ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ತಂಡದ ಗೆಲುವನ್ನು ಪ್ರವಾಹ ಸಂತ್ರಸ್ತರಿಗೆ ಅರ್ಪಿಸಿದ ಕೊಹ್ಲಿ

By Mahesh
Virat Kohli dedicates the Trent Bridge win to Kerala flood victims

ನ್ಯಾಟಿಂಗ್ ಹ್ಯಾಮ್, ಆಗಸ್ಟ್ 22: ಅತಿಥೇಯ ಇಂಗ್ಲೆಂಡ್ ನಡುವಿನ ನ್ಯಾಟಿಂಗ್ ಹ್ಯಾಮ್ ಟೆಸ್ಟ್ ಪಂದ್ಯವನ್ನು ಟೀಂ ಇಂಡಿಯಾದಿಂದ 203ರನ್ ಗಳಿಂದ ಇಂದು ಗೆದ್ದುಕೊಂಡಿದೆ. ಪಂದ್ಯಶ್ರೇಷ್ಠ ಪ್ರಶಸ್ತಿ ಸ್ವೀಕರಿಸಿ ನಂತರ ಮಾತನಾಡಿದ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ, ಅವರು ಈ ಪಂದ್ಯದ ಗೆಲುವು ಹಾಗೂ ಗೆಲುವಿನ ಮೊತ್ತವನ್ನು ಪ್ರವಾಹ ಪೀಡಿತ ಕೇರಳ ರಾಜ್ಯಕ್ಕೆ ದೇಣಿಗೆ ರೂಪದಲ್ಲಿ ನೀಡುವುದಾಗಿ ಘೋಷಿಸಿದ್ದಾರೆ.

ಲಾರ್ಡ್ಸ್ ಟೆಸ್ಟ್‌ನಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಇಂಗ್ಲೆಂಡ್, ಈ ಪಂದ್ಯವನ್ನು ಗೆದ್ದು ಸರಣಿಯನ್ನು ಕೈವಶ ಮಾಡಿಕೊಳ್ಳುವ ಉತ್ಸಾಹದಲ್ಲಿತ್ತು. ಆದರೆ, ಬ್ಯಾಟಿಂಗ್, ಬೌಲಿಂಗ್ ನಲ್ಲಿ ಮಿಂಚಿದ ಟೀಂ ಇಂಡಿಯಾ, ಐದು ಪಂದ್ಯಗಳ ಸರಣಿಯಲ್ಲಿ ಮೊದಲ ಗೆಲುವು ಸಾಧಿಸಿತು.

ಭಾರತ vs ಇಂಗ್ಲೆಂಡ್ : 3ನೇ ಟೆಸ್ಟ್ ಪಂದ್ಯ ಲೈವ್ ಸ್ಕೋರ್ ಕಾರ್ಡ್

ಪಂದ್ಯದ ನಂತರ ಮಾತನಾಡಿದ ಕೊಹ್ಲಿ, ಕೇರಳದಲ್ಲಿ ಜನರು ಮನೆ ಕಳೆದುಕೊಂಡು ಸಂಕಷ್ಟದಲ್ಲಿದ್ದಾರೆ. ನಾವು ಈ ಮೂಲಕ ನಮ್ಮ ಕೊಡುಗೆ ನೀಡಲು ಮುಂದಾಗಿದ್ದೇವೆ ಎಂದರು.

ಎಜ್ ಬಾಸ್ಟನ್ ಹಾಗೂ ಲಾರ್ಡ್ಸ್ ನಲ್ಲಿ ಪಂದ್ಯ ಕಳೆದುಕೊಂಡಿದ್ದ ಭಾರತ 0-2ರಿಂದ ನ್ಯಾಟಿಂಗ್ ಹ್ಯಾಮ್ ನಲ್ಲಿ ಪಂದ್ಯ ಆರಂಭಿಸಿ, ಬುಧವಾರದ ಅಂತ್ಯಕ್ಕೆ 2-1ರಲ್ಲಿ ಸಂತಸದ ಕೊನೆಗೊಂಡಿದೆ. ಆಗಸ್ಟ್ 30ರಿಂದ ಸೌಂಥಾಪ್ಟನ್ ನಲ್ಲಿ ನಾಲ್ಕನೇ ಪಂದ್ಯ ನಡೆಯಲಿದೆ. ವೇಗಿ ಭುವನೇಶ್ವರ್ ಕುಮಾರ್ ಅವರು ಗಾಯದಿಂದ ಗುಣಮುಖರಾಗಿದ್ದು, ನಾಲ್ಕನೇ ಪಂದ್ಯದಲ್ಲಿ ಆಡುವ ಸಾಧ್ಯತೆಯಿದೆ.

ಕೊಹ್ಲಿ ಶತಕಕ್ಕೂ 2001ರ ಸಚಿನ್ ಬಾರಿಸಿದ ಶತಕಕ್ಕೂ ಇದೆ ನಂಟು! ಕೊಹ್ಲಿ ಶತಕಕ್ಕೂ 2001ರ ಸಚಿನ್ ಬಾರಿಸಿದ ಶತಕಕ್ಕೂ ಇದೆ ನಂಟು!

ಕೇರಳದಲ್ಲಿ ಭಾರಿ ಮಳೆ, ಪ್ರವಾಹದಿಂದಾಗಿ 370 ಜನ ಪ್ರಾಣ ಕಳೆದುಕೊಂಡಿದ್ದರೆ, 8 ಲಕ್ಷ ಮಂದಿ ಪುನರ್ವಸತಿ ಕೇಂದ್ರಗಳಲಿದ್ದಾರೆ. ಕೇಂದ್ರ ಸರ್ಕಾರದಿಂದ 600 ಕೋಟಿ ರು ನೀಡಲಾಗಿದೆ. ಪ್ರವಾಹ ಸಂತ್ರಸ್ತರಿಗೆ ನೀಡುವ ದೇಣಿಗೆ ತೆರಿಗೆ ಮುಕ್ತವಾಗಲಿದೆ.

Story first published: Wednesday, August 22, 2018, 18:32 [IST]
Other articles published on Aug 22, 2018
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X