ಬೆಂಗಳೂರು, ಜೂನ್ 20: ಧಾರವಾಡ ವಲಯವನ್ನು ಪ್ರತಿನಿಧಿಸುತ್ತಿದ್ದ ಭರವಸೆಯ ಯುವ ಆಟಗಾರ ಶುಭಮ್ ಗೌತಮ್ (20) ಅವರು ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಬೆಂಗಳೂರಿನಲ್ಲಿ ನಡೆಯುತ್ತಿರುವ ಅಂಡರ್ 23 ಅಂತರ ವಲಯ ಕ್ರಿಕೆಟ್ ಟೂರ್ನಮೆಂಟ್ ಆಡಲು ಹುಬ್ಬಳ್ಳಿಯಿಂದ ಬೆಂಗಳೂರಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದರು.ಮಾರ್ಗಮಧ್ಯದಲ್ಲಿ ಗೌತಮ್ ಗೆ ಹೃದಯಾಘಾತವಾಗಿದೆ. ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದಾರೆ ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (ಕೆಎಸ್ ಸಿಎ) ನ ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರಿನ ಆದಿತ್ಯ ಗ್ಲೋಬಲ್ ಮೈದಾನದಲ್ಲಿ ಮಂಗಳವಾರ ಆರಂಭವಾದ ಮೈಸೂರು ವಿರುದ್ಧದ ಪಂದ್ಯದಲ್ಲಿ ಧಾರವಾಡ ವಲಯವನ್ನು ಪ್ರತಿನಿಧಿಸಲು ಬೆಂಗಳೂರಿಗೆ ಸಹ ಆಟಗಾರರ ಜತೆ ಬರುತ್ತಿದ್ದರು.