ಸದ್ಯ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್) 17ನೇ ಆವೃತ್ತಿ ಮುಗಿಯುತ್ತಿದ್ದಂತೆಯೇ ಎಲ್ಲರ ಗಮನವು, ಯುಎಸ್ಎ ಮತ್ತು ವೆಸ್ಟ್ ಇಂಡೀಸ್ನಲ್ಲಿ ನಡೆಯಲಿರುವ 2024ರ ಐಸಿಸಿ ಟಿ20 ವಿಶ್ವಕಪ್ ಪಂದ್ಯಾವಳಿಯತ್ತ ಹರಿಯಲಿದೆ. ಇದೇ ವೇಳೆ ಭಾರತ ತಂಡದ ಆಯ್ಕೆಯ ಕುರಿತು ಕ್ರಿಕೆಟ್ ಪಂಡಿತರು ಚರ್ಚೆ ಶುರು ಮಾಡಿದ್ದಾರೆ.
ಇನ್ನು ಭಾರತದ ಮಾಜಿ ಸ್ಫೋಟಕ ಬ್ಯಾಟರ್ ವೀರೇಂದ್ರ ಸೆಹ್ವಾಗ್ ಅವರು ಐಸಿಸಿ ಟಿ20 ವಿಶ್ವಕಪ್ಗಾಗಿ ಭಾರತ ತಂಡದ ಆಡುವ 11ರ ಬಳಗವನ್ನು ಆಯ್ಕೆ ಮಾಡಿದ್ದಾರೆ.

ಇದರಲ್ಲಿ ಶುಭ್ಮನ್ ಗಿಲ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಮುಕೇಶ್ ಕುಮಾರ್ ಮತ್ತು ಮೊಹಮ್ಮದ್ ಶಮಿ ಅವರಂತಹ ಹಲವು ಪ್ರಮುಖ ಆಟಗಾರರು ನಾಪತ್ತೆಯಾಗಿದ್ದಾರೆ. ಭಾರತದ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಅವರು ಟೀಮ್ ಇಂಡಿಯಾ ಉಪನಾಯಕ ಹಾರ್ದಿಕ್ ಪಾಂಡ್ಯ ಅವರನ್ನೇ ಭಾರತದ ಆಡುವ 11ರ ಬಳಗದಿಂದ ಕೈಬಿಟ್ಟಿದ್ದಾರೆ.
ಟಿ20 ವಿಶ್ವಕಪ್ನ 15 ಸದಸ್ಯರ ಭಾರತ ತಂಡದಲ್ಲಿ ಹಾರ್ದಿಕ್ ಪಾಂಡ್ಯ ಇರುತ್ತಾರೆ. ಇನ್ನು ಆಡುವ 11ರ ತಂಡದಲ್ಲಿ ಫಿನಿಶರ್ ಪಾತ್ರವನ್ನು ರಿಂಕು ಸಿಂಗ್ ಅಥವಾ ಶಿವಂ ದುಬೆ ವಹಿಸುತ್ತಾರೆ ಎಂದು ವೀರೇಂದ್ರ ಸೆಹ್ವಾಗ್ ಹೇಳಿದ್ದಾರೆ.
ವೀರೇಂದ್ರ ಸೆಹ್ವಾಗ್ ತಮ್ಮ ಭಾರತದ ಆಡುವ 11ರ ಬಳಗದಲ್ಲಿ ಹಲವು ಬದಲಾವಣೆಗಳನ್ನು ಮಾಡಿದ್ದಾರೆ. ಇದರಲ್ಲಿ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಅನುಪಸ್ಥಿತಿಯೂ ಸೇರಿದೆ.

ಮತ್ತೊಂದೆಡೆ, ರಾಜಸ್ಥಾನ ರಾಯಲ್ಸ್ ತಂಡದ ವೇಗಿ ಸಂದೀಪ್ ಶರ್ಮಾಗೆ ವೀರೇಂದ್ರ ಸೆಹ್ವಾಗ್ ತಮ್ಮ ಭಾರತದ ಆಡುವ 11ರ ಬಳಗದಲ್ಲಿ ಅವಕಾಶ ಪಡೆಯುತ್ತಾರೆ. ಆದರೆ ಅಗ್ರ ಕ್ರಮಾಂಕದಲ್ಲಿ ಯಾವುದೇ ಅಚ್ಚರಿ ಆಯ್ಕೆಗಳಿಲ್ಲ.
ಟಿ20 ವಿಶ್ವಕಪ್ನಲ್ಲಿ ರೋಹಿತ್ ಶರ್ಮಾ ಮತ್ತು ಯಶಸ್ವಿ ಜೈಸ್ವಾಲ್ ಭಾರತದ ಆರಂಭಿಕ ಜೋಡಿ. ವಿರಾಟ್ ಕೊಹ್ಲಿ ತಮ್ಮ ಆದ್ಯತೆಯ 3ನೇ ಕ್ರಮಾಂಕದಲ್ಲಿದ್ದರೆ, ಸೂರ್ಯಕುಮಾರ್ ಯಾದವ್ ತಮ್ಮ ಸ್ಥಾನವನ್ನು 4ನೇ ಸ್ಥಾನವನ್ನು ಉಳಿಸಿಕೊಂಡಿದ್ದಾರೆ.
ಮಧ್ಯಮ ಮತ್ತು ಕೆಳ ಕ್ರಮಾಂಕದಲ್ಲಿ ವಿಕೆಟ್ ಕೀಪರ್ ರಿಷಭ್ ಪಂತ್ ಪುನರಾಗಮನ ಮಾಡಿದ್ದು, ಫಿನಿಶರ್ ಪಾತ್ರಕ್ಕೆ ಸಂಬಂಧಿಸಿದಂತೆ ರಿಂಕು ಸಿಂಗ್ ಮತ್ತು ಶಿವಂ ದುಬೆ 6ನೇ ಸ್ಥಾನದಲ್ಲಿರುತ್ತಾರೆ. ರವೀಂದ್ರ ಜಡೇಜಾ ಕೆಳ ಕ್ರಮಾಂಕವನ್ನು ಪೂರ್ಣಗೊಳಿಸಿದ್ದಾರೆ.

ಕುಲದೀಪ್ ಯಾದವ್ ಸ್ಪೆಷಲೈಸ್ಡ್ ಸ್ಪಿನ್ನರ್ ಆಗಿ ತಂಡವನ್ನು ಸೇರಿಕೊಂಡರೆ, ವೇಗದ ಬೌಲಿಂಗ್ ವಿಭಾಗದಲ್ಲಿ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ಮತ್ತು ಸಂದೀಪ್ ಶರ್ಮಾ ಇದ್ದಾರೆ. ಐಪಿಎಲ್ 2024ರಲ್ಲಿ ಪ್ರಭಾವಶಾಲಿ ಪ್ರದರ್ಶನದ ನಂತರ ಸಂದೀಪ್ ಶರ್ಮಾ ಅವರು ವೀರೇಂದ್ರ ಸೆಹ್ವಾಗ್ ಆಯ್ಕೆಯ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ರಿಂಕು ಸಿಂಗ್/ಶಿವಂ ದುಬೆ, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಸಂದೀಪ್ ಶರ್ಮಾ.