ದೇಶೀಯ ಕ್ರಿಕೆಟ್ನ ಏಕದಿನ ಮಾದರಿಯ ಪ್ರತಿಷ್ಠಿತ ಟೂರ್ನಿಯಾಗಿರುವ ವಿಜಯ್ ಹಜಾರೆ ಟ್ರೋಫಿ ಟೂರ್ನಿ ಈಗ ಕ್ವಾರ್ಟರ್ ಫೈನಲ್ ಹಂತಕ್ಕೆ ತಲುಪಿದೆ. ಕ್ವಾರ್ಟರ್ ಫೈನಲ್ನಲ್ಲಿ ಇಂದು ಕರ್ನಾಟಕ ಹಾಗೂ ಪಂಜಾಬ್ ತಂಡಗಳು ಮುಖಾಮುಖಿಯಾಗಿದ್ದು ತೀವ್ರ ಪೈಪೋಟಿಯ ಪಂದ್ಯವನ್ನು ಅಭಿಮಾನಿಗಳು ನಿರೀಕ್ಷಿಸುತ್ತಿದ್ದಾರೆ. ಈ ಪಂದ್ಯದಲ್ಲಿ ಕರ್ನಾಟಕ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಈ ಬಾರಿಯ ವಿಜಯ್ ಹಜಾರೆ ಟ್ರೋಫಿಯಲ್ಲಿ ಕರ್ನಾಟಕ ತಂಡ ಮಯಾಂಕ್ ಅಗರ್ವಾಲ್ ನಾಯಕತ್ವದಲ್ಲಿ ಕಣಕ್ಕಿಳಿದಿದ್ದು ಲೀಗ್ ಹಂತದಲ್ಲಿ ಅದ್ಭುತ ಪ್ರದರ್ಶನ ನೀಡಿದೆ. ಆಡಿರುವ 7 ಪಂದ್ಯಗಳಲ್ಲಿ 6 ಗೆಲುವು ಸಾಧಿಸಿದ್ದು ಗುಂಪಿನ ಅಗ್ರ ತಂಡವಾಗಿ ಕ್ವಾರ್ಟರ್ಫೈನಲ್ಗೆ ಪ್ರವೇಶ ಪಡೆದುಕೊಂಡಿದೆ. ಕಳೆದ ಪಂದ್ಯದಲ್ಲಿ ಜಾರ್ಖಂಡ್ ವಿರುದ್ಧ 5 ವಿಕೆಟ್ಗಳ ಅಂತರದ ಗೆಲುವು ಸಾಧಿಸಿ ಬೀಗಿತ್ತು.
ಇತ್ತ ಪಂಜಾಬ್ ತಂಡ ಕೂಡ ಬಲಿಷ್ಠವಾಗಿದ್ದು ಲೀಗ್ ಹಂತದಲ್ಲಿ ಯಾವುದೇ ಸೋಲು ಕಾಣದೇ ಕ್ವಾರ್ಟರ್ಫೈನಲ್ಗೇರಿದೆ. ಹೀಗಾಗಿ ಈ ಪಂದ್ಯದಲ್ಲಿಯೂ ಪಂಜಾಬ್ ಗೆಲ್ಲುವ ನೆಚ್ಚಿನ ತಂಡ ಎನಿಸಿಕೊಂಡಿದ್ದರು ಕರ್ನಾಟಕ ಈ ಸವಾಲನ್ನು ಯಾವ ರೀತಿ ಮೆಟ್ಟಿನಿಲ್ಲಲಿದೆ ಎಂಬುದು ಕುತೂಹಲ ಮೂಡಿಸಿದೆ.
ಪಂಜಾಬ್ ಆಡುವ ಬಳಗ: ಅಭಿಷೇಕ್ ಶರ್ಮಾ, ಪ್ರಭಾಸಿಮ್ರಾನ್ ಸಿಂಗ್, ಅನ್ಮೋಲ್ಪ್ರೀತ್ ಸಿಂಗ್, ಮಂದೀಪ್ ಸಿಂಗ್ (ನಾಯಕ), ಅನ್ಮೋಲ್ ಮಲ್ಹೋತ್ರಾ (ವಿಕೆಟ್ ಕೀಪರ್), ಹರ್ಪ್ರೀತ್ ಬ್ರಾರ್, ಸನ್ವಿರ್ ಸಿಂಗ್, ರಮಣದೀಪ್ ಸಿಂಗ್, ಮಯಾಂಕ್ ಮಾರ್ಕಂಡೆ, ಬಲ್ತೇಜ್ ಸಿಂಗ್, ಸಿದ್ದಾರ್ಥ್ ಕೌಲ್
ಬೆಂಚ್: ಗೌರವ್ ಚೌಧರಿ, ಅಶ್ವನಿ ಕುಮಾರ್, ವಿನಯ್ ಚೌಧರಿ, ಪುಖ್ರಾಜ್ ಮಾನ್
ಕರ್ನಾಟಕ ಆಡುವ ಬಳಗ: ರವಿಕುಮಾರ್ ಸಮರ್ಥ್, ಮಯಾಂಕ್ ಅಗರ್ವಾಲ್ (ನಾಯಕ), ನಿಕಿನ್ ಜೋಸ್, ಮನೀಶ್ ಪಾಂಡೆ, ಶ್ರೇಯಸ್ ಗೋಪಾಲ್, ಶರತ್ ಬಿಆರ್ (ವಿಕೆಟ್ ಕೀಪರ್), ಮನೋಜ್ ಭಾಂಡಗೆ, ಕೃಷ್ಣಪ್ಪ ಗೌತಮ್, ರೋನಿತ್ ಮೋರೆ, ವಿಧ್ವತ್ ಕಾವೇರಪ್ಪ, ವಾಸುಕಿ ಕೌಶಿಕ್
ಬೆಂಚ್: ಮುರಳೀಧರ ವೆಂಕಟೇಶ್, ಜಗದೀಶ ಸುಚಿತ್, ಅಭಿನವ್ ಮನೋಹರ್, ನಿಹಾಲ್ ಉಳ್ಳಾಲ್