ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ ಎ ತಂಡ ಸೇರಿದ ವಿಹಾರಿ, ಟಿ20 ವಿಶ್ವಕಪ್ ಸೋಲಿನ ಕುರಿತು ರವಿಶಾಸ್ತ್ರಿ ಮಾತು: ನ.12ರ ಕ್ರಿಕೆಟ್ ಸುದ್ದಿಗಳು

What happened in the cricket world on November 12

ನವೆಂಬರ್‌ 12ರ ಶುಕ್ರವಾರದಂದು ಕ್ರಿಕೆಟ್ ಜಗತ್ತಿನಲ್ಲಿ ಹಲವು ವಿದ್ಯಮಾನಗಳು ಜರುಗಿವೆ. ಒಂದೆಡೆ ನ್ಯೂಜಿಲೆಂಡ್‌ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟವಾಗಿದ್ದು, ಮತ್ತೊಂದೆಡೆ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿರುವ ಟೀಮ್ ಇಂಡಿಯಾ 'ಎ'ಗೆ ಹನುಮ ವಿಹಾರಿ ಸೇರ್ಪಡೆಯಾಗಿದ್ದಾರೆ. ಹೀಗೆ ನವೆಂಬರ್‌ 12ರ ಪ್ರಮುಖ ಕ್ರಿಕೆಟ್ ಸುದ್ದಿಗಳ ವಿವರ ಈ ಕೆಳಕಂಡಂತಿದೆ.

* ಆಸ್ಟ್ರೇಲಿಯಾ ಮತ್ತು ಪಾಕಿಸ್ತಾನ ನಡುವಿನ ಸೆಮಿಫೈನಲ್ ಪಂದ್ಯ ಮುಗಿದ ನಂತರ ಮಾತನಾಡಿರುವ ಮ್ಯಾಥ್ಯೂ ವೇಡ್ ನಾಟ್ ಔಟ್ ಆಗಿದ್ದರೂ ಡೇವಿಡ್ ವಾರ್ನರ್ ಡಿ ಆರ್ ಎಸ್ ನಿಯಮ ತೆಗೆದುಕೊಳ್ಳದೇ ಪೆವಿಲಿಯನ್ ಕಡೆ ಹೆಜ್ಜೆ ಹಾಕುವುದಕ್ಕೆ ಕಾರಣ ವಾರ್ನರ್ ಜತೆ ಕಣದಲ್ಲಿದ್ದ ಮತ್ತೋರ್ವ ಆಟಗಾರ ಗ್ಲೆನ್ ಮ್ಯಾಕ್ಸ್‌ವೆಲ್ ಎಂದಿದ್ದಾರೆ. ಬೌಲರ್ ಎಸೆದ ಚೆಂಡು ಡೇವಿಡ್ ವಾರ್ನರ್ ಬ್ಯಾಟ್ ಸಮೀಪ ಬರುತ್ತಿದ್ದಂತೆಯೇ ಶಬ್ದವೊಂದು ಕೇಳಿ ಬಂದಿತ್ತು, ಹೀಗಾಗಿಯೇ ಗ್ಲೆನ್ ಮ್ಯಾಕ್ಸ್‌ವೆಲ್ ಡೇವಿಡ್ ವಾರ್ನರ್ ಬ್ಯಾಟ್ ಚೆಂಡಿಗೆ ತಾಕಿದೆ ಭಾವಿಸಿದ್ದರು. ಈ ಕಾರಣದಿಂದಾಗಿ ಡೇವಿಡ್ ವಾರ್ನರ್ ಡಿ ಆರ್ ಎಸ್ ನಿಯಮವನ್ನು ತೆಗೆದುಕೊಳ್ಳಲು ಮುಂದಾಗಲಿಲ್ಲ ಎಂದು ಮ್ಯಾಥ್ಯೂ ವೇಡ್ ಆ ಸಂದರ್ಭದಲ್ಲಿ ಡೇವಿಡ್ ವಾರ್ನರ್ ಮತ್ತು ಗ್ಲೆನ್ ಮ್ಯಾಕ್ಸ್‌ವೆಲ್ ನಡುವೆ ನಡೆದ ಮಾತುಕತೆಯನ್ನು ಬಿಚ್ಚಿಟ್ಟಿದ್ದಾರೆ.

* ಟೀಮ್ ಇಂಡಿಯಾ ಮುಖ್ಯ ಕೊಚ್ ಆಗಿ ರಾಹುಲ್ ದ್ರಾವಿಡ್ ಇತ್ತೀಚೆಗಷ್ಟೇ ಆಯ್ಕೆಯಾಗಿದ್ದು ಇದೀಗ ತಮ್ಮ ಮೊದಲ ಜವಾಬ್ಧಾರಿ ನಿರ್ವಹಿಸಲು ಸಜ್ಜಾಗಿದ್ದಾರೆ. ಮುಖ್ಯ ಕೊಚ್ ಆಗಿ ಆಯ್ಕೆಯಾಗಿರುವ ರಾಹುಲ್ ದ್ರಾವಿಡ್ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗೆ ಸಜ್ಜಾಗಿದ್ದು ಜೈಪುರಕ್ಕೆ ಬಂದಿಳಿದಿದ್ದಾರೆ. ಇದೇ ತಿಂಗಳ 17ನೇ ತಾರೀಕಿನಿಂದ ನ್ಯೂಜಿಲೆಂಡ್ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿ ಆರಂಭವಾಗಲಿದೆ.

* ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ 15 ಆಟಗಾರರ ತಂಡವನ್ನು ಆಯ್ಕೆಗಾರರು ಆಯ್ಕೆ ಮಾಡಿದ್ದರು. ಈ ತಂಡ ಪ್ರಕಟವಾದಾಗ ಶಿಖರ್ ಧವನ್ ಮತ್ತು ಯುಜುವೇಂದ್ರ ಚಾಹಲ್ ರೀತಿಯ ಆಟಗಾರರಿಗೆ ತಂಡದಲ್ಲಿ ಸ್ಥಾನ ನೀಡಿಲ್ಲ ಎಂದು ಟೀಮ್ ಇಂಡಿಯಾ ಆಯ್ಕೆಗಾರರು, ನಾಯಕ ವಿರಾಟ್ ಕೊಹ್ಲಿ ಮತ್ತು ತರಬೇತುದಾರನಾದ ರವಿಶಾಸ್ತ್ರಿ ವಿರುದ್ಧ ಭಾರತ ಕ್ರಿಕೆಟ್ ತಂಡದ ಅಭಿಮಾನಿಗಳು ಕಿಡಿಕಾರಿದ್ದರು. ಈ ಕುರಿತಾಗಿ ಪ್ರತಿಕ್ರಿಯಿಸಿರುವ ರವಿಶಾಸ್ತ್ರಿ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಆಯ್ಕೆಯಾಗಿದ್ದ ಎಲ್ಲಾ ಆಟಗಾರರನ್ನು ಸಂಪೂರ್ಣವಾಗಿ ಆಯ್ಕೆ ಮಾಡಿದ್ದು ಆಯ್ಕೆಗಾರರೇ ಎಂದು ಹೇಳಿಕೆ ನೀಡಿದ್ದಾರೆ. ಇನ್ನೂ ಮುಂದುವರೆದು ಮಾತನಾಡಿರುವ ರವಿಶಾಸ್ತ್ರಿ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಆಟಗಾರರನ್ನು ಆಯ್ಕೆ ಮಾಡುವಾಗ ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ತರಬೇತುದಾರನಾಗಿರುವ ತಾನೂ ಕೂಡ ಭಾಗಿಯಾಗಿರಲಿಲ್ಲ ಎಂದು ಹೇಳಿಕೆಯನ್ನು ನೀಡಿದ್ದಾರೆ. ಈ ಮೂಲಕ ವಿರಾಟ್ ಕೊಹ್ಲಿಗೂ ಮತ್ತು ತಮಗೂ ಈ ಆಟಗಾರರನ್ನು ಆಯ್ಕೆ ಮಾಡಿಕೊಳ್ಳಿ ಎಂದು ಹೇಳುವ ಅವಕಾಶ ಇರಲಿಲ್ಲ ಎಂಬುದನ್ನು ರವಿಶಾಸ್ತ್ರಿ ಪರೋಕ್ಷವಾಗಿ ಬಿಚ್ಚಿಟ್ಟಿದ್ದಾರೆ.

* ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾ ತಂಡವನ್ನು ಬಿಸಿಸಿಐ ಪ್ರಕಟಿಸಿದ್ದು, ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಅಜಿಂಕ್ಯಾ ರಹಾನೆ ಟೀಮ್ ಇಂಡಿಯಾವನ್ನು ಮುನ್ನೆಡೆಸಲಿದ್ದಾರೆ. ವಿರಾಟ್ ಕೊಹ್ಲಿ ಎರಡನೇ ಟೆಸ್ಟ್‌ ಪಂದ್ಯದಲ್ಲಿ ತಂಡವನ್ನು ಸೇರಿಕೊಳ್ಳಲಿದ್ದು, ತಂಡವನ್ನು ಮುನ್ನೆಡೆಸಲಿದ್ದಾರೆ. ಟೀಂ ಇಂಡಿಯಾ ಟೆಸ್ಟ್ ತಂಡ: ಅಜಿಂಕ್ಯಾ ರಹಾನೆ (ನಾಯಕ), ಚೇತೇಶ್ವರ ಪೂಜಾರ (ಉಪನಾಯಕ), ಕೆ.ಎಲ್. ರಾಹುಲ್, ಮಯಾಂಕ್ ಅಗರ್ವಾಲ್, ಶುಭ್‌ಮನ್ ಗಿಲ್, ಶ್ರೇಯಸ್‌ ಅಯ್ಯರ್, ವೃದ್ದಿಮಾನ್ ಸಹಾ (ಡಬ್ಲ್ಯುಕೆ), ಕೆ.ಎಸ್ ಭರತ್ (ವಿಕೆಟ್ ಕೀಪರ್), ಆರ್ ಜಡೇಜಾ, ಆರ್. ಅಶ್ವಿನ್, ಅಕ್ಷರ್ ಪಟೇಲ್, ಜಯಂತ್ ಯಾದವ್, ಇಶಾಂತ್ ಶರ್ಮಾ , ಉಮೇಶ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್‌ ಕೃಷ್ಣ

Story first published: Friday, November 12, 2021, 23:43 [IST]
Other articles published on Nov 12, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X