ಭಾರತ ಕ್ರಿಕೆಟ್ ತಂಡ ಕಂಡ ಯಶಸ್ವಿ ನಾಯಕರಲ್ಲಿ ವಿರಾಟ್ ಕೊಹ್ಲಿ ಕೂಡ ಒಬ್ಬರು. ಕೊಹ್ಲಿ ನಾಯಕತ್ವದಲ್ಲಿ ಭಾರತ ಐಸಿಸಿ ಟ್ರೋಫಿ ಗೆಲ್ಲದೆ ಇರಬಹುದು, ಆದರೆ ಭಾರತ ತಂಡದ ಸಾಕಷ್ಟು ಸಾಧನೆಗಳನ್ನು ಮಾಡಿದೆ. ದೀರ್ಘಕಾಲದ ವರೆಗೆ ಕೊಹ್ಲಿ ನೇತೃತ್ವದ ಭಾರತ ಟೆಸ್ಟ್ ತಂಡ ನಂಬರ್-1 ಆಗಿತ್ತು. ಆದರೆ ಅವರ ನಾಯಕತ್ವದಲ್ಲಿ ಇಬ್ಬರು ಸ್ಟಾರ್ ಆಟಗಾರರ ವೃತ್ತಿಜೀವನದ ಮೇಲೆ ಪರಿಣಾಮ ಬೀರಿತು.
ಮಾಜಿ ವಿಶ್ವ ಚಾಂಪಿಯನ್ಗಳಾದ ಯುವರಾಜ್ ಸಿಂಗ್ ಮತ್ತು ಸುರೇಶ್ ರೈನಾ ಭಾರತ ತಂಡದಲ್ಲಿ ನಿರಂತರವಾಗಿ ವಿಫಲರಾಗುತ್ತಲೇ ಇದ್ದರು. ವಿರಾಟ್ ಕೊಹ್ಲಿ ನಾಯಕತ್ವದಲ್ಲಿ, ಈ ಇಬ್ಬರು ಆಟಗಾರರು ವೈಫಲ್ಯ ಅನುಭವಿಸಲು ಪ್ರಾರಂಭಿಸಿದರು. ನಂತರ ಅವರ ವೃತ್ತಿಜೀವನ ಕೊನೆಗೊಂಡಿತು.

ವಿರಾಟ್ ಕೊಹ್ಲಿ ವಿಶ್ವದ ಅತ್ಯಂತ ಫಿಟ್ ಆಟಗಾರರಲ್ಲಿ ಒಬ್ಬರು. ವಿರಾಟ್ ಕೊಹ್ಲಿ ನಾಯಕನಾಗಿದ್ದಾಗ ಭಾರತ ತಂಡದಲ್ಲಿ ಫಿಟ್ನೆಸ್ ಸಂಸ್ಕೃತಿಯನ್ನು ತಂದರು. ಇದರಿಂದಾಗಿ ಕೆಲವು ಆಟಗಾರರು ಫಿಟ್ನೆಸ್ ಕಾರಣದಿಂದಾಗಿ ಟೀಮ್ ಇಂಡಿಯಾದಲ್ಲಿ ತಮ್ಮ ಸ್ಥಾನವನ್ನು ಕಳೆದುಕೊಳ್ಳಬೇಕಾಯಿತು. ಅದರಲ್ಲಿ ಯುವರಾಜ್ ಸಿಂಗ್ ಮತ್ತು ಸುರೇಶ್ ರೈನಾ ಪ್ರಮುಖರು. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಭಾರತ 2007 ರ ಟಿ 20 ವಿಶ್ವಕಪ್ ಮತ್ತು 2011 ರ ಏಕದಿನ ವಿಶ್ವಕಪ್ ಗೆಲ್ಲುವಲ್ಲಿ ಆಲ್ರೌಂಡರ್ ಯುವರಾಜ್ ಸಿಂಗ್ ದೊಡ್ಡ ಪಾತ್ರ ವಹಿಸಿದ್ದರು. ಸೌರವ್ ಗಂಗೂಲಿ ನಾಯಕತ್ವದಲ್ಲಿ ವೃತ್ತಿಜೀವನವನ್ನು ಪ್ರಾರಂಭಿಸಿದ ಯುವರಾಜ್ ಸಿಂಗ್ ಅದ್ಭುತ ಪ್ರದರ್ಶನ ನೀಡಿದರು. ಇದಾದ ನಂತರ, ಮಹೇಂದ್ರ ಸಿಂಗ್ ಧೋನಿ ಭಾರತದ ನಾಯಕನಾದಾಗ, ಯುವರಾಜ್ ಸಿಂಗ್ ಸಂಚಲನ ಮೂಡಿಸಿದರು. ಯುವರಾಜ್ ಸಿಂಗ್ ಭಾರತೀಯ ಕ್ರಿಕೆಟ್ ಅನ್ನು ಉತ್ತುಂಗಕ್ಕೆ ಕೊಂಡೊಯ್ದರು.

