
ಇಬ್ಬರೂ ಮಾತಾಡಿಕೊಂಡು ಸಮಸ್ಯೆ ಬಗೆಹರಿಸಿಕೊಳ್ಳಿ
ವಿರಾಟ್ ಕೊಹ್ಲಿ ಮತ್ತು ಬಿಸಿಸಿಐ ನಡುವಿನ ಬಿರುಕಿನ ಕುರಿತು ಮಾತನಾಡಿರುವ ಕಪಿಲ್ ದೇವ್ ಇಬ್ಬರೂ ಸಹ ತಮ್ಮ ನಡುವೆ ಇರುವ ಬಿರುಕನ್ನು ಆದಷ್ಟು ಬೇಗ ಸರಿಪಡಿಸಿಕೊಳ್ಳಬೇಕು ಎಂದಿದ್ದಾರೆ. ಮೊಬೈಲ್ ತೆಗೆದುಕೊಂಡು ಇಬ್ಬರು ಸಹ ಪರಸ್ಪರ ಮಾತನಾಡಿ ಬಗೆಹರಿಸಿಕೊಳ್ಳಿ, ನಾನು ಎಂಬುದನ್ನು ಪಕ್ಕಕ್ಕಿಟ್ಟು ದೇಶವನ್ನು ಮುಂದೆ ಇಟ್ಟು ಯೋಚಿಸಿ ಎಂದು ಕಪಿಲ್ ದೇವ್ ಸಲಹೆ ನೀಡಿದ್ದಾರೆ.

ಕೊಹ್ಲಿ ನಾಯಕತ್ವ ಬಿಟ್ಟದ್ದರ ಕುರಿತು ಕಪಿಲ್ ದೇವ್ ಹೇಳಿದ್ದಿಷ್ಟು
ಇನ್ನು ವಿರಾಟ್ ಕೊಹ್ಲಿ ಭಾರತ ಟೆಸ್ಟ್ ತಂಡದ ನಾಯಕತ್ವವನ್ನು ತ್ಯಜಿಸಿದ ಕುರಿತು ಮಾತನಾಡಿದ ಕಪಿಲ್ ದೇವ್ ವಿರಾಟ್ ಕೊಹ್ಲಿ ಏನಾದರೂ ಬಿಸಿಸಿಐ ಜೊತೆಗಿನ ಮನಸ್ತಾಪದಿಂದ ಭಾರತ ಟೆಸ್ಟ್ ತಂಡದ ನಾಯಕತ್ವಕ್ಕೆ ರಾಜೀನಾಮೆಯನ್ನು ಸಲ್ಲಿಸಿದ್ದಾರೆ ಎಂದಾದರೆ ಅದರ ಕುರಿತು ನಾನು ಏನನ್ನೂ ಹೇಳಲು ಇಚ್ಛಿಸುವುದಿಲ್ಲ ಎಂದು ಬೇಸರದಿಂದ ಪ್ರತಿಕ್ರಿಯಿಸಿದ್ದಾರೆ. ನಾಯಕನಾದ ಮೇಲೆ ಕೆಲವೊಮ್ಮೆ ಒಂದೊಂದು ನಮಗೆ ಲಭಿಸಲಿದೆ, ಒಂದೊಂದು ಬಾರಿ ಲಭಿಸುವುದಿಲ್ಲ ಎಂದು ಕಪಿಲ್ ದೇವ್ ಹೇಳಿಕೆ ನೀಡಿದ್ದಾರೆ.

ವಿರಾಟ್ ಕೊಹ್ಲಿ ಓರ್ವ ಅತ್ಯದ್ಭುತ ಆಟಗಾರ
ಇನ್ನೂ ಮುಂದುವರೆದು ವಿರಾಟ್ ಕೊಹ್ಲಿ ಪ್ರದರ್ಶನದ ಕುರಿತು ಮಾತನಾಡಿರುವ ಕಪಿಲ್ ದೇವ್ ಆತ ಓರ್ವ ಅತ್ಯದ್ಭುತ ಆಟಗಾರ ಎಂದು ಹೊಗಳಿದ್ದಾರೆ. ವಿರಾಟ್ ಕೊಹ್ಲಿ ಇನ್ನೂ ಹೆಚ್ಚಿನ ಪಂದ್ಯಗಳಲ್ಲಿ ಭಾಗವಹಿಸಿ ಹೆಚ್ಚು ರನ್ ಗಳಿಸುವುದನ್ನು ನೋಡಲು ಇಚ್ಛಿಸುತ್ತೇನೆ, ಅದರಲ್ಲಿಯೂ ಟೆಸ್ಟ್ ಕ್ರಿಕೆಟ್ನಲ್ಲಿ ವಿರಾಟ್ ಕೊಹ್ಲಿಯ ಅಮೋಘ ಆಟವನ್ನು ನೋಡಲು ನಾನು ಸದಾ ಇಚ್ಛಿಸುತ್ತೇನೆ ಎಂದು ಕಪಿಲ್ ದೇವ್ ಹೇಳಿಕೊಂಡಿದ್ದಾರೆ.


Click it and Unblock the Notifications












