ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ವಿಜಯ್ ಹಜಾರೆ ಟ್ರೋಫಿ: ಕ್ವಾರ್ಟರ್‌ಫೈನಲ್‌ನಲ್ಲಿ ಕರ್ನಾಟಕಕ್ಕೆ ಮನೀಶ್ ಪಾಂಡೆ, ಕೆ ಗೌತಮ್ ಬಲ

Manish Pandey, K. Gowtham included in Karnataka squad for knockouts

ವಿಜಯ್ ಹಜಾರೆ ಟೂರ್ನಿಯಲ್ಲಿ ಕರ್ನಾಟಕ ಅದ್ಭುತವಾಗಿ ಪ್ರದರ್ಶನ ನೀಡುತ್ತಿದ್ದು ಕ್ವಾರ್ಟರ್ ಫೈನಲ್ ಹಂತಕ್ಕೆ ಪ್ರವೇಶವನ್ನು ಪಡೆದುಕೊಂಡಿದೆ. ಈ ಹಂತಕ್ಕೆ ಕರ್ನಾಟಕ ಮತ್ತಷ್ಟು ಬಲಿಷ್ಠವಾಗಿ ಕಾಣಿಸಿಕೊಳ್ಳಲಿದೆ. ಅದಕ್ಕೆ ಕಾರಣ ಕರ್ನಾಟಕ ತಂಡಕ್ಕೆ ಇಬ್ಬರು ಅನುಭವಿ ಆಟಗಾರರು ಸೇರಿಕೊಳ್ಳಲಿದ್ದಾರೆ.

ಮನೀಶ್ ಪಾಂಡೆ ಹಾಗೂ ಕೃಷ್ಣಪ್ಪ ಗೌತಮ್ ಕರ್ನಾಟಕ ತಂಡವನ್ನು ಮುಂದಿನ ಹಂತದ ವೇಳೆಗೆ ಸೇರಿಕೊಳ್ಳಲಿದ್ದಾರೆ. ಈ ಬಗ್ಗೆ ಸೋಮವಾರ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೊಸಿಯೇಶನ್ ಸ್ಪಷ್ಟವಾಗಿ ಮಾಹಿತಿಯನ್ನು ನೀಡಿದೆ. ಈ ಅನುಭವಿ ಆಟಗಾರರ ಸೇರ್ಪಡೆ ಕರ್ನಾಟಕ ತಂಡಕ್ಕೆ ದೊಡ್ಡ ಬಲವನ್ನು ನೀಡಲಿದೆ ಎಂಬುದರಲ್ಲಿ ಅನುಮಾನವಿಲ್ಲ.

ವಿರಾಟ್ ಕೊಹ್ಲಿ ಆಧುನಿಕ ದಿನಗಳ ಹೀರೋ ಇದ್ದಂತೆ: ಸ್ಟೀವ್ ವಾವಿರಾಟ್ ಕೊಹ್ಲಿ ಆಧುನಿಕ ದಿನಗಳ ಹೀರೋ ಇದ್ದಂತೆ: ಸ್ಟೀವ್ ವಾ

ಗಾಯಗೊಂಡಿದ್ದ ಮನೀಶ್ ಪಾಂಡೆ ಈಗ ಸಂಪೂರ್ಣವಾಗಿ ಚೇತರಿಕೆಯನ್ನು ಕಂಡಿದ್ದಾರೆ. ಮತ್ತೊಂದೆಡೆ ಟೀಮ್ ಇಂಡಿಯಾದ ನೆಟ್ ಬೌಲರ್ ಆಗಿ ತೆರಳಿದ್ದ ಕೆ ಗೌತಮ್ ಅವರನ್ನು ಬಿಡುಗಡೆಗೊಳಿಸಲಾಗಿದೆ. ಹೀಗಾಗಿ ಈ ಇಬ್ಬರೂ ರಾಜ್ಯ ತಂಡವನ್ನು ಪ್ರತಿನಿಧಿಸುವ ಅವಕಾಶವನ್ನು ಪಡೆದುಕೊಂಡಿದ್ದಾರೆ.

ವಿಜಯ್ ಹಜಾರೆ ಟ್ರೋಫಿಯಲ್ಲಿ 'ಎಲೈಟ್ ಗ್ರೂಫ್ ಸಿ'ಯಲ್ಲಿರುವ ಕರ್ನಾಟಕ ಆಡಿದ ಐದು ಪಂದ್ಯಗಳಲ್ಲಿ ನಾಲ್ಕರಲ್ಲಿ ಗೆಲುವು ಕಂಡಿದೆ. ಈ ಮೂಲಕ ಅಂಕಪಟ್ಟಿಯಲ್ಲಿ ಮೊದಲ ಸ್ಥಾನವನ್ನು ಪಡೆದುಕೊಂಡಿದ್ದು ಈಗಾಗಲೇ ಕ್ವಾರ್ಟರ್ ಫೈನಲ್ ಹಂತಕ್ಕೆ ಪ್ರವೇಶವನ್ನು ಪಡೆದುಕೊಂಡಿದೆ.

ಮೈದಾನದ ಹೊರಗೊಂದು ವಿಶೇಷ ದಾಖಲೆ ಬರೆದ ವಿರಾಟ್ ಕೊಹ್ಲಿಮೈದಾನದ ಹೊರಗೊಂದು ವಿಶೇಷ ದಾಖಲೆ ಬರೆದ ವಿರಾಟ್ ಕೊಹ್ಲಿ

ಕರ್ನಾಟಕ ತಂಡದ ಅಗ್ರ ಕ್ರಮಾಂಕದ ಆಟಗಾರರು ಅತ್ಯುತ್ತಮ ಫಾರ್ಮ್‌ನಲ್ಲಿದ್ದು ತಂಡಕ್ಕೆ ಸಾಕಷ್ಟು ಕೊಡುಗೆಯನ್ನು ನೀಡಿದ್ದಾರೆ. ದೇವದತ್ ಪಡಿಕ್ಕಲ್ ಹಾಗೂ ನಾಯಕ ಆರ್ ಸಮರ್ಥ್ ಅದ್ಭುತವಾಗಿ ಪ್ರದರ್ಶನ ನೀಡುತ್ತಿದ್ದಾರೆ. ಸತತ ಮೂರನೇ ಶತಕವನ್ನು ದಾಖಲಿಸಿ ಮಿಂಚಿದ್ದಾರೆ ದೇವದತ್ ಪಡಿಕ್ಕಲ್.

Story first published: Tuesday, March 2, 2021, 10:41 [IST]
Other articles published on Mar 2, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X