ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಕ್ಯಾನ್ಸರ್ ಪೀಡಿತರಿಗೆ ಇನಿಂಗ್ಸ್ ಡೆಡಿಕೇಟ್ ಮಾಡಿದ ಯುವರಾಜ್

ಭಾನುವಾರ (ಜೂನ್ 4) ನಡೆದ ಭಾರತ- ಪಾಕಿಸ್ತಾನ ನಡುವಿನ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಪಂದ್ಯದಲ್ಲಿನ ತಮ್ಮ ಇನಿಂಗ್ಸ್ ಅನ್ನು ಕ್ಯಾನ್ಸರ್ ಪೀಡಿತರಿಗೆ ಸಮರ್ಪಿಸಿದ ಬ್ಯಾಟ್ಸ್ ಮನ್ ಯುವರಾಜ್ ಸಿಂಗ್.

ಬರ್ಮಿಂಗ್ ಹ್ಯಾಮ್, ಜೂನ್ 5: ನಡೆದ ಭಾರತ, ಪಾಕಿಸ್ತಾನ ಕ್ರಿಕೆಟ್ ತಂಡಗಳ ನಡುವಿನ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯಲ್ಲಿ ತಾವು ನೀಡಿದ ಅದ್ಭುತ ಪ್ರದರ್ಶನವನ್ನು ಖ್ಯಾತ ಕ್ರಿಕೆಟಿಗ ಯುವರಾಜ್ ಸಿಂಗ್ ಅವರು, ಕ್ಯಾನ್ಸರ್ ಪೀಡಿತರಿಗೆ ಸಮರ್ಪಿಸಿದ್ದಾರೆ. ಅಲ್ಲದೆ, ಪಂದ್ಯದ ಹಿಂದಿನ ದಿನವೇ ಲಂಡನ್ ನಲ್ಲಿ ನಡೆದ ಉಗ್ರರ ದಾಳಿಗೆ ಬಲಿಯಾದ ಏಳು ಮಂದಿಯ ಆತ್ಮಕ್ಕೆ ಶಾಂತಿಯನ್ನೂ ಅವರು ಕೋರಿದ್ದಾರೆ.

ಭಾನುವಾರ ಇಲ್ಲಿನ ಎಡ್ಗ್ ಬಾಸ್ಟನ್ ಕ್ರೀಡಾಂಗಣದಲ್ಲಿ ನಡೆದಿದ್ದ ಪಂದ್ಯದಲ್ಲಿ ಭಾರತ, ಪಾಕಿಸ್ತಾನವನ್ನು 124 ರನ್ ಗಳ ಅಂತರದಲ್ಲಿ ಸೋಲಿಸಿತು. ಈ ಪಂದ್ಯದಲ್ಲಿ ಉತ್ತಮವಾಗಿ ಆಡಿದ್ದ ಯುವರಾಜ್ ಸಿಂಗ್ ಅವರು, 32 ಎಸೆತಗಳಲ್ಲಿ 8 ಬೌಂಡರಿ, 1 ಸಿಕ್ಸರ್ ಸಹಿತ 53 ರನ್ ಪೇರಿಸುವ ಮೂಲಕ ಭಾರತ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.[In Pics : ಪಾಕ್ ವಿರುದ್ಧ ಜಯದ ನಗೆ ಬೀರಿದ ಭಾರತ]

Yuvraj Singh dedicates innings to cancer survivors, London attack victims

ತಮ್ಮ ಈ ಉತ್ತಮ ಇನಿಂಗ್ಸ್ ಅನ್ನು ಯುವರಾಜ್ ಸಿಂಗ್ ಅವರು ಕ್ಯಾನ್ಸರ್ ಪೀಡಿತರಿಗೆ ಸಮರ್ಪಿಸಿರುವುದಾಗಿ ಅವರು ಟ್ವಿಟರ್ ನಲ್ಲಿ ಹೇಳಿಕೊಂಡಿದ್ದಾರೆ. ಯುವರಾಜ್ ಸಿಂಗ್ ಕೂಡಾ ಕ್ಯಾನ್ಸರ್ ಪೀಡಿತರಾಗಿದ್ದರು. ಇದೀಗ ಅವರು, ಕ್ಯಾನ್ಸರ್ ನಿಂದ ಗುಣಮುಖರಾಗಿದ್ದು, ಕ್ಯಾನ್ಸರ್ ಪೀಡಿತರಿಗೆ ನೆರವಾಗುವ ಉದ್ದೇಶದಿಂದ ಸಂಸ್ಥೆಯೊಂದನ್ನೂ ಸ್ಥಾಪಿಸಿದ್ದಾರೆ.

Story first published: Wednesday, January 3, 2018, 10:05 [IST]
Other articles published on Jan 3, 2018
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X