For Quick Alerts
ALLOW NOTIFICATIONS  
For Daily Alerts
 

IND vs ENG: ಟೀಮ್ ಇಂಡಿಯಾ ತಲೆ ಕೆಡಿಸುತ್ತಿರುವ ಮೂರು ಪ್ರಶ್ನೆ? ಸವಾಲಾಗಿದೆ ತಂಡದ ಸಂಯೋಜನೆ

ಹೈದರಾಬಾದ್‌ನಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ಟೀಮ್ ಇಂಡಿಯಾ 28 ರನ್‌ ಸೋಲು ಅನುಭವಿಸಿದ್ದ ಆತಿಥೇಯ ತಂಡದಲ್ಲಿ ಆತಂಕ ಮನೆ ಮಾಡಿದೆ. ವಿರಾಟ್ ಕೊಹ್ಲಿ ಮೊದಲೆರೆಡು ಟೆಸ್ಟ್‌ಗಳಿಗೆ ಅಲಭ್ಯರಾಗಿರುವುದು ತಂಡಕ್ಕೆ ಪೆಟ್ಟು ಬಿದ್ದಿದೆ. ಇನ್ನು ಮಿಡ್ಲ್‌ ಆರ್ಡರ್‌ ಬ್ಯಾಟರ್‌ ಕೆಎಲ್ ರಾಹುಲ್‌ ಹಾಗೂ ಆಲ್‌ರೌಂಡರ್‌ ರವೀಂದ್ರ ಜಡೇಜಾ ಕೂಡ ಗಾಯದ ಕಾರಣ ಎರಡನೇ ಟೆಸ್ಟ್‌ನಿಂದ ಹೊರಗುಳಿದಿದ್ದಾರೆ.

ಐದು ಟೆಸ್ಟ್‌ಗಳ ಪಂದ್ಯಗಳ ಸರಣಿಯನ್ನು ಸಮಬಲಗೊಳಿಸಿ, ಸರಣಿಯಲ್ಲಿ ಪಟಿದೇಳಲು ಟೀಮ್ ಇಂಡಿಯಾಕ್ಕೆ ಬೆಸ್ಟ್‌ ಚಾನ್ಸ್‌ ಸಿಕ್ಕಿದೆ. ಟೀಮ್ ಇಂಡಿಯಾ ಎರಡನೇ ಟೆಸ್ಟ್‌ನಲ್ಲಿ ಗೆಲ್ಲಲೇಬೇಕು. ಟೀಂ ಇಂಡಿಯಾ ಮೇಲೆ ಒತ್ತಡವಿದ್ದು, ಫೆ.2ರಿಂದ ವಿಶಾಖಪಟ್ಟಣದಲ್ಲಿ ನಡೆಯಲಿರುವ ಎರಡನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಈ ಮೂರು ಪ್ರಶ್ನೆಗಳಿಗೆ ಪರಿಹಾರ ಕಂಡುಕೊಳ್ಳಬೇಕಿದೆ.

Three questions that are bothering Team India?, The challenge is team composition

ಸ್ಪಿನ್ನಿಂಗ್ ಟ್ರ್ಯಾಕ್ ಅಥವಾ ಫ್ಲಾಟ್ ಪಿಚ್?

ದ್ವಿಪಕ್ಷೀಯ ಸರಣಿಗಳಲ್ಲಿ, ಪ್ರತಿ ಆತಿಥೇಯ ತಂಡವು ತನ್ನ ಶಕ್ತಿಗೆ ಅನುಗುಣವಾಗಿ ಪಿಚ್ ಅನ್ನು ತಯಾರಿಸುತ್ತದೆ. ಇಂತಹ ಪರಿಸ್ಥಿತಿಯಲ್ಲಿ, ಟೀಮ್ ಇಂಡಿಯಾ ಟರ್ನಿಂಗ್ ಟ್ರ್ಯಾಕ್ ನಿರ್ಮಿಸಲು ಒತ್ತ ನೀಡುತ್ತದೆ. ಆದರೆ ಸರಣಿಯ ಮೊದಲ ಟೆಸ್ಟ್‌ನಲ್ಲಿ ಆಂಗ್ಲ ಬ್ಯಾಟ್ಸ್‌ಮನ್‌ಗಳು ಸ್ಪಿನ್ ಬೌಲಿಂಗ್ ಅನ್ನು ಎದುರಿಸಿದ ರೀತಿ, ಟ್ರ್ಯಾಕ್‌ಗೆ ಸಂಬಂಧಿಸಿದಂತೆ ಭಾರತದ ಡ್ರೆಸ್ಸಿಂಗ್ ರೂಮ್‌ನಲ್ಲಿ ಹಲವು ಪ್ರಶ್ನೆಗಳು ಎದ್ದಿವೆ.

