
ಭಾರತ ಸೆಮಿಫೈನಲ್ ನಲ್ಲಿ ನ್ಯೂಜಿಲ್ಯಾಂಡ್ ವಿರುದ್ದ ಸೋತಿತ್ತು
2019ರಲ್ಲಿ ನಡೆದ ವಿಶ್ವಕಪ್ ಕ್ರಿಕೆಟ್ ನಲ್ಲಿ ಭಾರತ ಸೆಮಿಫೈನಲ್ ನಲ್ಲಿ ನ್ಯೂಜಿಲ್ಯಾಂಡ್ ವಿರುದ್ದ ಸೋತಿತ್ತು. ಭಾರತದ ಬೌಲರ್ ಗಳು ಉತ್ತಮವಾಗಿ ನ್ಯೂಜಿಲ್ಯಾಂಡ್ ತಂಡವನ್ನು ನಿಯಂತ್ರಿಸಿ 239/8 ರನ್ನುಗಳನ್ನಷ್ಟೇ ಬಿಟ್ಟುಕೊಟ್ಟಿದ್ದರು. ಆದರೆ, ಈ ಸಾಧಾರಣ ಮೊತ್ತವನ್ನು ಟೀಂ ಇಂಡಿಯಾಗೆ ಚೇಸ್ ಮಾಡಲಾಗಲಿಲ್ಲ.

ಭಾರತದಲ್ಲಿರುವ ಪ್ರತಿಭಾವಂತ ಕ್ರಿಕೆಟಿಗರು
ದುಬೈ ಎಕ್ಸ್ ಪೋ 2020ರಲ್ಲಿ ಭಾಗವಹಿಸಿ ಮಾತನಾಡುತ್ತಿದ್ದ ಯುವರಾಜ್ ಸಿಂಗ್, "ಭಾರತದಲ್ಲಿರುವ ಪ್ರತಿಭಾವಂತ ಕ್ರಿಕೆಟಿಗರನ್ನು ನೋಡಿದರೆ, ಎಲ್ಲಾ ಅಂತರಾಷ್ಟ್ರೀಯ ಪ್ರಶಸ್ತಿಯನ್ನು ನಮ್ಮ ದೇಶವೇ ಗೆಲ್ಲಬೇಕು. ಆದರೆ, ಆರೀತಿ ಆಗದೇ ಇರುವುದು ವಿಷಾದನೀಯ" ಎಂದು ಹೇಳಿದ್ದಾರೆ.

ಬಿಸಿಸಿಐ ವಿರುದ್ದ ಕಿಡಿಕಾರಿದ ಯುವರಾಜ್ ಸಿಂಗ್
2019ರಲ್ಲಿ ವಿಶ್ವಕಪ್ ಗಾಗಿ ಭಾರತ ತಂಡದ ಪೂರ್ವತಯಾರಿ ಸ್ವಲ್ಪವೂ ಸರಿಯಿರಲಿಲ್ಲ ಎನ್ನುವುದು ನನ್ನ ಅಭಿಪ್ರಾಯ. ಬಿಸಿಸಿಐ ಮತ್ತು ಆಯ್ಕೆ ಸಮಿತಿ, ಕೆಲವೊಂದು ತಪ್ಪು ನಿರ್ಧಾರವನ್ನು ತೆಗೆದುಕೊಂಡಿತು. ಅದರ ಪ್ರತಿಫಲವೇ ವಿಶ್ವಕಪ್ ನಲ್ಲಿನ ಸೋಲು" ಎಂದು ಯುವರಾಜ್ ಸಿಂಗ್, ಬಿಸಿಸಿಐ ವಿರುದ್ದ ಕಿಡಿಕಾರಿದ್ದಾರೆ.

ಸೌರವ್ ದಾದಾ, ಬಿಸಿಸಿಐ ಅಧ್ಯಕ್ಷ
"ಆದರೆ ಈಗ ಪರಿಸ್ಥಿತಿ ಹಿಂದಿನಂತಿಲ್ಲ. ಸೌರವ್ ದಾದಾ, ಬಿಸಿಸಿಐ ಅಧ್ಯಕ್ಷರಾಗಿದ್ದಾರೆ. ಇವರ ಅವಧಿಯಲ್ಲಿ ಟೀಂ ಇಂಡಿಯಾದ ಸಾಧನೆ ಇನ್ನಷ್ಟು ಎತ್ತರಕ್ಕೆ ಏರಲಿದೆ. ಅಂತರಾಷ್ಟ್ರೀಯ ಪಂದ್ಯಗಳಲ್ಲಿ ಟೀಂ ಇಂಡಿಯಾ ಉತ್ತಮ ಸಾಧನೆಯನ್ನು ಮಾಡಲಿದೆ ಎನ್ನುವ ವಿಶ್ವಾಸ ನನಗಿದೆ" ಎಂದು ಯುವರಾಜ್ ಸಿಂಗ್ ಹೇಳಿದ್ದಾರೆ.


Click it and Unblock the Notifications
