ಬೆಂಗಳೂರು, ಆಗಸ್ಟ್ 02: ಭಾರತ ಎ ತಂಡದ ಮುಂಬರುವ ತ್ರಿಕೋನ ಏಕದಿನ ಸರಣಿಗೆ ದೆಹಲಿ ಬ್ಯಾಟ್ಸ್ ಮನ್ ಉನ್ಮುಕ್ತ್ ಚಂದ್ ನಾಯಕನಾಗಿ ಆಯ್ಕೆಯಾಗಿದ್ದಾರೆ. ಆ.5 ರಿಂದ ಚೆನ್ನೈನಲ್ಲಿ ಆರಂಭವಾಗಲಿರುವ ತ್ರಿಕೋನ ಸರಣಿಯಲ್ಲಿ ಆತಿಥೇಯ ಭಾರತದ ಜೊತೆಗೆ ಆಸ್ಟ್ರೇಲಿಯ ಎ ಹಾಗೂ ದಕ್ಷಿಣ ಆಫ್ರಿಕ ಎ ತಂಡಗಳು ಆಡಲಿವೆ.
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಸಂದೀಪ್ ಪಾಟೀಲ್ ನೇತೃತ್ವದ ಆಯ್ಕೆ ಸಮಿತಿ 15 ಸದಸ್ಯರನ್ನು ಒಳಗೊಂಡ ತಂಡವನ್ನು ಆಯ್ಕೆ ಮಾಡಿದ್ದು, ಕರ್ನಾಟಕದ ಬ್ಯಾಟ್ಸ್ ಮನ್ ಕರುಣ್ ನಾಯರ್ರನ್ನು ಉಪ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ.