ಇಂಗ್ಲಿಷ್ ಬ್ಯಾಟ್ಸ್‌ಮನ್‌ಗಳು, ವಿಶೇಷವಾಗಿ ಒಲ್ಲಿ ಪೋಪ್, ತಮ್ಮ ಸ್ವೀಪ್ ಮತ್ತು ರಿವರ್ಸ್ ಸ್ವೀಪ್‌ಗಳೊಂದಿಗೆ ಎರಡನೇ ಇನ್ನಿಂಗ್ಸ್‌ನಲ್ಲಿ ಅಶ್ವಿನ್ ಮತ್ತು ಜಡೇಜಾರಂತಹ ಅನುಭವಿ ಸ್ಪಿನ್ನರ್‌ಗಳನ್ನು ತಟಸ್ಥಗೊಳಿಸಿದರು. ಇಂಗ್ಲೆಂಡ್‌ನ ಸ್ಪಿನ್ನರ್ ಟಾಮ್ ಹಾರ್ಟ್ಲಿ ಚೊಚ್ಚಲ ಪಂದ್ಯದಲ್ಲೇ ಭಾರತದ ಬ್ಯಾಟ್ಸ್‌ಮನ್‌ಗಳನ್ನು ಕಾಡಿದರು. ಅಂದರೆ ಸ್ಪಿನ್ನಿಂಗ್ ಟ್ರ್ಯಾಕ್ ನಿರ್ಮಿಸಿದ್ದು ಟೀಮ್ ಇಂಡಿಯಾಕ್ಕೆ ಸಂಪೂರ್ಣವಾಗಿ ಹಿನ್ನಡೆಗೆ ಕಾರಣವಾಗಿತ್ತು.

ಶುಭ್ಮನ್ ಅಥವಾ ಸರ್ಫರಾಜ್?

ಭಾರತ ತಂಡವು ಟರ್ನಿಂಗ್ ಟ್ರ್ಯಾಕ್‌ನಲ್ಲಿ ಬ್ಯಾಟಿಂಗ್ ವಿಭಾಗವನ್ನು ಬಲಪಡಿಸಿಕೊಳ್ಳುವ ಅವಶ್ಯಕತೆ ಇದೆ. ಈ ಹಿನ್ನೆಲೆಯಲ್ಲಿ ಟೀಮ್ ಇಂಡಿಯಾದ ಮಿಡ್ಲ್‌ ಆರ್ಡರ್‌ ಬ್ಯಾಟಿಂಗ್ ವಿಭಾಗದಲ್ಲಿ ಶುಭಮನ್ ಗಿಲ್ ಹೊರೆಯಾಗಿ ಪರಿಣಮಿಸಿದ್ದಾರೆ. ಇವರನ್ನು ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ನೀಡುವುದು ಕಷ್ಟಕರವಾಗಿದೆ. ಟರ್ನಿಂಗ್ ಟ್ರ್ಯಾಕ್‌ಗಳಲ್ಲಿ ಗಿಲ್‌ ಆಡುವಲ್ಲಿ ಎಡುವುತ್ತಿರುವುದರಿಂದ ಅವರ ಸ್ಥಾನದಲ್ಲಿ ಬೇರೆ ಆಟಗಾರನ ಹುಡುಕಾಟ ಜೋರಾಗಿದೆ.

Three questions that are bothering Team India?, The challenge is team composition

ಇದಕ್ಕೂ ಮೊದಲು ಆಸ್ಟ್ರೇಲಿಯಾ ವಿರುದ್ಧದ ತವರಿನಲ್ಲಿ ನಡೆದ ಇಂದೋರ್ ಟೆಸ್ಟ್‌ನಲ್ಲಿ ಭಾರತ ತಂಡ ಮೊದಲ ಇನಿಂಗ್ಸ್‌ನಲ್ಲಿ 34 ಓವರ್‌ಗಳಲ್ಲಿ 109 ರನ್‌ಗಳಿಗೆ ಸೀಮಿತವಾಗಿತ್ತು. 2021 ರಲ್ಲಿ ಅಹಮದಾಬಾದ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಹತ್ತು ವಿಕೆಟ್‌ಗಳಿಂದ ಗೆಲ್ಲುವ ದಾಖಲಿಸಿತ್ತು. ಟೀಮ್ ಇಂಡಿಯಾ ಮೊದಲ ಇನ್ನಿಂಗ್ಸ್‌ನಲ್ಲಿ 145 ರನ್‌ಗಳಿಗೆ ಆಲೌಟ್ ಸಾಧಿಸುವಲ್ಲಿ ವಿಫಲವಾಯಿತು. ನಂತರ ಜೋ ರೂಟ್ ಎಂಟು ರನ್‌ಗಳಿಗೆ ಐದು ವಿಕೆಟ್ ಪಡೆದರು. ಅಂದರೆ ಟರ್ನಿಂಗ್ ಟ್ರ್ಯಾಕ್‌ನಲ್ಲಿ ನಮ್ಮ ತಡದ ಬ್ಯಾಟಿಂಗ್ ಅನ್ನು ಬಲಪಡಿಸಬೇಕು. ಇದಕ್ಕಾಗಿ ಫಾರ್ಮ್ ನಲ್ಲಿರುವ ಸರ್ಫರಾಜ್ ಖಾನ್ ಗೆ ಪದಾರ್ಪಣೆ ಅವಕಾಶ ನೀಡಬಹುದು. ಸರ್ಫರಾಜ್ ಆಕ್ರಮಣಕಾರಿ ವಿಧಾನದೊಂದಿಗೆ ಬ್ಯಾಟಿಂಗ್ ಮಾಡುತ್ತಾರೆ. ಇವರ ಆಗಮನದಿದ ಟೀಮ್ ಇಂಡಿಯಾ ತನ್ನ ಬ್ಯಾಟಿಂಗ್ ಲೈನ್‌ಅಪ್ ಅನ್ನು ಬಲಪಡಿಸಲು ನಿರ್ಧರಿಸಬಹುದು.

