ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧದ ಸರಣಿಯನ್ನು ವಶಕ್ಕೆ ಪಡೆದು ಬೀಗಿದೆ. ಇದೀಗ ನ್ಯೂಜಿಲ್ಯಾಂಡ್ ವಿರುದ್ಧದ ಸರಣಿಗೆ ಟೀಮ್ ಇಂಡಿಯಾ ಸಜ್ಜಾಗಿದೆ. ಈ ಸರಣಿಗೂ ಮುನ್ನ ಟೀಮ್ ಇಂಡಿಯಾ ತನ್ನ ದೌರ್ಬಲ್ಯಗಳತ್ತ ಗಮನ ಹರಿಸಿದೆ. ಈ ಬಗ್ಗೆ ಟೀಮ್ ಇಂಡಿಯಾ ನಾಯಕನೇ ಹೇಳಿಕೊಂಡಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಟೀಮ್ ಇಂಡಿಯಾ ಮೊದಲ ಪಂದ್ಯವನ್ನು ಹೀನಾಯವಾಗಿ ಸೋಲು ಕಂಡಿತು. ಆಸ್ಟ್ರೇಲಿಯಾ ಯಾವುದೆ ವಿಕೆಟ್ ಕಳೆದುಕೊಳ್ಳದೆ ಟೀಮ್ ಇಂಡಿಯಾ ನೀಡಿದ ಗುರಿಯನ್ನು ತಲುಪಿತು. ಈ ಸೋಲು ಟೀಮ್ ಇಂಡಿಯಾಗೆ ದೊಡ್ಡ ಪಾಠವನ್ನು ಕಲಿಸಿದೆ.
ಇಂದು ಟೀಮ್ ಇಂಡಿಯಾ ನ್ಯೂಜಿಲ್ಯಾಂಡ್ಗೆ ಪ್ರವಾಸ ತೆರಳಿದ್ದು ಇದಕ್ಕೂ ಮುನ್ನ ಟೀಮ್ ಇಂಡಿಯಾ ನಾಯಕ ಮಾತನಾಡಿದ್ದಾರೆ. ಈ ಸಂದರ್ಭದಲ್ಲಿ ಕೊಹ್ಲಿ ತಂಡ ಯಾವ ಕ್ಷೇತ್ರದಲ್ಲಿ ತನ್ನ ದೌರ್ಬಲ್ಯವನ್ನು ಹೊಂದಿದೆ ಮತ್ತು ಅದರತ್ತ ಗಮನ ನೀಡುವ ಬಗ್ಗೆ ಮಾತನಾಡಿದ್ದಾರೆ.