
ಯುವರಾಜ್ ಸಿಂಗ್ ಕುಟುಂಬದ ಬಗ್ಗೆ ಆರೋಪ
ಯುವರಾಜ್ ತಾಯಿ ಶಬನಮ್ ಸಿಂಗ್ ಅವರು ನಿಮಗೆ ಯಾವ ರೀತಿ ಕಿರುಕುಳ ನೀಡುತ್ತಿದ್ದರು ಎಂದು ಪ್ರಶ್ನಿಸಿದ್ದಕ್ಕೆ ಉತ್ತರಿಸಿದ ಅವರು " ಮನೆಯಲ್ಲಿ ಮಹಿಳೆಯರಿಗೆ ಕಿರುಕುಳ ನೀಡುವುದು ಸಾಮಾನ್ಯ ಸಂಗತಿ, ಕಿರುಕುಳದ ಭಾಗವಾಗಿ ನನ್ನ ಪತಿಯೊಂದಿಗೆ ಗಾಂಜಾ ಸೇವನೆ ಮಡಬೇಕಿತ್ತು" ಎಂದು ಆಕಾಂಕ್ಷ ಹೇಳಿದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಯುವಿ ತಾಯಿ
ಈ ಬಗ್ಗೆ ಪ್ರತಿಕ್ರಿಯಿಸಿದ ಯುವರಾಜ್ ಸಿಂಗ್ ತಾಯಿ ಶಬನಮ್ ಸಿಂಗ್, ವಿಚ್ಛೇದನ ವಿಷಯ ಸದ್ಯ ಕೋರ್ಟಿನಲ್ಲಿದೆ. ಈ ವಿಷಯವಾಗಿ ಆಕೆ ಹೇಗೆ ಮಾತನಾಡಬಲ್ಲಳು. ನ್ಯಾಯಾಂಗ ನಿಂದನೆಯಾಗುವುದಿಲ್ಲವೇ. ನಮ್ಮನ್ನು ಹೇಳಲು ಸಾಕಷ್ಟು ವಿಷಯವಿದೆ. ಆದರೆ, ಕೆಸರೆರೆಚಾಟದಲ್ಲಿ ತೊಡಗಲು ನನಗಿಷ್ಟವಿಲ್ಲ. ಆಕೆ ಕೂಡಾ ಒಬ್ಬರ ಮಗಳು ಎಂಬುದನ್ನು ಮರೆಯದಿರಲಿ ಎಂದಿದ್ದಾರೆ.

ಇನ್ನೂ ವಿವಾಹ ವಿಚ್ಛೇದನ ಸಿಕ್ಕಿಲ್ಲ
ಬಿಗ್ ಬಾಸ್ ನಲ್ಲಿ ಸಹ ಸ್ಪರ್ಧಿ ಗೌರವ್ ಜತೆ ಮಾತನಾಡುವ ಸಂದರ್ಭದಲ್ಲಿ ಆಕಾಂಕ್ಷಾ ಅವರ ಉಗುರಿನ ಬಣ್ಣವನ್ನು ಗೌರವ್ ತೆಗೆಯುತ್ತಿದ್ದರು. ತನ್ನ ಮದುವೆ, ಸಂಸಾರದ ಬಗ್ಗೆ ಆಕಾಂಕ್ಷಾ ಹೇಳಿಕೊಂಡರು. ವಿವಾಹ ವಿಚ್ಛೇದನ ಇನ್ನೂ ಸಿಕ್ಕಿಲ್ಲ. ಈ ಶೋನಲ್ಲಿ ನನ್ನ ನೋವನ್ನು ತೋಡಿಕೊಂಡಿದ್ದೇನೆ. ನನಗೆ ಒಳ್ಳೆ ಬದುಕು ಸಿಗುವ ನಿರೀಕ್ಷೆಯಿದೆ ಎಂದಿದ್ದರು. ಆದರೆ, ಆಕೆಗೆ ಇನ್ನೂ ವಿವಾಹ ವಿಚ್ಛೇದನ ಸಿಕ್ಕಿಲ್ಲ. ಈಗ ಬಿಗ್ ಬಾಸ್ ನಿಂದಲೂ ಔಟ್ ಆಗಿದ್ದಾರೆ.

ಯೋಗರಾಜ್ ಪ್ರತಿಕ್ರಿಯೆ ನೀಡಿದ್ದೇನು?
ಆಕೆಗೆ ತನ್ನ ವೈಯಕ್ತಿಕ ಬದುಕು ಸರಿ ಪಡಿಸಿಕೊಳ್ಳುವುದು ಬೇಕಿಲ್ಲ. ಇಲ್ಲಸಲ್ಲದ ಆರೋಪ ಮಾಡುವುದೇ ಕಸುಬಾಗಿದೆ. ತನ್ನ ಸಂಸಾರವನ್ನು ಉಳಿಸಿಕೊಳ್ಳಲು ಪ್ರಯತ್ನ ಪಡದೇ ಅನ್ಯರ ಮೇಲೆ ದೂಷಣೆ ಮಾಡುವುದರಲ್ಲಿ ಅರ್ಥವಿಲ್ಲ. ಆಕೆ ಮಾತಿಗೆ ಬೆಲೆ ಕೊಡಬೇಕಾಗಿಲ್ಲ ಎಂದು ಮಾಜಿ ಆಟಗಾರ ಯೋಗರಾಜ್ ಸಿಂಗ್ ಹೇಳಿದ್ದಾರೆ.


Click it and Unblock the Notifications











