For Quick Alerts
ALLOW NOTIFICATIONS  
For Daily Alerts
 

ಒಂದು ಬಾಲ್ ಹಾಕ್ಲಿಲ್ಲ, ಆಡ್ಲಿಲ್ಲ: ಏಷ್ಯಾಕಪ್ ಫೈನಲ್‌ಗಾಗಿ 1000 ಕಿಮೀ ಓಡಾಡಿದ ವಾಷಿ; ಟ್ರಾವೆಲ್ ಹಿಸ್ಟರಿಯೇ ರೋಚಕ!

2023ರ ಏಷ್ಯಾ ಕಪ್‌ ಫೈನಲ್‌ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಭಾರತ ತಂಡ ಬೆಂಕಿ ಬಿರುಗಾಳಿ ಪ್ರದರ್ಶನ ನೀಡಿದೆ. ಭಾರತ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಬೌಲಿಂಗ್‌ನಲ್ಲಿ ಅತ್ಯುತ್ತಮ ಪ್ರದರ್ಶನಗಳಲ್ಲಿ ಒಂದನ್ನು ನೀಡಿತು ಮತ್ತು ಗೆಲುವಿನ ಗುರಿಯನ್ನು ಸುಲಭವಾಗಿ ಬೆನ್ನಟ್ಟಿತು.

ಭಾರತ ತಂಡವು ಬಾಂಗ್ಲಾದೇಶ ವಿರುದ್ಧದ ಸೋಲಿನ ವೇಳೆ ಅವರು ತೆಗೆದುಕೊಂಡ ಕೆಲವು ಬದಲಾವಣೆಯ ನಿರ್ಧಾರದಿಂದಾಗಿ ಸ್ಟಾರ್ ಆಲ್‌ರೌಂಡರ್ ಅಕ್ಷರ್ ಪಟೇಲ್ ಅವರು ಪಂದ್ಯಾವಳಿಯ ಫೈನಲ್ ಪಂದ್ಯವನ್ನು ತಪ್ಪಿಸಿಕೊಳ್ಳಲಿದ್ದಾರೆ ಎಂದು ಪಂದ್ಯದ ಒಂದು ದಿನ ಮುಂಚಿತವಾಗಿ ಘೋಷಿಸಲಾಯಿತು.

This Indian Player Traveled 1000 km to play Asia Cup Final Without Getting a Chance to Play or Bowl

ಅಕ್ಷರ್ ಪಟೇಲ್ ಬದಲಿಯಾಗಿ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮತ್ತೊಬ್ಬ ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ಅವರನ್ನು ಫೈನಲ್‌ ಆಡುವ ಭಾರತ ತಂಡದಲ್ಲಿ ಆಯ್ಕೆ ಮಾಡಿತು.

ಆದರೆ, ವಾಷಿಂಗ್ಟನ್ ಸುಂದರ್‌ಗೆ ಕರೆ ಮಾಡಿದಾಗ ಆಲ್‌ರೌಂಡರ್ ಬೆಂಗಳೂರಿನಲ್ಲಿದ್ದರು ಎಂದು ವರದಿಯಾಗಿದೆ. ಅಲ್ಲಿ 2023 ಏಷ್ಯನ್ ಗೇಮ್ಸ್‌ಗೆ ಆಯ್ಕೆಯಾಗಿರುವ ತಂಡದೊಂದಿಗಿದ್ದರು. ಅವರು ಮಧ್ಯರಾತ್ರಿ 1 ಗಂಟೆಗೆ ಭಾರತ ತಂಡದಿಂದ ಕರೆ ಸ್ವೀಕರಿಸಿದರು.

ಆದರೆ, ವಾಷಿಂಗ್ಟನ್ ಸುಂದರ್ ಅವರ ಪಾಸ್‌ಪೋರ್ಟ್ ತಮ್ಮ ಚೆನ್ನೈನ ಮನೆಯಲ್ಲಿತ್ತು. ಆದ್ದರಿಂದ 23 ವರ್ಷದ ಯುವ ಆಟಗಾರ ಪಾಸ್‌ಪೋರ್ಟ್ ತೆಗೆದುಕೊಂಡು ಬರಲು ಬೆಂಗಳೂರಿನಿಂದ ಚೆನ್ನೈಗೆ ಪ್ರಯಾಣ ಬೆಳೆಸಿದರು ಮತ್ತು ಏಷ್ಯಾ ಕಪ್ ಫೈನಲ್‌ನಲ್ಲಿ ಆಡಲು ಚೆನ್ನೈನಿಂದ ಕೊಲಂಬೊಗೆ ತೆರಳಿದರು. ಎಲ್ಲಾ ಸೇರಿ ಸುಮಾರು 1000 ಕಿಮೀ ಪ್ರಯಾಣ ಮಾಡಿದ್ದಾರೆ.

