ಮುಂದಿನ ವರ್ಷ ನಡೆಯಲಿರುವ ಐಸಿಸಿ ವಿಶ್ವಕಪ್ನಿಂದ ಹಿಂದೆ ಸರಿಯುವ ಪಾಕಿಸ್ತಾನದ ಬೆದರಿಕೆಗೆ ಭಾರತ ಸರ್ಕಾರ ಇಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ. 'ನೀವು ಭಾರತವನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ' ಎಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಹೇಳಿದರು. ಎಲ್ಲಾ ಅಗ್ರ ತಂಡಗಳು ವಿಶ್ವಕಪ್ಗಾಗಿ ದೇಶಕ್ಕೆ ಬರುತ್ತವೆ ಎಂದು ಪ್ರತಿಪಾದಿಸಿದರು.
2023ರ ಏಷ್ಯಾ ಕಪ್ ಅನ್ನು ಪಾಕಿಸ್ತಾನದಿಂದ ಸ್ಥಳಾಂತರಿಸಿ ತಟಸ್ಥ ಸ್ಥಳದಲ್ಲಿ ಆಡಿಸಲಾಗುವುದು ಎಂದು ಬಿಸಿಸಿಐ ಕಾರ್ಯದರ್ಶಿ ಮಂಗಳವಾರ ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ), ಭಾರತದಲ್ಲಿ ನಡೆಯುವ 2023ರ ವಿಶ್ವಕಪ್ನಿಂದ ಹಿಂದೆ ಸರಿಯುವುದಾಗಿ ಬೆದರಿಕೆ ಹಾಕಿತ್ತು.
2023ರ ಏಷ್ಯಾ ಕಪ್ ಸ್ಥಳ ಬದಲಾವಣೆ ಬಗ್ಗೆ ಬಿಸಿಸಿಐ, ಜಯ್ ಶಾ ವಿರುದ್ಧ ಶಾಹಿದ್ ಅಫ್ರಿದಿ ವಾಗ್ದಾಳಿ
ಐಸಿಸಿ ಏಕದಿನ ವಿಶ್ವಕಪ್ 2023 ಭಾರತದಲ್ಲಿ ನಡೆಯಲಿದೆ ಮತ್ತು ಪಾಕಿಸ್ತಾನ ಸೇರಿದಂತೆ ಭಾಗವಹಿಸುವ ದೇಶಗಳನ್ನು ಆತ್ಮೀಯವಾಗಿ ಆಹ್ವಾನಿಸಲಾಗುವುದು ಮತ್ತು ಪಂದ್ಯಾವಳಿಯು ವೇಳಾಪಟ್ಟಿಯಂತೆ ನಡೆಯಲಿದೆ ಎಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಹೇಳಿದರು.