ಶಿವಮೊಗ್ಗ, ಜನವರಿ 19: ಜನವರಿ 27 ರಿಂದ ಫೆಬ್ರವರಿ 13ರ ವರೆಗೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ 23 ವರ್ಷದೊಳಿಗಿನ ಮಹಿಳಾ ಕ್ರಿಕೆಟ್ ಪಂದ್ಯಾವಳಿಗೆ ಶಿವಮೊಗ್ಗ ಜಿಲ್ಲೆಯಿಂದ ಅದಿತಿ ರಾಜೇಶ್ ಆಯ್ಕೆಯಾಗಿದ್ದಾರೆ.
ಎಲ್ಲೂ ಸಲ್ಲುತ್ತಿದ್ದ ಕನ್ನಡಿಗ ರಾಹುಲ್ ದ್ರಾವಿಡ್ ನೆನಪಿಸಿದ ಕೆಎಲ್ ರಾಹುಲ್!
ಜನವರಿ 20 ರಿಂದ 31 ರವರೆಗೆ ಪಾಂಡಿಚೇರಿಯಲ್ಲಿ ನಡೆಯಲಿರುವ 16 ವರ್ಷದೊಳಗಿನ ಬಾಲಕಿಯರ ಸೌತ್ ಝೋನ್ ಅಂತಾರಾಜ್ಯ ಕ್ರಿಕೆಟ್ ಟೂರ್ನಿಗೆ ಶಿವಮೊಗ್ಗದ ಶ್ರೀಲಕ್ಷ್ಮಿ ಮಂಜೇಗೌಡ ಮತ್ತು ನಿರ್ಮಿತ ಸಿ.ಜೆ ಆಯ್ಕೆಯಾಗಿದ್ದು, ಇಬ್ಬರೂ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸುತ್ತಾರೆ.
ಹರ್ಭಜನ್ ಸಿಂಗ್ ದಾಖಲೆ ಮುರಿದು ಮಿನುಗಿದ ಕುಲದೀಪ್ ಯಾದವ್
ಆಯ್ಕೆಯಾಗಿರುವ ಈ ಮೂವರು ಕ್ರೀಡಾಪಟುಗಳು ಸಹ್ಯಾದ್ರಿ ಕಾಲೇಜಿನಲ್ಲಿರುವ ಸಹ್ಯಾದ್ರಿ ಕ್ರಿಕೆಟ್ ತರಬೇತಿ ಕೇಂದ್ರದಲ್ಲಿ ಕ್ರಿಕೆಟ್ ತರಬೇತುದಾರ, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಪಿ.ವಿ. ನಾಗರಾಜ್ ಇವರಿಂದ ತರಬೇತಿ ಪಡೆಯುತ್ತಿದ್ದಾರೆ.
ಭಾರತ vs ಆಸ್ಟ್ರೇಲಿಯಾ: ಕೆಟ್ಟ ದಾಖಲೆಗೆ ಕಾರಣರಾದ ವಿರಾಟ್ ಕೊಹ್ಲಿ!
ಈ ಪ್ರತಿಭಾವಂತ ಕ್ರಿಕೆಟ್ಪಟುಗಳಿಗೆ ಸಹ್ಯಾದ್ರಿ ಕ್ರಿಕೆಟ್ ತರಬೇತಿ ಕೇಂದ್ರದ ಅಧ್ಯಕ್ಷರು/ಕಾರ್ಯದರ್ಶಿಗಳು, ಕೆ.ಎಸ್.ಸಿ.ಎ ಶಿವಮೊಗ್ಗ ವಲಯದ ಸಂಚಾಲಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ಸಿಬ್ಬಂದಿ ವರ್ಗದವರು ಹಾಗೂ ಸಹ್ಯಾದ್ರಿ ಕಾಲೇಜಿನ ಪ್ರಾಂಶುಪಾಲರು ಮತ್ತು ಸಿಬ್ಬಂದಿ ವರ್ಗದವರು ಶುಭ ಹಾರೈಸಿದ್ದಾರೆ.