ಬಿಟ್ಟೂ ಬಿಡದೆ ಕಾಡಿದ ಗಾಯದ ಸಮಸ್ಯೆ
2022ರಲ್ಲಿ ಭಾರತ ತಂಡವನ್ನು ಬಿಟ್ಟೂ ಬಿಡದೆ ಕಾಡಿದ್ದು ಗಾಯದ ಸಮಸ್ಯೆ, ಹಾರ್ದಿಕ್ ಪಾಂಡ್ಯ, ಜಸ್ಪ್ರೀತ್ ಬುಮ್ರಾ, ಹರ್ಷಲ್ ಪಟೇಲ್, ಮೊಹಮ್ಮದ್ ಶಮಿ, ರವೀಂದ್ರ ಜಡೇಜಾ, ರೋಹಿತ್ ಶರ್ಮಾ, ಕೆಎಲ್ ರಾಹುಲ್, ರಿಷಬ್ ಪಂತ್ ಸೇರಿದಂತೆ ಹಲವು ಆಟಗಾರರು ಗಾಯಗೊಂಡದ್ದು ತಂಡಕ್ಕೆ ಭಾರಿ ಹಿನ್ನಡೆಯಾಗಲು ಕಾರಣವಾಯಿತು.
ಜಸ್ಪ್ರೀತ್ ಬುಮ್ರಾ ಮತ್ತು ಹರ್ಷಲ್ ಪಟೇಲ್ ಗಾಯಗೊಂಡ ಪರಿಣಾಮ ಏಷ್ಯಾಕಪ್ನಲ್ಲಿ ಭಾರತ ತಂಡ ಕಳಪೆ ಪ್ರದರ್ಶನ ನೀಡಿತು. ಕಪ್ ಗೆಲ್ಲುವ ನೆಚ್ಚಿನ ತಂಡವಾಗಿದ್ದ ಭಾರತ ಫೈನಲ್ ಕೂಡಾ ತಲುಪದೆ ಟೂರ್ನಿಯಿಂದ ಹೊರಬೀಳಬೇಕಾಯಿತು. ಟಿ20 ವಿಶ್ವಕಪ್ಗೆ ಮುನ್ನ ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಬುಮ್ರಾ ತಂಡಕ್ಕೆ ವಾಪಸಾದರು, ಎರಡು ಪಂದ್ಯಗಳ ಬಳಿಕ ಅವರು ಮತ್ತೆ ಗಾಯಗೊಂಡು ಟಿ20 ವಿಶ್ವಕಪ್ನಿಂದ ಹೊರಗುಳಿದರು.
ಏಷ್ಯಾಕಪ್ ಪಂದ್ಯಾವಳಿ ವೇಳೆ ಸಾಹಸ ಮಾಡಲು ಹೋಗಿ ರವೀಂದ್ರ ಜಡೇಜಾ ಗಾಯಗೊಂಡಿದ್ದು, ಟಿ20 ವಿಶ್ವಕಪ್ನಲ್ಲಿ ಭಾರತಕ್ಕೆ ಹಿನ್ನಡೆಯಾಗಲು ಕಾರಣವಾಯಿತು. ಪ್ರಮುಖ ಟೂರ್ನಿಗಳಲ್ಲೇ ಪ್ರಮುಖ ಆಟಗಾರರು ಗಾಯದ ಸಮಸ್ಯೆಯಿಂದ ಹೊರಗುಳಿದರು. ಬಾಂಗ್ಲಾದೇಶದ ವಿರುದ್ಧದ ಏಕದಿನ ಸರಣಿಯಲ್ಲಿ ನಾಯಕ ರೋಹಿತ್ ಶರ್ಮಾ ಗಾಯಗೊಂಡು ಹೊರಗುಳಿದಿದ್ದಾರೆ.
