ಮೊಹಮ್ಮದ್ ಸಿರಾಜ್ಗೆ ಅವಕಾಶ ನೀಡುವುದು ಉತ್ತಮ
ಮೊಹಮ್ಮದ್ ಸಿರಾಜ್ ಯುವ ಬೌಲರ್ ಆಗಿದ್ದು ತಂಡದಲ್ಲಿ ಅವಕಾಶ ನೀಡುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಲಾಗುತ್ತಿದ್ದು, ಇತ್ತೀಚೆಗೆ ಕೆಲ ಮಾಜಿ ಕ್ರಿಕೆಟಿಗರು ಸಿರಾಜ್ಗೆ ಅವಕಾಶ ನೀಡುವುದು ಉತ್ತಮ ಎಂಬ ಹೇಳಿಕೆಗಳನ್ನು ನೀಡಿದ್ದರು.
ಇಂಗ್ಲೆಂಡ್ ಪ್ರವಾಸಕ್ಕೆ ಸಿದ್ಧನಾಗು ಎಂದಿದ್ರು ವಿರಾಟ್ ಕೊಹ್ಲಿ
ಈ ಬಾರಿಯ ಐಪಿಎಲ್ ಟೂರ್ನಿಯ ಸಮಯದಲ್ಲಿ ಮೊಹಮ್ಮದ್ ಸಿರಾಜ್ ಬಳಿ ಬಂದ ವಿರಾಟ್ ಕೊಹ್ಲಿ ಇಂಗ್ಲೆಂಡ್ ಪ್ರವಾಸಕ್ಕೆ ಸಿದ್ಧನಾಗು ಎಂದು ಹೇಳಿದ್ದರಂತೆ. ವಿರಾಟ್ ಕೊಹ್ಲಿ ತನ್ನ ಬಳಿ ಬಂದು ಇಂಗ್ಲೆಂಡ್ ಪ್ರವಾಸಕ್ಕೆ ಸಿದ್ಧನಾಗು ಎಂದು ಶುಭಾಶಯ ಕೋರಿದ್ದರು ಎಂಬ ವಿಷಯವನ್ನು ಇತ್ತೀಚಿಗಷ್ಟೆ ಮೊಹಮ್ಮದ್ ಸಿರಾಜ್ ಅವರೇ ಹೇಳಿಕೊಂಡಿದ್ದರು.
ಮೊಹಮ್ಮದ್ ಸಿರಾಜ್ಗೆ ಅವಕಾಶ ನೀಡಲು ವಿರಾಟ್ ಕೊಹ್ಲಿ ಚಿಂತನೆ
ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ ಮೊಹಮ್ಮದ್ ಸಿರಾಜ್ ಆಡುವುದರ ಕುರಿತು ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದು, ಈ ಪಂದ್ಯದಲ್ಲಿ ಮೊಹಮ್ಮದ್ ಸಿರಾಜ್ಗೆ ಅವಕಾಶ ನೀಡಬೇಕೆಂಬುದು ವಿರಾಟ್ ಕೊಹ್ಲಿಯವರ ಚಿಂತನೆ ಎಂಬ ಸುದ್ದಿಯೂ ಹರಿದಾಡುತ್ತಿದೆ. ಐಪಿಎಲ್ ಸಮಯದಲ್ಲಿಯೂ ವಿರಾಟ್ ಕೊಹ್ಲಿ ಮೊಹಮ್ಮದ್ ಸಿರಾಜ್ಗೆ ಸಾಲು ಸಾಲು ಅವಕಾಶಗಳನ್ನು ನೀಡಿದ್ದರು. ಅದೇ ರೀತಿ ಈ ಪಂದ್ಯದಲ್ಲಿಯೂ ಸಿರಾಜ್ಗೆ ವಿರಾಟ್ ಕೊಹ್ಲಿ ಅವಕಾಶ ನೀಡಿದರೆ ಆಶ್ಚರ್ಯವೇನಿಲ್ಲ ಎನ್ನುತ್ತಿದ್ದಾರೆ ಕ್ರಿಕೆಟ್ ಪಂಡಿತರು