ರಾಯ್ ಪುರ್, ಮೇ.12: ನೇಪಾಳದಲ್ಲಿ ಸಂಭವಿಸಿದ ಭೂಕಂಪ ಹಾಗೂ ಉತ್ತರ ಭಾರತದ ಹಲವೆಡೆಯ ಕಂಪನದ ಪರಿಣಾಮ ಐಪಿಎಲ್ ಆಟಗಾರರಿಗೂ ತಟ್ಟಿದೆ. ಮೇ.12ರಂದು ಇಲ್ಲಿನ ಕ್ರೀಡಾಂಗಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಡೆಲ್ಲಿ ಡೇರ್ ಡೆವಿಲ್ಸ್ ತಂಡದ ನಡುವೆ ಪಂದ್ಯ ನಿಗದಿಯಾಗಿದೆ. ಉಭಯ ತಂಡದ ಆಟಗಾರರು ಸುರಕ್ಷಿತವಾಗಿದ್ದಾರೆ ಎಂದು ಬಿಸಿಸಿಐ ಅಧಿಕಾರಿಗಳು ಹೇಳಿದ್ದಾರೆ.
ಭೂಕಂಪವಾದ ಸಂದರ್ಭದಲ್ಲಿ ಕೆಲ ಆಟಗಾರರು ಮೈದಾನದಲ್ಲಿ ತಯಾರಿ ನಡೆಸುತ್ತಿದ್ದರೆ, ಮತ್ತೆ ಕೆಲ ಆಟಗಾರರು, ಪಂದ್ಯದಲ್ಲಿ ಕಾರ್ಯ ನಿರ್ವಹಿಸುವ ಅಂಪೈರ್ ಹಾಗೂ ಇನ್ನಿತರೆ ಅಧಿಕಾರಿಗಳು ಹೋಟೆಲ್ ರೂಮಿನಲ್ಲಿ ತಂಗಿದ್ದರು.
[47 ದಿನ, 60 ಪಂದ್ಯ, ಫುಲ್ ಟೈಂ ಟೇಬಲ್] | [8 ತಂಡಗಳ ನೂರೆಂಟು ಆಟಗಾರರು] | [ಐಪಿಎಲ್ 2015: ಫ್ಯಾನ್ಸಿಗೆ ಗೈಡ್]
ಇಲ್ಲಿ ನಮ್ಮ ರೂಮಿನ ಪಕ್ಕದಲ್ಲೇ ಭೂಮಿ ಕಂಪಿಸಿದಂತೆ ಅನುಭವವಾಯಿತು. ಎಂದು ಶ್ರೀಲಂಕಾದ ಮಾಜಿ ಆಲ್ ರೌಂಡರ್ ರಸೆಲ್ ಅರ್ನಾಲ್ಡ್ ಟ್ವೀಟ್ ಮಾಡಿದ್ದಾರೆ. [ನೇಪಾಳದಲ್ಲಿ ಮತ್ತೆ ಪ್ರಬಲ ಭೂಕಂಪ, ದೆಹಲಿ ಗಡ ಗಡ]
