For Quick Alerts
ALLOW NOTIFICATIONS  
For Daily Alerts
 

ಆಸ್ಟ್ರೇಲಿಯಾ ವಿರುದ್ಧ 3ನೇ ODI, ವಿಶ್ವಕಪ್‌ಗೆ ಮುನ್ನ ಗಣೇಶನ ದರ್ಶನ ಪಡೆದ ವಿರುಷ್ಕಾ; ಶತಕದ ದಾಖಲೆಗೆ ಸಜ್ಜು!

ಗುರುವಾರ, ಸೆಪ್ಟೆಂಬರ್ 27ರಂದು ರಾಜ್‌ಕೋಟ್‌ನಲ್ಲಿ ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ಆತಿಥೇಯ ಭಾರತ ತಂಡ ಮೂರನೇ ಹಾಗೂ ಕೊನೆಯ ಏಕದಿನ ಪಂದ್ಯದಲ್ಲಿ ಸೆಣಸಾಡಲಿದೆ.

ಈಗಾಗಲೇ 2-0 ಅಂತರದಲ್ಲಿ ಸರಣಿ ಗೆದ್ದಿರುವ ಭಾರತ ಕ್ಲೀನ್ ಸ್ವೀಪ್ ಮಾಡಲು ಎದುರು ನೋಡುತ್ತಿದೆ. ಕಳೆದೆರಡು ಪಂದ್ಯಗಳಿಗೆ ವಿಶ್ರಾಂತಿ ಪಡೆದಿದ್ದ ವಿರಾಟ್ ಕೊಹ್ಲಿ ಸೇರಿದಂತೆ ಹಿರಿಯ ಆಟಗಾರರು ತಂಡವನ್ನು ಕೂಡಿಕೊಳ್ಳಲಿದ್ದಾರೆ.

Virat Kohli, Anushka Took Lord Ganeshs Blessings Ahead of the 3rd ODI against Australia and World Cup

ಇದೇ ವೇಳೆ ಆಸ್ಟ್ರೇಲಿಯಾ ವಿರುದ್ಧ 3ನೇ ಏಕದಿನ ಪಂದ್ಯಕ್ಕೂ ಮುನ್ನ ಹಾಗೂ 2023ರ ಏಕದಿನ ವಿಶ್ವಕಪ್‌ಗೆ ಮುಂಚಿತವಾಗಿ ಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರು ಪತ್ನಿ ಅನುಷ್ಕಾ ಶರ್ಮಾ ಜೊತೆಗೆ ಗಣೇಶನ ಆಶೀರ್ವಾದ ಪಡೆದಿದ್ದಾರೆ. ವಿಶ್ವಕಪ್ ಪಂದ್ಯಾವಳಿಯಲ್ಲಿ ಶತಕಗಳ ಅರ್ಧಶತಕ ಮೈಲಿಗಲ್ಲು ಸ್ಥಾಪಿಸಲು ಸಜ್ಜಾಗಿದ್ದಾರೆ.

ಕಳೆದ ವಾರ ಮೊಹಾಲಿ ಮತ್ತು ಇಂದೋರ್‌ನಲ್ಲಿ ನಡೆದ ಎರಡು ಪಂದ್ಯಗಳ ಗೆಲುವಿನೊಂದಿಗೆ ಭಾರತ ತಂಡವು 2-0 ಅಂತರದಲ್ಲಿ ಸರಣಿಯನ್ನು ಗೆದ್ದಿದ್ದರೂ, ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಕೊನೆಯ ಏಕದಿನ ಪಂದ್ಯಕ್ಕೆ ಮರಳಲಿದ್ದಾರೆ.

Virat Kohli, Anushka Took Lord Ganeshs Blessings Ahead of the 3rd ODI against Australia and World Cup

ಭಾರತ ತಂಡವು ಮುಂಬರುವ 2023ರ ಐಸಿಸಿ ಪುರುಷರ ಏಕದಿನ ಕ್ರಿಕೆಟ್ ವಿಶ್ವಕಪ್ ಪಂದ್ಯಾವಳಿಗೆ ನಂ.1 ಏಕದಿನ ತಂಡವಾಗಿ ಪ್ರವೇಶಿಸಲಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲೆರಡು ಪಂದ್ಯಗಳಿಂದ ಆರ್‌ಸಿಬಿ ಸ್ಟಾರ್ ಬ್ಯಾಟರ್ ವಿರಾಮ ಪಡೆದಿದ್ದ ವಿರಾಟ್ ಕೊಹ್ಲಿ ಅವರು ತಮ್ಮ ಪತ್ನಿ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಜೊತೆ ಕಳೆದ ವಾರ ಮುಂಬೈನಲ್ಲಿ ಗಣೇಶ ಮಹೋತ್ಸವದ ಸಂಭ್ರಮದಲ್ಲಿ ಭಾಗವಹಿಸಿದರು.