'ಬಾಬರ್ ಅಜಂಗಿಂತ ಹೆಚ್ಚು ನಿಮ್ಮನ್ನು ಪ್ರೀತಿಸುತ್ತೇವೆ'; ಕೊಹ್ಲಿಗೆ ಪಾಕ್ ಅಭಿಮಾನಿಗಳ ವಿಶೇಷ ಸಂದೇಶ
ದ್ವಿಪಕ್ಷೀಯ ಸರಣಿಯಲ್ಲಿ ಮಿಂಚಿದ ಟೀಂ ಇಂಡಿಯಾ
2022ರಲ್ಲಿ ಭಾರತ ತಂಡ ದ್ವಿಪಕ್ಷೀಯ ಸರಣಿಗಳಲ್ಲಿ ಉತ್ತಮ ಪ್ರದರ್ಶನ ನೀಡಿತು. ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಸರಣಿಯಲ್ಲಿ ಸೋತ ಬಳಿಕ, ಭಾರತ ಸತತವಾಗಿ ಐದು ಏಕದಿನ ಸರಣಿಯನ್ನು ಗೆದ್ದುಕೊಂಡಿತು. ವೆಸ್ಟ್ ಇಂಡೀಸ್ ವಿರುದ್ಧ 2 ಸರಣಿ, ಇಂಗ್ಲೆಂಡ್, ಜಿಂಬಾಬ್ವೆ, ದಕ್ಷಿಣ ಆಫ್ರಿಕಾ ವಿರುದ್ಧದ ದ್ವಿಪಕ್ಷೀಯ ಸರಣಿಯಲ್ಲಿ ಗೆಲುವು ಸಾಧಿಸಿತು. ನಂತರ ನ್ಯೂಜಿಲೆಂಡ್ ಮತ್ತು ಬಾಂಗ್ಲಾದೇಶದ ವಿರುದ್ಧದ ಏಕದಿನ ಸರಣಿಯಲ್ಲಿ ಸೋಲುವ ಮೂಲಕ ವರ್ಷಾಂತ್ಯದಲ್ಲಿ ನಿರಾಸೆ ಅನುಭವಿಸಿದೆ.
ಟಿ20 ದ್ವಿಪಕ್ಷೀಯ ಸರಣಿಯಲ್ಲಿ ಭಾರತ ಈ ಬಾರಿ ಅಮೋಘ ಸಾಧನೆ ಮಾಡಿದೆ, 2022ರಲ್ಲಿ ಭಾರತ ಒಂದೇ ಒಂದು ಟಿ20 ಸರಣಿಯನ್ನು ಸೋತಿಲ್ಲ. ಸತತವಾಗಿ 8 ಟಿ20 ಸರಣಿಯಲ್ಲಿ ಜಯ ಸಾಧಿಸಿದೆ.
ಟೆಸ್ಟ್ ಮಾದರಿಯಲ್ಲಿ ಟೀಂ ಇಂಡಿಯಾ 2022ರಲ್ಲಿ ಹೆಚ್ಚಿನ ಪಂದ್ಯಗಳಲ್ಲಿ ಆಡಲಿಲ್ಲ. ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯನ್ನು 1-2 ರಲ್ಲಿ ಸೋತ ನಂತರ, ಶ್ರೀಲಂಕಾ ವಿರುದ್ಧ 2 ಪಂದ್ಯಗಳ ಟೆಸ್ಟ್ ಸರಣಿಯನ್ನಿ ಕ್ಲೀನ್ ಸ್ವೀಪ್ ಮಾಡಿತು. ಇಂಗ್ಲೆಂಡ್ ವಿರುದ್ಧ 2021ರಲ್ಲಿ ನಡೆದ 5 ಪಂದ್ಯಗಳ ಟೆಸ್ಟ್ ಸರಣಿಯ ಕೊನೆಯ ಪಂದ್ಯ ಕೋವಿಡ್ ಕಾರಣದಿಂದ ರದ್ದುಪಡಿಸಲಾಗಿತ್ತು. 2022ರಲ್ಲಿ ಈ ಟೆಸ್ಟ್ ಪಂದ್ಯವನ್ನು ಆಡಿತು, ಈ ಪಂದ್ಯದಲ್ಲಿ ಸೋಲುವ ಮೂಲಕ ಸರಣಿಯನ್ನು 2-2 ರಲ್ಲಿ ಡ್ರಾ ಮಾಡಿಕೊಂಡಿತು. ಈಗ ಬಾಂಗ್ಲಾದೇಶದ ವಿರುದ್ಧ 2 ಪಂದ್ಯಗಳ ಸರಣಿಯನ್ನು ಆಡಲು ಸಕಲ ಸಿದ್ಧತೆ ನಡೆಸಿದೆ.