ಇಬ್ಬರು ವೇಗಿಗಳು ಅಥವಾ ನಾಲ್ಕು ಸ್ಪಿನ್ನರ್‌ಗಳು?

ಭಾರತದಲ್ಲಿ ನಡೆದ ಟೆಸ್ಟ್ ಪಂದ್ಯಗಳಲ್ಲಿ, ಟೀಂ ಇಂಡಿಯಾ ವೇಗಿಗಳಿಗೆ ಹೆಚ್ಚಿನ ಒತ್ತನ್ನು ನೀಡಿಲ್ಲ. ಆದರೆ ತಂಡದ ಆಯ್ಕೆಗೆ ಬಂದಾಗ, ಭಾರತವು ಇಬ್ಬರು ವೇಗಿಗಳು ಮತ್ತು ಮೂವರು ಸ್ಪಿನ್ನರ್‌ಗಳೊಂದಿಗೆ ಹೋಗುತ್ತದೆ. ಹೈದರಾಬಾದ್ ಟೆಸ್ಟ್‌ನಲ್ಲಿಯೂ ಟೀಂ ಇಂಡಿಯಾ ಸಾಂಪ್ರದಾಯಿಕ ಚಿಂತನೆಯೊಂದಿಗೆ ಎಂಟ್ರಿಕೊಟ್ಟಿತ್ತು. ಪ್ರವಾಸಿ ಇಂಗ್ಲೆಂಡ್ ತಂಡ ಮೊದಲ ಟೆಸ್ಟ್‌ನಲ್ಲಿ ರಿಸ್ಕ್ ತೆಗೆದುಕೊಂಡು ಒಬ್ಬರೇ ವೇಗಿಯೊಂದಿಗೆ ಪ್ರವೇಶಿಸಿದೆ. ಅವರ ನಿರ್ಧಾರ ಬಹಳ ಮಟ್ಟಿಗೆ ಸರಿ ಎಂದು ಸಾಬೀತಾಯಿತು.

ಭಾರತ ಎರಡನೇ ಟೆಸ್ಟ್‌ನಲ್ಲಿ ನಾಲ್ವರು ಸ್ಪಿನ್ನರ್‌ಗಳೊಂದಿಗೆ ಕಣಕ್ಕಿಳಿಯಲು ಯೋಚಿಸುತ್ತಿದೆ. ಆರ್ ಅಶ್ವಿನ್ ಮತ್ತು ಅಕ್ಷರ್ ಪಟೇಲ್ ಹೊರತುಪಡಿಸಿ ಕುಲದೀಪ್ ಯಾದವ್ ಮತ್ತು ವಾಷಿಂಗ್ಟನ್ ಸುಂದರ್ ಅವರನ್ನು ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ನೀಡಬಹುದು. ಸೌರಭ್ ಕುಮಾರ್, ಜಡೇಜಾ ಅವರಂತೆ ಎಡಗೈ ಸ್ಪಿನ್ನರ್ ಆಗಿದ್ದು, ಪ್ರಥಮ ದರ್ಜೆ ಕ್ರಿಕೆಟ್ ನಲ್ಲೂ ಶತಕ ಸಿಡಿಸಿರುವ ಕಾರಣ ಸುಂದರ್ ಮತ್ತು ಸೌರಭ್ ನಡುವೆ ಒಬ್ಬರ ಆಯ್ಕೆ ವಿಚಾರದಲ್ಲಿ ಜಟಾಪಟಿ ಏರ್ಪಡಬಹುದು.

Story first published: Wednesday, January 31, 2024, 11:07 [IST]
Other articles published on Jan 31, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+