ಧೋನಿ ನಾಯಕತ್ವದಲ್ಲಿ ಯುವರಾಜ್ ಸಿಂಗ್ 2007 ರ ಟಿ20 ವಿಶ್ವಕಪ್ ಮತ್ತು 2011 ರ ಏಕದಿನ ವಿಶ್ವಕಪ್ನಲ್ಲಿ ಅದ್ಭುತ ಪ್ರದರ್ಶನ ನೀಡಿದರು. ಇದಕ್ಕಾಗಿ ಅವರು 'ಮ್ಯಾನ್ ಆಫ್ ದಿ ಸೀರಿಸ್' ಪ್ರಶಸ್ತಿಯನ್ನು ಪಡೆದರು. ಯುವರಾಜ್ ಸಿಂಗ್ ಧೋನಿಯ ಮ್ಯಾಚ್ ವಿನ್ನರ್ ಪ್ಲೇಯರ್ ಎಂದು ಗುರುತಿಸಿಕೊಂಡಿದ್ದರು. ಆದರೆ ಧೋನಿ ನಾಯಕತ್ವವನ್ನು ತೊರೆದ ನಂತರ, ಯುವಿ ಕೊಹ್ಲಿ ನಾಯಕತ್ವದಲ್ಲಿ ಸ್ಥಿರತೆಯನ್ನು ಕಾಯ್ದುಕೊಳ್ಳಲು ವಿಫಲರಾದರು. ಫಿಟ್ನೆಸ್ ಸಮಸ್ಯೆಯಿಂದಾಗಿ ಅವರನ್ನು ಟೀಮ್ ಇಂಡಿಯಾದಿಂದ ಕೈಬಿಡಲಾಯಿತು. ಪರಿಣಾಮ ಅವರು ನಿವೃತ್ತಿ ಹೊಂದಬೇಕಾಯಿತು. ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಯುವರಾಜ್ ತಮ್ಮ ಕೊನೆಯ ಅಂತಾರಾಷ್ಟ್ರೀಯ ಪಂದ್ಯವನ್ನು ಆಡಿದರು.
ಧೋನಿ ನಾಯಕತ್ವದಲ್ಲಿ ಅನೇಕ ಆಟಗಾರರು ತಮ್ಮ ವೃತ್ತಿಜೀವನವನ್ನು ಶೈನ್ ಮಾಡಿಕೊಂಡಿದ್ದಾರೆ. ಈ ಆಟಗಾರರಲ್ಲಿ ಸುರೇಶ್ ರೈನಾ ಕೂಡ ಒಬ್ಬರು. ಸುರೇಶ್ ರೈನಾ ಯಾವಾಗಲೂ ಧೋನಿ ಅವರ ಅತ್ಯಂತ ವಿಶೇಷ ಆಟಗಾರರಲ್ಲಿ ಒಬ್ಬರು. ಆಗಸ್ಟ್ 15, 2020 ರಂದು ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದಾಗ, ಅದೇ ದಿನ ಸುರೇಶ್ ರೈನಾ ಕೂಡ ಕ್ರಿಕೆಟ್ಗೆ ವಿದಾಯ ಹೇಳಿದರು. ರೈನಾ ಅವರನ್ನು ಧೋನಿ ತಂಡದಲ್ಲಿ ಬಹಳ ಉಪಯುಕ್ತ ಮತ್ತು ವಿಶ್ವಾಸಾರ್ಹ ಆಟಗಾರನಾಗಿ ನೋಡುತ್ತಿದ್ದರು. 2011 ರ ಏಕದಿನ ವಿಶ್ವಕಪ್ ಗೆದ್ದ ಭಾರತ ತಂಡದಲ್ಲಿ ಸುರೇಶ್ ರೈನಾ ಕೂಡ ಇದ್ದರು. ಈ ಮೆಗ ಟೂರ್ನಿಯಲ್ಲಿ ಸುರೇಶ್ ರೈನಾ ಹಲವು ಪ್ರಮುಖ ಸಂದರ್ಭಗಳಲ್ಲಿ ಟೀಮ್ ಇಂಡಿಯಾ ಪರ ರನ್ ಗಳಿಸಿದರು.
ಧೋನಿ ನಾಯಕತ್ವದಲ್ಲಿ ರೈನಾ ಬಡತನದಿಂದ ಶ್ರೀಮಂತನಾಗಿ ಬೆಳೆದರು. ಆದರೆ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಅವರಿಗೆ ವಿಶೇಷವಾದದ್ದೇನೂ ಮಾಡಲು ಸಾಧ್ಯವಾಗಲಿಲ್ಲ. ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಕಳಪೆ ಪ್ರದರ್ಶನ ನೀಡಿದ ಸುರೇಶ್ ರೈನಾ, ಟೀಮ್ ಇಂಡಿಯಾದಲ್ಲಿ ಸ್ಥಾನ ಕಳೆದುಕೊಳ್ಳಬೇಕಾಯಿತು. 2018 ರಲ್ಲಿ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಸುರೇಶ್ ರೈನಾ ತಮ್ಮ ಕೊನೆಯ ಅಂತರರಾಷ್ಟ್ರೀಯ ಪಂದ್ಯವನ್ನು ಆಡಿದರು. ನಂತರ ಸುರೇಶ್ ರೈನಾ ಅವರನ್ನು ಟೀಮ್ ಇಂಡಿಯಾದಿಂದ ಕೈಬಿಡಲಾಯಿತು. 2020ರಲ್ಲಿ ಅವರು ತಮ್ಮ ವೃತ್ತಿಜೀವನಕ್ಕೆ ತೆರೆ ಎಳೆದರು. ಇದೀಗ ಈ ಇಬ್ಬರು ಆಟಗಾರರು ತಮ್ಮ ವೃತ್ತಿಜೀವನವನ್ನು ಅಂತ್ಯಗೊಳಿಸಿದಕ್ಕೆ ಕೊಹ್ಲಿ ನಾಯಕತ್ವ ಕಾರಣವೇ? ಎಂಬುದು ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಪ್ರಶ್ನೆಯಾಗಿದೆ.