ಟೀಂ ಇಂಡಿಯಾವನ್ನು ಕಾಡಿದ ಪ್ರಮುಖ ವಿವಾದ
ಹಲವು ವಿವಾದಗಳು 2022 ರಲ್ಲಿ ಟೀಂ ಇಂಡಿಯಾವನ್ನು ಕಾಡಿದವು. ಸತತ ವೈಫಲ್ಯ ಅನುಭವಿಸಿದರು ಹಲವು ಆಟಗಾರರಿಗೆ ಸತತವಾಗಿ ಅವಕಾಶ ನೀಡಿದ್ದು ಸಾಕಷ್ಟು ವಿವಾದಕ್ಕೆ ಕಾರಣವಾಯಿತು. ರಿಷಬ್ ಪಂತ್ಗೆ ಸತತವಾಗಿ ಅವಕಾಶ ಸಿಕ್ಕರೆ, ಸಂಜು ಸ್ಯಾಮ್ಸನ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾದರು. ಪ್ರತಿಭಾವಂತ ಆಟಗಾರರನ್ನು ಕೂರಿಸಿ ಕೆಲವರಿಗೆ ಮಾತ್ರ ಅವಕಾಶ ನೀಡಲಾಯಿತು ಎಂದು ಹಲವರು ಆರೋಪಿಸಿದ್ದಾರೆ.
ಟಿ20 ವಿಶ್ವಕಪ್ನಲ್ಲಿ ಸೆಮಿಫೈನಲ್ನಲ್ಲಿ ಸೋತ ಬಳಿಕ ನ್ಯೂಜಿಲೆಂಡ್ ವಿರುದ್ಧದ ಸರಣಿಗೆ ಕೋಚ್ ದ್ರಾವಿಡ್ ಸೇರಿ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಿದ್ದಕ್ಕೆ ಟೀಕೆ ವ್ಯಕ್ತವಾಯಿತು.
ಪಾಕ್ ವಿರುದ್ಧ ಗೆದ್ದರು ವಿಶ್ವಕಪ್ನಲ್ಲಿ ನಿರಾಸೆ
ದ್ವಿಪಕ್ಷೀಯ ಸರಣಿಯಲ್ಲಿ ಭಾರತ ತಂಡ ಉತ್ತಮ ಪ್ರದರ್ಶನ ನೀಡಿದರೂ, ಏಷ್ಯಾಕಪ್ನಲ್ಲಿ ಫೈನಲ್ ತಲುಪುವಲ್ಲಿ ವಿಫಲವಾಯಿತು. ಇದು ಭಾರತಕ್ಕೆ ಈ ವರ್ಷದ ದೊಡ್ಡ ಆಘಾತ. ನಂತರ, ಟಿ20 ವಿಶ್ವಕಪ್ನಲ್ಲಿ ಪಾಕಿಸ್ತಾನದ ವಿರುದ್ಧ ರೋಚಕವಾದ ಜಯ ಸಾಧಿಸಿತು. ಇದು ಟಿ20 ಇತಿಹಾಸದಲ್ಲಿ ಶ್ರೇಷ್ಟ ಪಂದ್ಯಗಳಲ್ಲಿ ಒಂದೆನಿಸಿಕೊಂಡಿದೆ.
ಗುಂಪು ಹಂತದ ಪಂದ್ಯಗಳಲ್ಲಿ ಉತ್ತಮವಾಗಿ ಆಡಿ ಟಿ20 ವಿಶ್ವಕಪ್ನಲ್ಲಿ ಸೆಮಿಫೈನಲ್ ತಲುಪಿದರೂ, ಸೆಮಿಫೈನಲ್ನಲ್ಲಿ ಇಂಗ್ಲೆಂಡ್ ವಿರುದ್ಧ ಸೋಲನುಭವಿಸುವ ಮೂಲಕ ನಿರಾಸೆ ಮೂಡಿಸಿತು.