನೂ ನೀಡಿಲ್ಲ. ಇತ್ತೀಚಿನ ಸಂದರ್ಶನವೊಂದರಲ್ಲಿ ಧೋನಿ ಜನವರಿ ತನಕ ಈ ವಿಚಾರವ ಏನನ್ನು ಕೇಳಬೇಡಿ ಎಂದಷ್ಟೇ ಹೇಳಿದ್ದರು. ಇದು ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ.
ಈ ವಿಚಾರವಾಗಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮಾತನಾಡಿದ್ದಾರೆ. ಎಮ್ ಎಸ್ ಧೋನಿ ಭವಿಷ್ಯಯದ ಕುರಿತಾಗಿ ಬಿಸಿಸಿಐ ಸಂಪೂರ್ಣ ಸ್ಪಷ್ಟತೆಯನ್ನು ಹೊಂದಿದೆ. ಆದರೆ ಅದನ್ನು ಈಗಲೇ ಬಹಿರಂಗಪಡಿಸುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ.
ಧೋನಿ ನಿವೃತ್ತಿ ಬಗ್ಗೆ ಮತ್ತೆ ಹಬ್ಬಿದೆ ಗಾಳಿ ಸುದ್ದಿ, ಟ್ವಿಟ್ಟರಲ್ಲಿ ಟ್ರೆಂಡೋ ಟ್ರೆಂಡ್!
ಕಳೆದ ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಭಾರತ ನ್ಯೂಜಿಲ್ಯಾಂಡ್ ವಿರುದ್ಧ ಸೋತು ಟೂರ್ನಿಯಿಂದ ಅನಿರೀಕ್ಷಿತವಾಗಿ ಹೊರ ಬಿದ್ದಿತ್ತು. ಅದಾದ ಬಳಿಕ ಮಹೇಂದ್ರ ಸಿಂಗ್ ಧೋನಿ ಯಾವುದೇ ಅಂತರಾಷ್ಟ್ರೀಯ ಪಂದ್ಯದಲ್ಲೂ ಭಾಗಿಯಾಗಿಲ್ಲ. ಹೀಗಾಗಿ ಧೋನಿ ಮುಂದಿನ ಭವಿಷ್ಯವೇನು ಅನ್ನೋದು ಎಲ್ಲರ ಪ್ರಶ್ನೆಯಾಗಿದೆ.
ಸೇನಾ ಸೇವೆ ಮುಗಿಸಿ ಕುಟುಂಬ ಸೇರಿದ ಮಾಜಿ ನಾಯಕ ಎಂಎಸ್ ಧೋನಿ
ಇನ್ನು ಮುಂದಿನ ವರ್ಷ ಆಸ್ಟ್ರೇಲಿಯಾದಲ್ಲಿ ಟಿ-ಟ್ವೆಂಟಿ ವಿಶ್ವಕಪ್ ಪಂದ್ಯಾವಳಿ ನಡೆಯಲಿದೆ. ಈ ಸಂದರ್ಭದಲ್ಲಿ ಧೋನಿ ಆಡದಿದ್ದರೆ ವಿಕೆಟ್ ಕೀಪಿಂಗ್ನಲ್ಲಿ ಯಾರು ಎಂಬ ಪ್ರಶ್ನೆಗೆ ಉತ್ತರವಿನ್ನು ಸ್ಪಷ್ಟವಾಗಿಲ್ಲ. ಹೀಗಾಗಿ ಸೌರವ್ ಗಂಗೂಲಿ ಹೇಳಿಕೆ ಇಲ್ಲಿ ಮಹತ್ವ ಪಡೆದಿದೆ.