ಇನ್ನೇನು ಕೆಲವೇ ದಿನಗಳಲ್ಲಿ ಏಷ್ಯಾ ಕಪ್ ಟಿ20 ಕ್ರಿಕೆಟ್ ಟೂರ್ನಿಗೆ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗುತ್ತದೆ. ಈ ತಂಡದಲ್ಲಿ ಯಾವೆಲ್ಲಾ ಆಟಗಾರರಿಗೆ ಸ್ಥಾನ ಲಭಿಸುತ್ತದೆ ಎಂಬುದೇ ದೊಡ್ಡ ಪ್ರಶ್ನೆಯಾಗಿದೆ. ಇಂಗ್ಲೆಂಡ್ ಪ್ರವಾಸದಲ್ಲಿ ಸ್ಥಿರ ಪ್ರದರ್ಶನ ನೀಡಿದ ಆಟಗಾರರಿಗೂ ಈ ತಂಡದಲ್ಲಿ ಸ್ಥಾನ ಸಿಗುತ್ತದಾ ಎಂಬ ಪ್ರಶ್ನೆಗಳು ಉದ್ಭವಿಸಿವೆ. ಹಾಗೆಲ್ಲಾ ಇಂಗ್ಲೆಂಡ್ ಪ್ರವಾಸದಲ್ಲಿ ಮಿಂಚಿದ ಯಾವೆಲ್ಲಾ ಆಟಗಾರರು ಅವಕಾಶ ವಂಚಿತರಾಗಬಹುದು ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ.
ಇಂಗ್ಲೆಂಡ್ ಪ್ರವಾಸದಲ್ಲಿ ಟೀಮ್ ಇಂಡಿಯಾದ ಭರವಸೆಯ ಆಟಗಾರರು ಭರ್ಜರಿ ಪ್ರದರ್ಶನ ನೀಡಿ ತಂಡಕ್ಕೆ ಆಧಾರವಾಗಿದ್ರು. ಈ ಪ್ರವಾಸದಲ್ಲಿ ಟೀಮ್ ಇಂಡಿಯಾ ನಾಯಕ ಶುಭಮನ್ ಗಿಲ್ ಆರ್ಭಟ ನಡೆಸಿ ಅತಿ ಹೆಚ್ಚು ರನ್ ಕಲೆ ಹಾಕಿದ ಹಿರಿಮೆ ತನ್ನದಾಗಿಸಿಕೊಂಡಿದ್ದಾರೆ. ಇನ್ನು ಇವರನ್ನು ಬಿಟ್ಟು ರಿಷಭ್ ಪಂತ್ ಹಾಗೂ ಕೆಎಲ್ ರಾಹುಲ್, ಯಶಸ್ವಿ ಜೈಸ್ವಾಲ್ ಸ್ಥಿರ ಪ್ರದರ್ಶನ ನೀಡಿ ತಂಡ ಸಮಬಲ ಸಾಧಿಸುವಲ್ಲಿ ಶ್ರಮಿಸಿದ್ದರು.

ಇಂಗ್ಲೆಂಡ್ ಪ್ರವಾಸದಲ್ಲಿ ಟೀಮ್ ಇಂಡಿಯಾ ಪರ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿರುವ ರಿಷಭ್ ಪಂತ್, ರನ್ ಮಹಲ್ ಕಟ್ಟಿದ್ದರು. ಇವರು ಇಂಗ್ಲೆಂಡ್ ಒಂದೇ ಟೆಸ್ಟ್ ಪಂದ್ಯದ ಎರಡೂ ಇನಿಂಗ್ಸ್ಗಳಲ್ಲಿ ಶತಕ ಬಾರಿಸಿದ ಹಿರಿಮೆ ಹೊಂದಿದ್ದಾರೆ. ಅಲ್ಲದೆ ಇವರ ಸ್ಫೋಟಕ ಆಟಕ್ಕೆ ಆಂಗ್ಲರು ಸಹ ಬೆಚ್ಚಿಬಿದ್ದಿದ್ರು. ಈ ಪ್ರವಾಸದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಪಂತ್ ಬ್ಯಾಟಿಂಗ್ ಮಾಡುವಾಗ ಕ್ರಿಸ್ ವೋಕ್ಸ್ ಎಸೆದ ಚೆಂಡು ಅವರ ಪಾದಕ್ಕೆ ಬಡಿದು ಗಾಯಕ್ಕೆ ತುತ್ತಾಗಿದ್ರು. ಹೀಗಾಗಿ ಐದನೇ ಟೆಸ್ಟ್ ಪಂದ್ಯ ಆಡಿರಲಿಲ್ಲ. ಇವರು ಇಂಗ್ಲೆಂಡ್ ಪ್ರವಾಸದಲ್ಲಿ 479 ರನ್ ಸಿಡಿಸಿದ್ದಾರೆ.
