ಇತ್ತೀಚೆಗಷ್ಟೇ ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯು ಕೊನೆಯ ಪಂದ್ಯ ಯಾವುದೇ ಫಲಿತಾಂಶವಿಲ್ಲದೆ ರದ್ದಾದ ನಂತರ ಅಂತ್ಯಗೊಂಡಿದ್ದು ಟೀಮ್ ಇಂಡಿಯಾ 2-1 ಅಂತರದಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಈ ಸರಣಿ ಮುಕ್ತಾಯಗೊಂಡ ನಂತರ ಇದೀಗ ಎಲ್ಲರ ಚಿತ್ತ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯತ್ತ ಇದೆ ಹಾಗೂ ಇದರ ನಡುವೆಯೂ ಅಕ್ಟೋಬರ್ ತಿಂಗಳಿನಿಂದ ಯುಎಇಯಲ್ಲಿ ಆರಂಭವಾಗಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಕೂಡ ಈಗಿನಿಂದಲೇ ಸಾಕಷ್ಟು ದೊಡ್ಡ ಮಟ್ಟದಲ್ಲಿ ಸುದ್ದಿಯನ್ನು ಮಾಡುತ್ತಿದೆ.
ಆಶಸ್ ಸರಣಿಗೆ ಮುನ್ನ ಸರ್ಜರಿಗೆ ಒಳಗಾಗಲಿದ್ದಾರೆ ಆಸಿಸ್ ನಾಯಕ ಟಿಮ್ ಪೈನ್
ಇತ್ತೀಚಿಗಷ್ಟೆ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಭಾಗವಹಿಸುವ ದೇಶಗಳು ತಮ್ಮ ತಂಡಗಳನ್ನು ಘೋಷಣೆ ಮಾಡುವುದರ ಮೂಲಕ ಸುದ್ದಿ ಮಾಡಿದ್ದವು. ಅದರಲ್ಲಿಯೂ ಬಲಿಷ್ಠ ತಂಡಗಳಲ್ಲಿ ಒಂದಾಗಿರುವ ಭಾರತದ ತಂಡ ಪ್ರಕಟವಾದಾಗ ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಇನ್ನು ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟವಾದಾಗ ಹೆಚ್ಚು ದೊಡ್ಡ ಮಟ್ಟದಲ್ಲಿ ಸದ್ದು ಮಾಡಲು ಕಾರಣ ಎಂಎಸ್ ಧೋನಿಯನ್ನು ಟೀಮ್ ಇಂಡಿಯಾದ ಮೆಂಟರ್ ಆಗಿ ಘೋಷಣೆ ಮಾಡಿದ್ದು.
ಟಿ20 ವಿಶ್ವಕಪ್ಗೆ ಪ್ರಕಟವಾಗಿರುವ ಕೊಹ್ಲಿ ಪಡೆ ವಿರುದ್ಧ ಇದೆಂಥಾ ಆರೋಪ!
ಹೌದು, ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಭಾರತ ತಂಡವನ್ನು ಪ್ರಕಟಿಸಿದ ಬೆನ್ನಲ್ಲೇ ಬಿಸಿಸಿಐ ಭಾರತದ ಮಾಜಿ ನಾಯಕ ಎಂಎಸ್ ಧೋನಿ ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡದ ಮೆಂಟರ್ ಆಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಘೋಷಣೆ ಮಾಡುವುದರ ಮೂಲಕ ಯಾರೂ ನಿರೀಕ್ಷಿಸದಂತಹ ಸುದ್ದಿಯನ್ನು ನೀಡಿತು. ಬಿಸಿಸಿಐನ ಕಾರ್ಯದರ್ಶಿಯಾದ ಜಯ್ ಶಾ ಎಂಎಸ್ ಧೋನಿ ಅವರನ್ನು ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡದ ಮೆಂಟರ್ ಆಗಿ ಆಯ್ಕೆ ಮಾಡಲು ಬೇಕಾದ ಎಲ್ಲಾ ಪ್ರಯತ್ನಗಳನ್ನು ಮಾಡಿ ಯಶಸ್ವಿಯಾದರು. ಆದರೆ ಈ ಕುರಿತು ಇದುವರೆಗೂ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮಾತ್ರ ಎಲ್ಲಿಯೂ ಮಾತನಾಡಿರಲಿಲ್ಲ. ಇದೀಗ ಎಂಎಸ್ ಧೋನಿ ಮೆಂಟರ್ ಆಗಿ ಆಯ್ಕೆಯಾಗಿರುವುದರ ಕುರಿತು ಸೌರವ್ ಗಂಗೂಲಿ ಕೊನೆಗೂ ಮೌನ ಮುರಿದಿದ್ದು ಈ ಕೆಳಕಂಡಂತೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.
{photo-feature}