ಮುಂಬೈನ ವಾಂಕೆಡೆ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ಮಹತ್ವದ ತೀರ್ಮಾನವೊಂದನ್ನು ಮಾಡಿದ್ದರು. ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯುತ್ತಿದ್ದ ನಾಯಕ ವಿರಾಟ್ ಕೊಹ್ಲಿ ನಾಲ್ಕನೇ ಕ್ರಮಾಂಕದಲ್ಲಿ ಅಂಗಳಕ್ಕಿಳಿದಿದ್ದರು. ಆದರೆ ಇಲ್ಲಿ ವಿರಾಟ್ ನಿರಾಸೆ ಅನುಭವಿಸಿದ್ದರು.
ಮಾಜಿ ಕ್ರಿಕೆಟಿಗರು ಹಾಗೂ ಅಭಿಮಾನಿಗಳು ಟೀಮ್ ಇಂಡಿಯಾ ನಾಯಕನ ಈ ನಿರ್ಧಾರಕ್ಕೆ ವಿರೋಧವನ್ನು ವ್ಯಕ್ತಪಡಿಸಿದ್ದರು. ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಎರಡನೇ ಪಂದ್ಯದಲ್ಲಿ ಮತ್ತೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವುದು ಬಹತೇಕ ಖಚಿತ.
ಅದೃಷ್ಟವಿಲ್ಲದ ಅಂಗಳದಲ್ಲಿ ಅದೃಷ್ಟ ಹುಡುಕಲು ಹೊರಟ ಭಾರತ
ಟೀಮ್ ಇಂಡಿಯಾ ಪಾಲಿಗೆ ರಾಜ್ಕೋಟ್ನಲ್ಲಿ ನಡೆಯಲಿರುವ ಪಂದ್ಯ ನಿರ್ಣಾಯಕವಾಗಿದೆ. ಮೊದಲ ಪಂದ್ಯವನ್ನು ಸೋತಿರುವ ಟೀಮ್ ಇಂಡಿಯಾ ಸರಣಿಯಲ್ಲಿ 0-1 ಹಿನ್ನಡೆಯಲ್ಲಿದೆ. ರಾಜ್ಕೋಟ್ ಪಂದ್ಯವನ್ನು ಗೆದ್ದರೆ ಮಾತ್ರವೇ ಈ ಸರಣಿ ಭಾರತದ ಪಾಲಿಗೆ ಜೀವಂತವಾಗುಳಿಯಲಿದೆ.
ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧದ ಮೊದಲ ಪಂದ್ಯದಲ್ಲಿ ಉತ್ತಮ ಫಾರ್ಮ್ನಲ್ಲಿರುವ ಟೀಮ್ ಇಂಡಿಯಾದ ಆರಂಭಿಕ ಆಟಗಾರರಾದ ರೋಹಿತ್ ಶರ್ಮಾ, ಶಿಖರ್ ಧವನ್ ಮತ್ತು ಕೆಎಲ್ ರಾಹುಲ್ ಅವರನ್ನು ಮೊದಲ ಮೂರು ಕ್ರಮಾಂಕದಲ್ಲಿ ಕಣಕ್ಕಿಳಿಕಸುವ ನಿರ್ಧಾರವನ್ನು ಮಾಡಿದ್ದರು.
ಕೆಎಲ್ ರಾಹುಲ್ಗೆ ವಿರಾಟ್ ಕೊಹ್ಲಿ ತಮ್ಮ ಮೂರನೇ ಕ್ರಮಾಂಕವನ್ನು ಬಿಟ್ಟುಕೊಟ್ಟಿದ್ದರು. ವಿರಾಟ್ ಕೊಹ್ಲಿ ನಾಲ್ಕನೇ ಕ್ರಮಾಂಕದಲ್ಲಿ ಆಡಲಿಳಿದಿದ್ದರು. ನಾಲ್ಕನೇ ಕ್ರಮಾಂಕದಲ್ಲಿ ಖಾಯಂ ಆಗಿದ್ದ ಶ್ರೇಯಸ್ ಅಯ್ಯರ್ ಐದನೇ ಕ್ರಮಾಂಕದಲ್ಲಿ ಆಡಲಿಳಿದಿದ್ದರು. ಇದೀಗ ಮತ್ತೆ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮೂರನೇ ಕ್ರಮಾಂಕದಲ್ಲೇ ಮುಂದುವರಿಯುವುದು ಬಹುತೇಕ ಖಚಿತ.