ರಿಷಭ್ ಪಂತ್ ಅವರ ಗಾಯ ಇನ್ನು ಚೇತರಿಕೆ ಕಾಣುತ್ತಿದ್ದು, ಇವರು ಏಷ್ಯಾ ಕಪ್ ತಂಡದಲ್ಲಿ ಸ್ಥಾನ ಪಡೆಯುವುದು ಡೌಟ್ ಎಂದು ಹೇಳಲಾಗುತ್ತಿದೆ. ಇನ್ನು ಇವರ ಬದಲಿಗೆ ಸಂಜು ಸ್ಯಾಮ್ಸನ್ ತಂಡದಲ್ಲಿ ಸ್ಥಾನ ಪಡೆಯಲಿದ್ದಾರೆ. ಇವರು ಇತ್ತೀಚಿನ ದಿನಗಳಲ್ಲಿ ಟಿ20 ಕ್ರಿಕೆಟ್ನಲ್ಲಿ ಅಮೋಘ ಬ್ಯಾಟಿಂಗ್ ನಡೆಸುತ್ತಿದ್ದಾರೆ. ಹೀಗಾಗಿ ಇವರು ಮೊದಲ ಆಯ್ಕೆಯ ವಿಕೆಟ್ ಕೀಪರ್ ಆಗಿ ಆಯ್ಕೆ ಆಗಲಿದ್ದಾರೆ.

ಇಂಗ್ಲೆಂಡ್ ಪ್ರವಾಸದಲ್ಲಿ ಆರಂಭಿಕರಾಗಿ ಟೆಸ್ಟ್ ಪಂದ್ಯಗಳಲ್ಲಿ ಆಡಿ ತಂಡಕ್ಕೆ ಭರ್ಜರಿ ಆರಂಭ ನೀಡುವಲ್ಲಿ ಸಫಲವಾಗಿರುವ ಕೆಎಲ್ ರಾಹುಲ್ ಸಹ ಏಷ್ಯಾ ಕಪ್ ತಂಡದಲ್ಲಿ ಸ್ಥಾನ ಪಡೆಯುವುದು ಡೌಟ್ ಎಂದು ಹೇಳಲಾಗುತ್ತಿದೆ. ಈಗಾಗಲೇ ಸಿಕ್ಕ ಅವಕಾಶವನ್ನು ಬಳಸಿಕೊಂಡು ಯುವಕರು ಅಬ್ಬರಿಸುತ್ತಿದ್ದಾರೆ. ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ ಆರಂಭಿಕರಾಗಿ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಶುಭಮನ್ ಗಿಲ್ ಹಾಗೂ ಯಶಸ್ವಿ ಜೈಸ್ವಾಲ್ ಬ್ಯಾಕ್ ಅಪ್ ಓಪನರ್ ಆಗಿ ತಂಡಕ್ಕೆ ಸೇರಿಕೊಳ್ಳಬಹುದು. ಹೀಗಾಗಿ ಕೆಎಲ್ ರಾಹುಲ್ ಏಷ್ಯಾ ಕಪ್ನಲ್ಲಿ ಸ್ಥಾನ ಪಡೆಯುವುದು ಡೌಟ್ ಎನ್ನಲಾಗುತ್ತಿದೆ. ಏಷ್ಯಾ ಕಪ್ಗೆ ತಂಡವನ್ನು ಪ್ರಕಟಿಸಿದಾಗ ಇದಕ್ಕೆಲಾ ಉತ್ತರ ಸಿಗಲಿದೆ.