
ವೆಸ್ಟ್ ಇಂಡೀಸ್ ತಂಡಕ್ಕೆ ಹಿನ್ನಡೆ
30ರ ಹರೆಯದ ಅನುಭವಿ ಆಟಗಾರ ಜೇಸನ್ ಹೋಲ್ಡರ್ ಪ್ರಸ್ತುತ ವಿಶ್ವ ಕ್ರಿಕೆಟ್ನಲ್ಲಿ ಶ್ರೇಷ್ಠ ಆಲ್ರೌಂಡರ್ಗಳ ಪೈಕಿ ಒಬ್ಬರು ಎನಿಸಿಕೊಂಡಿದ್ದಾರೆ. ಸೀಮೊತ ಓವರ್ಗಳ ಕ್ರಿಕೆಟ್ನಲ್ಲಿ ರನ್ ನಿಯಂತ್ರಣದಲ್ಲಿ ಸಾಕಷ್ಟು ಯಶಸ್ಸು ಸಾಧಿಸಿರುವ ಹೋಲ್ಡರ್ ಬ್ಯಾಟಿಂಗ್ನಲ್ಲಿಯೂ ತಂಡಕ್ಕೆ ನೆರವಾಗಬಲ್ಲ ಆಟಗಾರ. ತನ್ನ ಅನುಭವದ ಮೂಲಕ ತಂಡಕ್ಕೆ ಉತ್ತಮವಾಗಿ ನೆರವಾಗಬಲ್ಲ ಸಾಮರ್ಥ್ಯ ಹೊಂದಿದ್ದಾರೆ. ಇನ್ನು ಸುರಕ್ಷಿತ ಫೀಲ್ಡರ್ ಎಂದು ಕೂಡ ಹೆಸರಾಗಿದ್ದಾರೆ ಹೋಲ್ಡರ್. ಹೀಗಾಗಿ ವೆಸ್ಟ್ ಇಂಡೀಸ್ ತಂಡಕ್ಕೆ ಹೋಲ್ಡರ್ ಅಲಭ್ಯತೆ ಖಂಡಿತಾ ಹಿನ್ನಡೆಯಾಗಲಿದೆ.

ಟಾಸ್ ಸಂದರ್ಭದಲ್ಲಿ ಮಾಹಿತಿ ನೀಡಿದ್ದ ಪೂರನ್
ಮೊದಲ ಪಂದ್ಯದ ಟಾಸ್ ಪ್ರಕ್ರಿಯೆ ಸಂದರ್ಭದಲ್ಲಿ ವೆಸ್ಟ್ ಇಂಡೀಸ್ ತಂಡದ ನಾಯಕ ನಿಕೋಲಸ್ ಪೂರನ್ ಅನುಭವಿ ಜೇಸನ್ ಹೋಲ್ಡರ್ ಕೊರೊನಾವೈರಸ್ ಸಂಪರ್ಕಕ್ಕೆ ಒಳಗಾಗಿರುವುದನ್ನು ಬಹಿರಂಗಪಡಿಸಿದ್ದರು. "ದುರದೃಷ್ಟವಶಾತ್ ಜೇಸನ್ ಹೋಲ್ಡರ್ ಕೊರೊನಾವೈರಸ್ನ ಕಾರಣದಿಂದಾಗಿ ಈ ಪಂದ್ಯದಲ್ಲಿ ಆಡುತ್ತಿಲ್ಲ. ಹಾಗಾಗಿ ಬಾಂಗ್ಲಾದೇಶದ ವಿರುದ್ಧ ಆಡಿದ ತಂಡದೊಂದಿಗೆ ನಾವು ಆಡುತ್ತಿದ್ದೇವೆ" ಎಂದು ಪೂರನ್ ಹೇಳಿದ್ದರು.