ಆದಾಗ್ಯೂ, ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಕಾಣಿಸಿಕೊಂಡರೂ ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್‌ಗೆ ಯಾವುದೇ ಕೊಡುಗೆ ನೀಡಲು ಸಾಧ್ಯವಾಗಲಿಲ್ಲ. ವಾಷಿಂಗ್ಟನ್ ಸುಂದರ್ ಒಂದೇ ಒಂದು ಬಾಲ್ ಆಗಲಿ ಅಥವಾ ಬ್ಯಾಟಿಂಗ್ ಮಾಡಲು ಸಾಧ್ಯವಾಗಲಿಲ್ಲ.

ಬೌಲಿಂಗ್ ಮತ್ತು ಬ್ಯಾಟಿಂಗ್‌ನಲ್ಲಿ ಭಾರತ ತಂಡದ ಅದ್ಭುತ ಪ್ರದರ್ಶನದೊಂದಿಗೆ ಶ್ರೀಲಂಕಾವನ್ನು 10 ವಿಕೆಟ್‌ಗಳಿಂದ ಸೋಲಿಸಿ 8ನೇ ಬಾರಿಗೆ ಏಷ್ಯಾ ಕಪ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು.

This Indian Player Traveled 1000 km to play Asia Cup Final Without Getting a Chance to Play or Bowl


ಮೊಹಮ್ಮದ್ ಸಿರಾಜ್ ಬಿರುಗಾಳಿ ಬೌಲಿಂಗ್ ಪ್ರದರ್ಶನ
ಶ್ರೀಲಂಕಾ ವಿರುದ್ಧದ ಫೈನಲ್ ಪಂದ್ಯದಲ್ಲಿ ಭಾರತದ ಪ್ರದರ್ಶನದ ಬಗ್ಗೆ ಹೇಳುವುದಾದರೆ, ತಂಡವು ಟಾಸ್ ಸೋತ ನಂತರ ಬೌಲಿಂಗ್ ದಾಳಿಗೆ ಇಳಿಯಿತು. ಮೊದಲ ಓವರ್‌ನಿಂದಲೇ ಭಾರತೀಯ ಬೌಲರ್‌ಗಳು ಅದ್ಭುತ ಪ್ರದರ್ಶನವನ್ನು ನೀಡಿದರು.

ಜಸ್ಪ್ರೀತ್ ಬುಮ್ರಾ ಒಂದು ವಿಕೆಟ್, ಮೊಹಮ್ಮದ್ ಸಿರಾಜ್ 6 ವಿಕೆಟ್ ಮತ್ತು ಹಾರ್ದಿಕ್ ಪಾಂಡ್ಯ 3 ಬಾರಿ ವಿಕೆಟ್ ಕಬಳಿಸುವ ಮೂಲಕ ಶ್ರೀಲಂಕಾ ತಂಡವನ್ನು ಕೇವಲ 50 ರನ್‌ಗಳ ಅಲ್ಪ ಮೊತ್ತಕ್ಕೆ ಕಟ್ಟಿಹಾಕಿತು.

ಸುಲಭ ಗುರಿ ಬೆನ್ನಟ್ಟಿದ ಭಾರತ ತಂಡದ ಆರಂಭಿಕರಾದ ಇಶಾನ್ ಕಿಶನ್ ಮತ್ತು ಶುಭ್ಮನ್ ಗಿಲ್ ಕೇವಲ 6.1 ಓವರ್‌ಗಳಲ್ಲಿ ಕ್ರಮವಾಗಿ ಅಜೇಯ 23 ರನ್ ಮತ್ತು ಅಜೇಯ 27 ರನ್ ಗಳಿಸಿದರು.

Story first published: Sunday, September 17, 2023, 21:41 [IST]
Other articles published on Sep 17, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+