ಆ ನಾಲ್ವರು ಮರಳಿದರೆ ದಿನೇಶ್ ಕಾರ್ತಿಕ್ ಹೊರಬೀಳಲಿದ್ದಾರೆ
ಮುಂಬರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಕಣಕ್ಕಿಳಿಯಬೇಕಾದ ಟೀಮ್ ಇಂಡಿಯಾ ಕುರಿತಾಗಿ ಮಾತನಾಡಿರುವ ಗೌತಮ್ ಗಂಭೀರ್ ಸದ್ಯ ತಂಡದಿಂದ ಹೊರಗುಳಿದಿರುವ ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ಸೂರ್ಯಕುಮಾರ್ ಯಾದವ್ ಮರಳಿ ತಂಡ ಸೇರಿದರೆ ದಿನೇಶ್ ಕಾರ್ತಿಕ್ ಅವರಿಗೆ ಆಡುವ ಬಳಗದಲ್ಲಿ ಅವಕಾಶವಿಲ್ಲದೇ ಹೊರ ಬೀಳಲಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.
ಸುಮ್ಮನೆ ಅವಕಾಶ ನೀಡುವುದು ವ್ಯರ್ಥ
ಇನ್ನೂ ಮುಂದುವರೆದು ಮಾತನಾಡಿರುವ ಗೌತಮ್ ಗಂಭೀರ್ ಈ ನಾಲ್ವರು ತಂಡಕ್ಕೆ ಆಗಮಿಸುವ ಪರಿಣಾಮ ದಿನೇಶ್ ಕಾರ್ತಿಕ್ ಅವರಿಗೆ ಆಡುವ ಬಳಗದಲ್ಲಿ ಅವಕಾಶ ಸಿಗುವುದಿಲ್ಲ, ಹೀಗಾಗಿ ವಿಶ್ವಕಪ್ ತಂಡಕ್ಕೆ ದಿನೇಶ್ ಕಾರ್ತಿಕ್ ಅವರನ್ನು ಆಯ್ಕೆ ಮಾಡುವುದು ವ್ಯರ್ಥ ಎಂದು ಹೇಳಿದ್ದಾರೆ.
ಯುವ ಆಟಗಾರನಿಗೆ ಅವಕಾಶ ನೀಡಬೇಕು ಎಂದ ಗಂಭೀರ್
ಹೀಗೆ ದಿನೇಶ್ ಕಾರ್ತಿಕ್ ಅವರಿಗೆ ಆಡುವ ಬಳಗದಲ್ಲಿ ಅವಕಾಶ ಸಿಗುವುದು ಅನುಮಾನ ಎಂದಿರುವ ಗೌತಮ್ ಗಂಭೀರ್ ಆತನ ಬದಲಾಗಿ ಟಿ ಟ್ವೆಂಟಿ ವಿಶ್ವಕಪ್ ತಂಡದಲ್ಲಿ ಉತ್ತಮವಾಗಿ ಫೀಲ್ಡಿಂಗ್ ಮಾಡಬಲ್ಲ ಹಾಗೂ ಆಸ್ಟ್ರೇಲಿಯಾ ನೆಲದಲ್ಲಿ ಒಂದಷ್ಟು ಓವರ್ ಚೆನ್ನಾಗಿ ಬ್ಯಾಟ್ ಬೀಸಬಲ್ಲ ಯುವ ಆಟಗಾರನನ್ನು ಆಯ್ಕೆ ಮಾಡಬೇಕು ಎಂದಿದ್ದಾರೆ.