ರಾಜ್‌ಕೋಟ್ ಏಕದಿನ ಪಂದ್ಯ ಮತ್ತು ವಿಶ್ವಕಪ್ 2023ಕ್ಕಿಂತ ಮೊದಲು ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಅವರು ಮುಂಬೈನ ತಮ್ಮ ಸ್ನೇಹಿತರ ಮನೆಯಲ್ಲಿ ಗಣೇಶನ ಆಶೀರ್ವಾದ ಪಡೆದಿದ್ದು, ಈ ಫೋಟೋ ಇದೀಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

Virat Kohli, Anushka Took Lord Ganeshs Blessings Ahead of the 3rd ODI against Australia and World Cup

ಈ ತಿಂಗಳ ಆರಂಭದಲ್ಲಿ ಶ್ರೀಲಂಕಾದಲ್ಲಿ 2023ರ ನಡೆದ ಏಷ್ಯಾ ಕಪ್ ಪಂದ್ಯಾವಳಿಯಲ್ಲಿ 13,000 ಏಕದಿನ ರನ್‌ಗಳ ಮೈಲಿಗಲ್ಲು ಸ್ಥಾಪಿಸಿದ ವಿರಾಟ್ ಕೊಹ್ಲಿ ಬ್ಯಾಟ್‌ನೊಂದಿಗೆ ಪ್ರಭಾವಶಾಲಿ ಫಾರ್ಮ್‌ನಲ್ಲಿದ್ದಾರೆ.

ವಿರಾಟ್ ಕೊಹ್ಲಿ ತಮ್ಮ 47ನೇ ಏಕದಿನ ಶತಕವನ್ನು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧದ ಸೂಪರ್ 4 ಪಂದ್ಯದಲ್ಲಿ ಬಾರಿಸಿದರು. ಇದು 2023ರ ಏಷ್ಯಾ ಕಪ್ ಟ್ರೋಫಿಯನ್ನು ಗೆಲ್ಲುವ ಮಾರ್ಗದಲ್ಲಿ ಭಾರತವು 228 ರನ್‌ಗಳ ದಾಖಲೆಯ ಗೆಲುವು ಸಾಧಿಸಿತು.

ಏತನ್ಮಧ್ಯೆ, ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಕೂಡ ಒಂದು ಪಂದ್ಯದ ವಿರಾಮ ಪಡೆದ ನಂತರ, ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯಕ್ಕೆ ಲಭ್ಯವಿರುತ್ತಾರೆ. ಆದರೆ ಆಲ್‌ರೌಂಡರ್ ಅಕ್ಷರ್ ಪಟೇಲ್ ಅವರು ವಿಶ್ವಕಪ್‌ಗೆ ಮುಂಚಿತವಾಗಿ ಭುಜದ ನೋವಿನಿಂದ ಚೇತರಿಸಿಕೊಳ್ಳಲು ಇನ್ನೂ ಕೆಲವು ದಿನಗಳ ಕಾಲಾವಕಾಶ ಬೇಕಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ವಿಶ್ವಕಪ್‌ಗೆ ಅಂತಿಮ ತಂಡವನ್ನು ಸೆಪ್ಟೆಂಬರ್ 27ರಂದು ಪ್ರಕಟಿಸಲಾಗುವುದು ಮತ್ತು ತಮಿಳುನಾಡಿನ ಅನುಭವಿ ಆಟಗಾರ ರವಿಚಂದ್ರನ್ ಅಶ್ವಿನ್‌ಗೂ ಮೊದಲು ಮೀಸಲು ಸ್ಪಿನ್ನರ್ ಸ್ಥಾನಕ್ಕಾಗಿ ಅಕ್ಷರ್ ಪಟೇಲ್ ಇನ್ನೂ ತಂಡದ ಮ್ಯಾನೇಜ್‌ಮೆಂಟ್‌ನ ಉನ್ನತ ಆಯ್ಕೆಯಾಗಿ ಉಳಿದಿದ್ದಾರೆ ಎಂದು ತಿಳಿಯಲಾಗಿದೆ.

ಬುಧವಾರ ರಾಜ್‌ಕೋಟ್‌ನಲ್ಲಿ ನಡೆಯಲಿರುವ ಮೂರನೇ ಏಕದಿನ ಪಂದ್ಯಕ್ಕೂ ಮುನ್ನ ಯುವ ಬ್ಯಾಟಿಂಗ್ ತಾರೆ ಶುಭ್ಮನ್ ಗಿಲ್ ಮತ್ತು ಬೌಲಿಂಗ್ ಆಲ್‌ರೌಂಡರ್ ಶಾರ್ದೂಲ್ ಠಾಕೂರ್ ಅವರಿಗೆ ವಿಶ್ರಾಂತಿ ನೀಡಲಾಗುತ್ತದೆ ಎಂದು ತಿಳಿದುಬಂದಿದೆ.

ತಂಡದ ಸರದಿ ನೀತಿಯ ಪ್ರಕಾರ, ತಾಜಾತನಕ್ಕೆ ಒಂದೆರಡು ದಿನಗಳ ವಿಶ್ರಾಂತಿ ಪಡೆದಿದ್ದ ಜಸ್ಪ್ರೀತ್ ಬುಮ್ರಾ, ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ ಮತ್ತು ಕುಲದೀಪ್ ಯಾದವ್ ತಂಡಕ್ಕೆ ಮರಳಿದ್ದಾರೆ.

Story first published: Tuesday, September 26, 2023, 15:56 [IST]
Other articles published on Sep 26, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+