ರೋಚಕವಾಗಿ ಅಂತ್ಯವಾದ ಎರಡನೇ ಪಂದ್ಯ
ಏಕದಿನ ಸರಣಿಯ ಮೊದಲ ಪಂದ್ಯ ರೋಚಕವಾಗಿ ಅಂತ್ಯವಾಗಿದೆ. ಮೊದಲಿಗೆ ಭರ್ಜರಿ ಬ್ಯಾಟಿಂಗ್ ಮಾಡಿದ ಭಾರತ ತಂಡ ನಾಯಕ ಶಿಖರ್ ಧವನ್ ಹಾಗೂ ಮತ್ತೋರ್ವ ಆರಂಭಿಕ ಆಟಗಾರ ಶುಬ್ಮನ್ ಗಿಲ್ ಹಾಗೂ ಶ್ರೇಯಸ್ ಐಯ್ಯರ್ ಭರ್ಜರಿ ಬ್ಯಾಟಿಂಗ್ನ ಕಾರಣದಿಂದಾಗಿ 308ರನ್ಗಳಿಸಿ ಬೃಹತ್ ಮೊತ್ತದ ಗುರಿ ನಿಗದಿ ಪಡಿಸಿತು. ಅಂತಿಮ ಹಂತದಲ್ಲಿ ವೆಸ್ಟ್ ಇಂಡೀಸ್ ತಂಡದ ಬೌಲಿಂಗ್ ವಿಭಾಗ ಕೂಡ ಯಶಸ್ಸು ಗಳಿಸಲು ಸಾಧ್ಯವಾಗಿದ್ದು ಭಾರತದ ವಿಕೆಟ್ಗಳನ್ನು ಪಡೆಯುವಲ್ಲಿ ಯಶಸ್ವಿಯಾಯಿತು. ನಂತರ ಬ್ಯಾಟಿಂಗ್ನಲ್ಲಿ ಮಿಂಚಿದ ವಿಂಡೀಸ್ ಬಹುತೇಕ ಗೆಲುವಿನ ಸನಿಹಕ್ಕೆ ತಲುಪಿತ್ತು. ಆದರೆ ಅಂತಿಮ ಹಂತದಲ್ಲಿ ಎಡವುವ ಮೂಲಕ ಕೇವಲ ಮೂರು ರನ್ಗಳ ಅಂತರದಿಂದ ಸೋಲು ಕಂಡಿದೆ.

ಆಡುವ ಬಳಗ
ವೆಸ್ಟ್ ಇಂಡೀಸ್: ಶಾಯ್ ಹೋಪ್ (ವಿಕೆಟ್ ಕೀಪರ್), ಬ್ರಾಂಡನ್ ಕಿಂಗ್, ಶಮರ್ ಬ್ರೂಕ್ಸ್, ಕೈಲ್ ಮೇಯರ್ಸ್, ನಿಕೋಲಸ್ ಪೂರನ್ (ನಾಯಕ), ರೋಮನ್ ಪೊವೆಲ್, ಅಕೆಲ್ ಹೊಸೈನ್, ರೊಮಾರಿಯೋ ಶೆಫರ್ಡ್, ಅಲ್ಜಾರಿ ಜೋಸೆಫ್, ಗುಡಕೇಶ್ ಮೋಟಿ, ಜೇಡನ್ ಸೀಲ್ಸ್
ಬೆಂಚ್: ಕೀಸಿ ಕಾರ್ಟಿ, ಕೀಮೋ ಪಾಲ್
ಭಾರತ: ಶಿಖರ್ ಧವನ್ (ನಾಯಕ), ಶುಬ್ಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ದೀಪಕ್ ಹೂಡಾ, ಅಕ್ಸರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಹಾಲ್, ಪ್ರಸಿದ್ಧ್ ಕೃಷ್ಣ,
ಬೆಂಚ್: ಋತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ಆವೇಶ್ ಖಾನ್, ಅರ್ಷದೀಪ್ ಸಿಂಗ್


Click it and Unblock the Notifications












